ಕೋವಿಡ್-19 ಪರಿಣಾಮ ಕಾರ್ಖಾನೆಗಳಿಗೆ ಬೀಗ’: ಶುಭ್ರಳಾಗಿ ಹರಿಯುತ್ತಿದ್ದಾಳೆ ಗಂಗೆ
Team Udayavani, Apr 5, 2020, 4:30 PM IST
ಹರಿದ್ವಾರ (ಉತ್ತರಾಖಂಡ): ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ದೇಶದಲ್ಲಿ ಕ್ಷಿಪ್ರಗತಿಯಲ್ಲಿ ಏರುತ್ತಿದೆ. ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಗೆ ಆದೇಶಿಸಲಾಗಿದೆ. ಎಪ್ರಿಲ್ 14ರವರೆಗೆ ದೇಶವ್ಯಾಪಿ ಲಾಕ್ ಡೌನ್ ಮುಂದುವರಿಯಲಿದೆ.
ದೇಶವ್ಯಾಪಿ ಲಾಕ್ ಡೌನ್ ಇರುವುದರಿಂದ ಕಾರ್ಖಾನೆಗಳು ಮುಚ್ಚಿವೆ. ವಾಹನಗಳು ರಸ್ತೆಗಿಳಿಯುವಂತಿಲ್ಲ. ಭಾರಿ ಹೊಗೆಯುಗುಳುವ ಚಿಮಣಿಗಳು ಸುಮ್ಮನಾಗಿದೆ. ಹೀಗಾಗಿ ದೇಶದಲ್ಲಿ ಮಾಲಿನ್ಯ ಕಡಿಮೆಯಾಗಿದೆ. ವಾಯು ಮಾಲಿನ್ಯದ ಪ್ರಮಾಣ ಗಣನೀಯ ಮಟ್ಟದಲ್ಲಿ ಕಡಿಮೆಯಾಗಿದೆ.
ಭಾರತದ ಪವಿತ್ರ ನದಿ ಗಂಗೆಯೂ ಈಗ ಶುಭ್ರವಾಗಿ ಹರಿಯುತ್ತಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಸ್ವಚ್ಛವಾಗಿ ಹರಿಯುತ್ತಿರುವ ಗಂಗಾ ನದಿಯ ವಿಡಿಯೋವೊಂದನ್ನುಸುದ್ದಿ ಸಂಸ್ಥೆ ಎಎನ್ ಐ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ.
ಅಪಾರ ಪ್ರಮಾಣದ ಭಕ್ತರು ಸೇರುವ ಹರ್ ಕಿ ಪೌರಿ ‘ಘಾಟ್ ಮುಚ್ಚಿದ್ದು ಇಲ್ಲಿನ ಮಾಲಿನ್ಯದ ಪ್ರಮಾಣ ಕಡಿಮೆಯಾಗಿದೆ. ಗಂಗಾ ನದಿಯ ತಟದಲ್ಲಿರುವ ಕಾರ್ಖಾನೆಗಳು ಲಾಕ್ ಡೌನ್ ಕಾರಣದಿಂದ ಮುಚ್ಚಿರುವ ಪರಿಣಾಮ ಕಲುಷಿತ ನೀರನ್ನು ಗಂಗಾ ನದಿಗೆ ಹರಿಬಿಡಲಾಗುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಗಂಗಾ ನದಿ ಹರಿದ್ವಾರದಲ್ಲಿ ಸ್ವಚ್ಛವಾಗಿ ಹರಿಯುತ್ತಿದೆ.
#WATCH Uttarakhand: Water quality of river Ganga in Haridwar improves as Har Ki Pauri Ghat is shut and industries are closed amid #CoronavirusLockdown. pic.twitter.com/0CnQ5P8aGM
— ANI (@ANI) April 5, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು