ಕೃಷಿ ಭೂಮಿಗೆ ನುಗ್ಗಿದ ನೀರು, ಬಾವಿ ನೀರು ಕಲುಷಿತ : ಪ್ರಯೋಜನಕ್ಕಿಂತ ನಷ್ಟವೇ ಹೆಚ್ಚು


Team Udayavani, Feb 15, 2022, 9:30 AM IST

ಕೃಷಿ ಭೂಮಿಗೆ ನುಗ್ಗಿದ ನೀರು, ಬಾವಿ ನೀರು ಕಲುಷಿತ : ಪ್ರಯೋಜನಕ್ಕಿಂತ ನಷ್ಟವೇ ಹೆಚ್ಚು

ಬೈಂದೂರು : ಜನಪ್ರತಿನಿಧಿಗಳು, ಸರಕಾರ, ಇಲಾಖೆ ಒಂದು ಮಹತ್ತರ ಉದ್ದೇಶದಿಂದ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತದೆ. ಮಾತ್ರವಲ್ಲದೆ ಸರಕಾರದ ಮಟ್ಟದಲ್ಲಿ ಪರಿಶ್ರಮಪಟ್ಟು ಅನುದಾನ ದೊರಕಿಸಿಕೊಡುತ್ತದೆ. ಆದರೆ ಯೋಜನೆಯ ರೂಪುರೇಷೆ ನಿರ್ಮಿಸಬೇಕಾದ ಅಧಿಕಾರಿ ಗಳು ಗುತ್ತಿಗೆದಾರರ ಅಥವಾ ಸ್ಥಳೀಯ ರಾಜಕಾರಣಿಗಳ ಕೈಗೊಂಬೆಯಾದಾಗ ಹತ್ತಾರು ವರ್ಷ ಉಪಯೋಗವಾಗಬೇಕಾದ ಯೋಜನೆಗಳು ವರ್ಷದಲ್ಲೇ ಜನರಿಂದ ಹಿಡಿಶಾಪ ಹಾಕಲ್ಪಡುತ್ತದೆ. ಅದಕ್ಕೆ ಉದಾ ಹರಣೆಯಾಗಿ ಶಿರೂರು ಮೊಗೇರ ಹೊಳೆಗೆ ನಿರ್ಮಿಸಿದ ಕಿಂಡಿ ಅಣೆಕಟ್ಟು ಒಂದು ವರ್ಷ ಪೂರ್ಣಗೊಳ್ಳುವುದರ ಒಳಗೆ ಕೃಷಿಕರ ಬದುಕನ್ನು ಕಸಿದುಕೊಂಡು ಬಿಟ್ಟಿದೆ.

ಅಧಿಕಾರಿಗಳ ನಿರ್ಲಕ್ಷ್ಯ
ಪ್ರತೀ ಯೋಜನೆಗಳು ಇಲಾಖೆಯ ಅಧಿಕಾರಿಗಳು ತೊಡಗಿಸಿಕೊಳ್ಳುವುದರ ಮೇಲೆ ಅವಲಂಬಿತ ವಾಗಿರುತ್ತದೆ. ಇತ್ತೀಚೆಗೆ ಬಹುತೇಕ ನೀರಾವರಿ ಯೋಜನೆಗಳ ಸ್ಥಳ ಗುರುತು ಮಾಡಲು ನೀಲನಕ್ಷೆ ನಿರ್ಮಿಸಲು ಎಂಜಿನಿಯರ್‌ಗಳು ಗುತ್ತಿಗೆದಾರರ ಕಾರಿನಲ್ಲಿ ಬಂದು ಅವರ ಆಣತಿಯಂತೆ ಯೋಜನೆ ರೂಪಿಸುತ್ತಾರೆ. ಹೊರತುಪಡಿಸಿದರೆ ಸ್ಥಳೀಯ ಜನರ ಅಭಿಪ್ರಾಯಗಳನ್ನು ಕಲೆ ಹಾಕುವುದಿಲ್ಲ. 2021ರ ಸಾಲಿನಲ್ಲಿ ಪಶ್ಚಿಮವಾಹಿನಿ ಯೋಜನೆಯಡಿ ಸಣ್ಣ ನೀರಾವರಿ ಇಲಾಖೆಯಿಂದ ಉಡುಪಿ ಜಿಲ್ಲಾ ಬೈಂದೂರು ವಿಧಾನಸಭೆ ಕ್ಷೇತ್ರದ ಶಿರೂರು ಮೊಗೇರ ಹೊಳೆಗೆ 2.90 ಕೋ.ರೂ. ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದೆ. ಸೇತುವೆ ನಿರ್ಮಾಣವಾಗುವ ಮುಂಚೆ 3 ಬಾರಿ ಸ್ಥಳ ಬದಲಿಸಲಾಗಿದೆ. ಇದರಿಂದಾಗಿ ನೂರಾರು ಎಕರೆ ಕೃಷಿ ಭೂಮಿಗೆ ಅನುಕೂಲ ವಾಗಬೇಕಾದ ಯೋಜನೆ ಒಂದೆರಡು ಜನರ ತೋಟಕ್ಕೆ ನೀರುಣಿಸುವ ಯೋಜನೆಯಾಗಿ ಮಾರ್ಪಟ್ಟಿದೆ ಮತ್ತು ಸರಕಾರದ ಹಣ ವನ್ನು ವ್ಯಯಿಸುವ ಯೋಜನೆಯಂತಾಗಿದೆ ಎಂಬುದು ಸ್ಥಳೀ ಯರ ಆರೋಪವಾಗಿದೆ.

ತರಾತುರಿಯಲ್ಲಿ ಕಾಮಗಾರಿ
ಬಹುನಿರೀಕ್ಷಿತ ಈ ಯೋಜನೆ ಒಂದೆರಡು ತಿಂಗಳಲ್ಲಿ ಪೂರ್ಣಗೊಂಡಿದೆ. ಅಸಮರ್ಪಕ ಜಾಗದಲ್ಲಿ ನಿರ್ಮಾಣವಾದುದರಿಂದ ಮೊದಲ ಮಳೆಗಾಲದಲ್ಲಿ ಹತ್ತಾರು ಎಕರೆ ಕೃಷಿಭೂಮಿ ನೀರಿನಿಂದಾವೃತಗೊಂಡಿದೆ. ಮಾತ್ರವಲ್ಲದೆ ನಿರೋಡಿ, ಮುದ್ರಮಕ್ಕಿ ಮುಂತಾದ ಕಡೆಗಳಲ್ಲಿ ಹಲವು ವರ್ಷದಿಂದ ಸಿಹಿ ನೀರು ಹೊಂದಿದ್ದು ಬಾವಿ ನೀರು ಈಗ ಕೆಸರುಮಯವಾಗಿದೆ. ಸುಗ್ಗಿ ಮಾಡಬೇಕಾದ ರೈತರು ಸೇತುವೆ ನಿರ್ಮಾಣದಿಂದ ಕೃಷಿಯನ್ನೇ ಕೈಬಿಡುವಂತಾಗಿದೆ. ಮಾತ್ರವಲ್ಲದೆ ಕಾಮಗಾರಿ ಕೂಡ ಇಲಾಖಾ ಅಧಿಕಾರಿ ಗಳಿಂದ ಪರಿಶೀಲನೆಯಾಗ ದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೊಗೇರ ಹೊಳೆ ಸೇತುವೆ ಇಲಾಖೆಯ ಅನುದಾನವನ್ನು ವ್ಯಯಿಸಲು ಸಿದ್ಧಪಡಿಸಿದ ಯೋಜನೆ ಯಂತಾಗಿರುವುದು ದೌರ್ಭಾಗ್ಯವೇ ಸರಿ, ಕನಿಷ್ಠ ಪಕ್ಷ ಎರಡು ಕಡೆ ಸೈಡ್‌ ವಾಲ್‌ ನಿರ್ಮಾಣವಾದರೆ ಒಂದಿಷ್ಟು ಅನುಕೂಲವಾಗುತ್ತದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.

ಬಾವಿ ನೀರು ಕಪ್ಪು ಬಣ್ಣಕ್ಕೆ
ಕೃಷಿ ಹಾಗೂ ವ್ಯರ್ಥವಾಗಿ ಸಮುದ್ರಕ್ಕೆ ನೀರು ಹರಿಯುವುದನ್ನು ತಡೆಯಲು ಸರಕಾರ ರೂಪಿಸಿದ ಉತ್ತಮ ಯೋಜನೆಯಾಗಿದೆ. ಬೇಸಗೆಯಲ್ಲಿ ಕಟ್ಟ ಹಾಕುವುದರಿಂದ ನೀರಿನ ಪ್ರಮಾಣ ಅಧಿಕವಾಗಿ ಬಾವಿ ನೀರು ಕಪ್ಪು ಬಣ್ಣಕ್ಕೆ ತಿರುಗುತ್ತದೆ ಮತ್ತು ಕೃಷಿ ಭೂಮಿಗೆ ನೀರು ನುಗ್ಗದಂತೆ ಇಲಾಖೆ ಯೋಜನೆ ರೂಪಿಸಬೇಕು. -ರವೀಂದ್ರ ಶೆಟ್ಟಿ, ಉಪಾಧ್ಯಕ್ಷರು, ಗ್ರಾ.ಪಂ. ಶಿರೂರು

ಸ್ಥಳೀಯರ ಅಭಿಪ್ರಾಯ ಕೇಳಿಲ್ಲ
ನಿರ್ಮಾಣ ಸಮಯದಲ್ಲಿ ಸಾರ್ವಜನಿಕರು ಮತ್ತು ಸ್ಥಳೀಯರ ಅಭಿಪ್ರಾಯ ಪಡೆಯದಿರುವುದು ಹಾಗೂ ಅವೈಜ್ಞಾನಿಕ ಯೋಜನೆಯಿಂದ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕಿದೆ.

– ಲಿಂಗಪ್ಪ ಮೇಸ್ತ, ಸ್ಥಳೀಯ ಗ್ರಾ.ಪಂ. ಸದಸ್ಯರು.

– ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.