ನೀರಿನ ಬಿಲ್ ವಸೂಲಿಯಲ್ಲಿ ನಗರಸಭೆ ಸಿಬ್ಬಂದಿ ನಿರ್ಲಕ್ಷ ; 5.32 ಕೋಟಿ ನೀರಿನ ತೆರಿಗೆ ಬಾಕಿ


Team Udayavani, Aug 20, 2020, 3:26 PM IST

ನೀರಿನ ಬಿಲ್ ವಸೂಲಿಯಲ್ಲಿ ನಗರಸಭೆ ಸಿಬ್ಬಂದಿ ನಿರ್ಲಕ್ಷ ; 5.32 ಕೋಟಿ ನೀರಿನ ತೆರಿಗೆ ಬಾಕಿ

ಹಾವೇರಿ: ನೀರಿನ ಕರ ವಸೂಲಿ ಮಾಡುವಲ್ಲಿ ಸ್ಥಳೀಯ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ನೀರಿನ ಕರ ಬಾಕಿ ಉಳಿಯುತ್ತಲೇ ಬರುತ್ತಿದೆ. ಅಲ್ಲದೇ, ಕೋವಿಡ್ ಹಿನ್ನೆಲೆಯಲ್ಲಿ ಜನರು ತೆರಿಗೆ ಕಟ್ಟಲು ಹಿಂದೇಟು ಹಾಕಿದ್ದರಿಂದ ಸ್ಥಳೀಯ ನಗರಸಭೆಗೆ 5.32 ಕೋಟಿ ರೂ. ನೀರಿನ ತೆರಿಗೆ ಬಾಕಿ ಉಳಿದಿದೆ. ಇದರಿಂದಾಗಿ ಇತರೆ ಅಭಿವೃದ್ಧಿ
ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ. ನಗರಸಭೆ ಸಿಬ್ಬಂದಿ ಪ್ರತಿವರ್ಷ ಕಾಟಾಚಾರಕ್ಕೆ ಒಂದಿಷ್ಟು ಕರ ವಸೂಲಿ ಮಾಡಿ ಕೈ ತೊಳೆದುಕೊಳ್ಳುವ ಪ್ರವೃತ್ತಿ ಮುಂದುವರೆಸುತ್ತಿದ್ದು, ಇದರಿಂದಾಗಿ ನಗರಸಭೆಗೆ ಭಾರಿ ಪ್ರಮಾಣದಲ್ಲಿ ನೀರಿನ ಕರ ವಸೂಲಿಯಾಗದೇ ಬಾಕಿ ಉಳಿದಿದೆ. ಕಳೆದ ಐದಾರು ತಿಂಗಳಿನಿಂದ ಕೋವಿಡ್ ಹಿನ್ನೆಲೆಯಲ್ಲಿ ನಗರಸಭೆ ಸಿಬ್ಬಂದಿ ಕರ ವಸೂಲಿಗೆ
ಮುಂದಾಗಿಲ್ಲ. ಅಲ್ಲದೇ, ಆರ್ಥಿಕ ಪರಿಸ್ಥಿತಿ ಹದಿಗೆಟ್ಟ ಹಿನ್ನೆಲೆಯಲ್ಲಿ ಬಹುತೇಕ ಜನರು ನೀರಿನ ತೆರಿಗೆ ಪಾವತಿಗೆ ಹಿಂದೇಟು ಹಾಕಿದ್ದರಿಂದ ನಿಯಮಿತವಾಗಿ ತೆರಿಗೆ ವಸೂಲಿಯಾಗದೇ ಬಾಕಿ ಉಳಿಯುತ್ತಿದೆ.

ಜಿಲ್ಲಾ ಕೇಂದ್ರವಾಗಿರುವ ನಗರಸಭೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳಿದ್ದು, ಸುಮಾರು ಎಂಟು ಸಾವಿರಕ್ಕೂ ಹೆಚ್ಚು ನಳದ ಸಂಪರ್ಕ ನೀಡಲಾಗಿದೆ. ನಗರದಲ್ಲಿ ಕಳೆದ ಎರಡು ವರ್ಷಗಳ ಹಿಂದೆಯೇ 24×7 ನೀರಿನ ಸಂಪರ್ಕ ನೀಡುವ ಕಾರ್ಯ ಆರಂಭಗೊಂಡಿದ್ದು, ಈಗಾಗಲೇ ನೀಡಿರುವ ನೀರಿನ ಸಂಪರ್ಕ ಕಡಿತಗೊಳಿಸಿ ಹಂತ ಹಂತವಾಗಿ 24×7 ನೀರಿನ ಸಂಪರ್ಕ ನೀಡಲಾಗುತ್ತಿದೆ. ಆದರೆ, ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇನ್ನೂ ಕೂಡ 24×7 ನೀರಿನ ಯೋಜನೆಗೆ ಚಾಲನೆ ದೊರಕಿಲ್ಲ.

ಆದರೆ, ಸದ್ಯ 24×7 ನೀರಿನ ಸಂಪರ್ಕ ನೀಡುವ ಕಾರ್ಯ ಕೆಲವೊಂದು ಬಡಾವಣೆಗಳಲ್ಲಿ ಪ್ರಗತಿಯಲ್ಲಿದ್ದು, ಇದರ ಸಂಪರ್ಕ ಪಡೆಯುತ್ತಿರುವ ನಿವಾಸಿಗಳು ಹಿಂದಿನ ಬಾಕಿ ಉಳಿಸಿಕೊಳ್ಳುತ್ತಿದ್ದಾರೆ. ಅಲ್ಲದೇ, ಕೆಲವು ಬಡವಾವಣೆಗಳಲ್ಲಿ ನೀರು
ಸಮರ್ಪಕವಾಗಿ ಸರಬರಾಜು ಆಗದ ಕಾರಣ ಜನರು ತೆರಿಗೆ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಮಾತುಗಳು ಹೇಳಿ ಬಂದಿವೆ.

ತೆರಿಗೆ ಹಣ ಸಕಾಲಕ್ಕೆ ಬಂದರೆ ಅದನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಆದರೆ ಸ್ಥಳೀಯ ನಗರಸಭೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ನೀರಿನ ಕರ ವಸೂಲಿಯಾಗದೇ 5.32 ಕೋಟಿ ರೂ. ಬಾಕಿ ಉಳಿದಿದೆ. ಇಲ್ಲಿಯ ವರೆಗೆ 50.90 ಲಕ್ಷ ರೂ. ಮಾತ್ರ ತೆರಿಗೆ ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದ್ದು, ಶೇ.8.72 ರಷ್ಟು ತೆರಿಗೆ ವಸೂಲಿಯಾಗಿದೆ. ಈ ಬಗ್ಗೆ ನಗರಸಭೆ ಅಧಿ ಕಾರಿಗಳು ಸೂಕ್ತ ಕ್ರಮ ವಹಿಸಬೇಕಿದೆ. ಇನ್ನು ಸ್ವಯಂಘೋಷಿತ ತೆರಿಗೆ (ಎಸ್‌ಎಎಸ್‌)
ವಸೂಲಿಯಲ್ಲಿ ಸ್ಥಳೀಯ ನಗರಸಭೆ ಶೇ.62.29 ರಷ್ಟು ಸಾಧನೆ ತೋರಿದ್ದು ಸ್ವಲ್ಪ ಸಮಾಧಾನ ತಂದಿದೆ.

ಇಲ್ಲಿಯವರೆಗೆ ಬಾಕಿ ಇದ್ದ 3.32 ಕೋಟಿ ರೂ. ತೆರಿಗೆ ಹಣದಲ್ಲಿ 1.86 ಕೋಟಿ ರೂ. ವಸೂಲಿಯಾಗಿದೆ. ಇನ್ನೂ 1.25 ಕೋಟಿ ರೂ. ಬಾಕಿ ಉಳಿದಿದೆ. ನಗರಸಭೆಯ 31 ವಾರ್ಡ್‌ಗಳಿಗೆ ಚುನಾವಣೆ ನಡೆದು ಎರಡು ವರ್ಷ ಕಳೆದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ಗೊಂದಲ ಹಿನ್ನೆಲೆಯಲ್ಲಿ ಚುನಾಯಿತ ಸದಸ್ಯರಿಗೆ ಯಾವುದೇ ಅಧಿ ಕಾರವಿಲ್ಲದೇ ನಾಮಕಾವಸ್ತೆ ಎಂಬಂತಾಗಿದೆ. ಪೌರಾಯುಕ್ತರು, ಅಧಿಕಾರಿಗಳು ಇದ್ದರೂ ಕೂಡ ದೈನಂದಿನ ಕರ್ತವ್ಯದ ಹೊರತಾಗಿ ವಿಶೇಷವಾಗಿ ಅಭಿವೃದ್ಧಿಯತ್ತ ಗಮನ
ಹರಿಸಲು ಸಾಧ್ಯವಾಗುತ್ತಿಲ್ಲ. ಜನರು ಸಮಸ್ಯೆ ಹೊತ್ತು ನಗರಸಭೆಗೆ ಬಂದರೆ ಸ್ಪಂದಿಸುವವರೇ ಇಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

– ವೀರೇಶ ಮಡ್ಲುರ

 

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.