ಧರ್ಮಸ್ಥಳದಲ್ಲೂ ನೀರಿನ ಅಭಾವ: ಕ್ಷೇತ್ರ ಪ್ರವಾಸ ಮುಂದೂಡಲು ಮನವಿ


Team Udayavani, May 18, 2019, 3:05 AM IST

dhramasdtala

ಬೆಳ್ತಂಗಡಿ: ಪ್ರಸಿದ್ಧ ಪುಣ್ಯಕ್ಷೇತ್ರ ಎನಿಸಿಕೊಂಡಿರುವ ಧರ್ಮಸ್ಥಳದಲ್ಲೂ ನೀರಿನ ಅಭಾವ ಕಂಡು ಬಂದಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಲಾಗಿದೆ.

ಧರ್ಮಸ್ಥಳದ ಮೂಲಕ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀರಾ ಕಡಿಮೆಯಾಗಿರುವ ಪರಿಣಾಮ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ನೀರಿನ ಅಭಾವ ಹೆಚ್ಚಾಗುತ್ತಿದೆ. ಹೀಗಾಗಿ, ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ದ.ಕ.ಜಿಲ್ಲಾಡಳಿತ ಮೂಲಕ ತಮ್ಮ ಕ್ಷೇತ್ರದರ್ಶನವನ್ನು ಕೆಲ ದಿನಗಳ ಕಾಲ ಮುಂದೂಡುವಂತೆ ಭಕ್ತರಲ್ಲಿ ವಿನಂತಿಸಿದ್ದಾರೆ.

ಪ್ರಸ್ತುತ ಶಾಲಾ-ಕಾಲೇಜುಗಳ ರಜಾ ಅವಧಿಯಾದ ಪರಿಣಾಮ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ನೀರಿನ ಅವಶ್ಯಕತೆಯೂ ಹೆಚ್ಚಿರುತ್ತದೆ. ಸಾಮಾನ್ಯವಾಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ನೇತ್ರಾವತಿ ಸ್ನಾನಘಟ್ಟದಲ್ಲೇ ಸ್ನಾನ ಮಾಡುತ್ತಾರೆ. ಆದರೆ ಈಗ ನದಿಯಲ್ಲಿ ನೀರಿಲ್ಲದೆ ಅಲ್ಲಿ ಸ್ನಾನ ಮಾಡುವುದು ಕಷ್ಟವಾಗಿದೆ.

ಹೀಗಾಗಿ, ಕ್ಷೇತ್ರದ ವಸತಿಗೃಹಗಳಲ್ಲೇ ಸ್ನಾನ ಮಾಡುತ್ತಿದ್ದಾರೆ. ಅಷ್ಟೊಂದು ಪ್ರಮಾಣದ ನೀರನ್ನು ಪೂರೈಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಮನವಿ ಮಾಡಲಾಗಿದೆ. ಕ್ಷೇತ್ರಕ್ಕೆ ದೂರದ ಊರುಗಳಿಂದ ಹೆಚ್ಚಿನ ಭಕ್ತರು ಆಗಮಿಸುವುದರಿಂದ, ಅವರು ತಾಸುಗಟ್ಟಲೆ ಪ್ರಯಾಣ ಮಾಡಿ ಬರುವುದರಿಂದ ಕ್ಷೇತ್ರದಲ್ಲಿ ಬಂದು ಸ್ನಾನ ಮಾಡುವುದು ಕೂಡ ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ನೀರಿಗೆ ತೊಂದರೆ ಕಂಡು ಬಂದಿದೆ.

ಧರ್ಮಸ್ಥಳ ಕ್ಷೇತ್ರಕ್ಕೆ ನೇತ್ರಾವತಿ ನದಿಯೇ ನೀರಿನ ಮೂಲವಾಗಿದ್ದು, ಕ್ಷೇತ್ರದಲ್ಲಿ ನಿರ್ಮಿಸಲಾದ ಡ್ಯಾಮ್‌ ಮೂಲಕ ಓವರ್‌ಹೆಡ್‌ ಟ್ಯಾಂಕ್‌ಗೆ ನೀರನ್ನು ಪೂರೈಸಿ ಬಳಿಕ ಕ್ಷೇತ್ರಕ್ಕೆ ಉಪಯೋಗಿಸಲಾಗುತ್ತಿದೆ. ಹೀಗಾಗಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ ಎಲ್ಲಾ ಕೆಲಸ ಕಾರ್ಯಗಳಿಗೂ ನೀರನ್ನು ಪೂರೈಕೆ ಮಾಡುವುದು ಕಷ್ಟವಾಗಲಿದೆ.

ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಭಕ್ತರ ಸಂಖ್ಯೆ ಹೆಚ್ಚಳವಾದಾಗ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಇಲ್ಲಿಯವರೆಗೆ ಭಕ್ತರಿಗೆ ತೊಂದರೆಯಾಗದಂತೆ ಕ್ಷೇತ್ರದ ವತಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ಮುಂದೆ ನೀರಿಲ್ಲದೆ ಭಕ್ತರಿಗೆ ತೊಂದರೆಯಾಗಬಾರದ ರೀತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.