ಧಾರ್ಮಿಕ ಕ್ಷೇತ್ರಗಳಲ್ಲಿ ನೀರಿನ ಕೊರತೆ


Team Udayavani, May 19, 2019, 3:09 AM IST

dharmuka

ಬೆಳ್ತಂಗಡಿ: ಬರದಿಂದ ಎಲ್ಲೆಡೆ ನೀರಿನ ಅಭಾವ ಸೃಷ್ಟಿಯಾಗಿರುವ ನಡುವೆಯೇ ಬೇಸಿಗೆ ರಜೆಯೂ ಬಂದಿರುವುದರಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ನೀರಿನ ಅಭಾವ ಸೃಷ್ಟಿಯಾಗಿದೆ. ಕಳೆದ 20 ವರ್ಷಗಳ ಅವಧಿಯಲ್ಲೇ ಮೊದಲ ಬಾರಿಗೆ ನೇತ್ರಾವತಿಯ ಉಪ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಧರ್ಮಸ್ಥಳ ಕ್ಷೇತ್ರದಲ್ಲೂ ಕೊಂಚ ನೀರಿನ ಕೊರತೆ ತಲೆದೋರಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದರು. ಮಕ್ಕಳೊಂದಿಗೆ ಕ್ಷೇತ್ರ ದರ್ಶನ ಪಡೆಯಲು ಬರುವ ಭಕ್ತರು ಬಿಸಿಲಿನ ಧಗೆಯಿಂದ ವಿಪರೀತ ತೊಂದರೆಗೊಳಗಾಗುತ್ತಿದ್ದಾರೆ. ಕ್ಷೇತ್ರದಿಂದ ಭಕ್ತರಿಗೆ ನೀಡುವ ಅನುಕೂಲಗಳಲ್ಲಿ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಸಾಧ್ಯವಾದರೆ ಪ್ರವಾಸಿಗರು ಕೆಲವು ವಾರಗಳ ಕಾಲ ಕ್ಷೇತ್ರ ದ‌ರ್ಶನ ಮುಂದೂಡಿ ಎಂದು ವಿನಂತಿಸಿದ್ದೇನೆ ಎಂದರು.

ಇಡೀ ರಾಜ್ಯದಲ್ಲಿ ಬರದ ಲಕ್ಷಣವಿದ್ದು, ನೀರಿನ ಕೊರತೆಯಿದೆ. ಭಕ್ತರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಪ್ರಕೃತಿಯನ್ನು ಮೀರುವ ಶಕ್ತಿ ನಮ್ಮಲ್ಲಿಲ್ಲ. ಇದನ್ನರಿತು ಎಲ್ಲರೂ ಸಹಕರಿಸಬೇಕಾಗಿದೆ. ನೀರಿನ ಅಭಾವ ಈ ಹಿಂದೆಯೂ ಆಗಿದೆ. ಇದು ಹೊಸ ಅನುಭವವಲ್ಲ. ಕೃಷಿಗೆ ಹೆಚ್ಚು ನೀರು ಬಳಕೆ, ನೀರಿನ ಒಳ ಹರಿವು ಕಡಿಮೆಯಾಗಿರುವುದರಿಂದ ನೀರಿನ ಬಳಕೆ ಜಾಸ್ತಿಯಾಗುತ್ತಿದೆ.

ಪ್ರಕೃತಿ ಮತ್ತು ಜನಜೀವನದ ನಡುವೆ ಸಣ್ಣ ಪೈಪೋಟಿ ನಡೆಯುತ್ತಿದೆ. ನೀರಿನ ಅವಶ್ಯಕತೆ ಮತ್ತು ಕೊರತೆ ಎರಡೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ವರ್ಷಗಳಲ್ಲಿ 3 ತಿಂಗಳ ಹಿಂದೆಯೇ ನೀರಿನ ಬಳಕೆಯಲ್ಲಿ ಜಾಗರೂಕರಾಗಬೇಕು. ದೊಡ್ಡಮಟ್ಟದ ಕೃಷಿಕರು ಹನಿ ನೀರಾವರಿ, ಒಡ್ಡು ನಿರ್ಮಾಣದ ಮೂಲಕ ನೀರಿನ ಬಳಕೆಯನ್ನು ಹತೋಟಿಯಲ್ಲಿಡುವಂತೆ ಸಲಹೆ ನೀಡಿದರು.

32 ಲಕ್ಷ ಲೀ.ನೀರಿನ ಅಗತ್ಯ: ಧರ್ಮಸ್ಥಳದಲ್ಲಿ ವಸತಿ ಗೃಹ, ಅಡುಗೆಗೆ, ಸಾರ್ವಜನಿಕ ಶೌಚಾಲಯ ಸೇರಿದಂತೆ ನಿತ್ಯ ಬಳಕೆಗೆ ಸಾಮಾನ್ಯವಾಗಿ ಪ್ರತಿ ನಿತ್ಯ 25ರಿಂದ 28 ಲಕ್ಷ ಲೀ.ನೀರು ಅಗತ್ಯವಿದೆ. ಆದರೆ, ಪ್ರಸ್ತುತ 32 ಲಕ್ಷ ಲೀ.ನೀರಿನ ಬೇಡಿಕೆ ಇದೆ. ನೇತ್ರಾವತಿ ಸ್ನಾನಘಟ್ಟದ ಬಳಿ ಕಿಂಡಿ ಅಣೆಕಟ್ಟಿನಿಂದ ನೀರು ಬಳಸಲಾಗುತ್ತಿದ್ದು, 4 ಕೊಳವೆ ಬಾವಿಗಳನ್ನು ಆಶ್ರಯಿಸಲಾಗಿದೆ. ಈಗಾಗಲೇ ವಸತಿಗೃಹ ಸೇರಿದಂತೆ ಅವಶ್ಯ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಲಾಗಿದೆ ಎಂದು ತಿಳಿಸಲಾಗಿದೆ.

ಶನಿವಾರ ಬಂದರು 30-35 ಸಾವಿರ ಭಕ್ತರು: ಕ್ಷೇತ್ರದಲ್ಲಿ ಶನಿವಾರ 30ರಿಂದ 35 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಮೇ 19 ಭಾನುವಾರ ರಜೆಯಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಡಾ| ಹೆಗ್ಗಡೆ ಅವರು ಮನವಿ ಮಾಡಿರುವ ವಿಚಾರವಾಗಿ ಭಕ್ತರು ದೇವಸ್ಥಾನಕ್ಕೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ಈ ಕುರಿತು ಕ್ಷೇತ್ರದ ವತಿಯಿಂದ ಈಗಾಗಲೇ ಮುಂಗಡವಾಗಿ ದಿನಾಂಕ ನಿಗದಿ ಮಾಡುವ ಭಕ್ತರಿಗೆ ನೀರಿನ ಅಭಾವ ಮತ್ತು ಮಿತ ಬಳಕೆ ಕುರಿತು ಸೂಚನೆ ನೀಡಲಾಗುತ್ತಿದೆ.

ನಮಗೆ ಘಟ್ಟದ ಭಾಗದಿಂದ ನೀರು ಹರಿದು ಬರಬೇಕು. ಆದರೆ, ಅಲ್ಲಿ ಮಳೆಯಾಗದ ಕಾರಣ ನೀರಿಲ್ಲ. ಕಿಂಡಿ ಅಣೆಕಟ್ಟಿನಿಂದಾಗಿ ತೀರ್ಥಕ್ಕೆ ಮತ್ತು ಅಭಿಷೇಕಕ್ಕೆ ನೀರಿದೆ. ತೀರ್ಥ ಗುಂಡಿಯಲ್ಲಿ ನಾಲ್ಕು ಅಡಿ ನೀರು ಕಡಿಮೆಯಾಗಿದೆ. ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರುವುದಿಲ್ಲ ಎಂಬ ಸೂಚನೆ ಕೊಟ್ಟಿದೆ. ಹೀಗಾಗಿ, ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ. ಸರಕಾರ ಮತ್ತು ಜಲತಜ್ಞರು ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು.
-ಡಾ| ಡಿ.ವೀರೇಂದ್ರ ಹೆಗ್ಗಡೆ, ಧರ್ಮಧಿಕಾರಿಗಳು

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.