Uttarkashi: ನಾವು ಚೆನ್ನಾಗಿದ್ದೇವೆ, ಭಯ ಬೇಡ… ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮಾತು

ಪೈಪ್‌ನಲ್ಲಿ ಕಳುಹಿಸಿದ ವೀಡಿಯೋ ಕೆಮರಾ ಮೂಲಕ ಅಭಯ

Team Udayavani, Nov 21, 2023, 9:54 PM IST

tunnel uttarkashi

ಹೊಸದಿಲ್ಲಿ/ಉತ್ತರಕಾಶಿ: “ಅಮ್ಮಾ ಆತಂಕ ಪಡಬೇಡ. ಸುರಂಗದಲ್ಲಿ ಸಮಯ ಕಳೆಯಲು ನಡೆದಾಡುತ್ತಿದ್ದೇನೆ. ಹೊತ್ತು ಕಳೆಯಲು ಯೋಗಾಭ್ಯಾಸ ಮಾಡುತ್ತಿದ್ದೇನೆ…’

– ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ಪೈಕಿ ಒಬ್ಬ ರು ತಾಯಿಗೆ ಹೇಳಿದ ಸಾಂತ್ವನದ ಮಾತುಗಳಿವು. ಸುರಂಗದ ಒಳಗೆ ಆರು ಇಂಚು ವ್ಯಾಸದ ಪೈಪ್‌ ಮೂಲಕ ಕಳುಹಿಸಲಾಗಿದ್ದ ಡ್ರೋನ್‌ ಕೆಮರಾಗಳ ಮುಂದೆ ಕಾರ್ಮಿಕರು ತಮ್ಮ ಸ್ಥಿತಿಯನ್ನು ವಿವರಿಸಿದ್ದಾರೆ. ಹೀಗಾಗಿ ಅವರ ಕುಟುಂಬ ಸದಸ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಾರ್ಮಿಕನ ತಾಯಿ ವೀಡಿಯೋದಲ್ಲಿ ತನ್ನ ಪುತ್ರನನ್ನು ನೋಡುತ್ತಿದಂತೆಯೇ ಕಣ್ಣೀರಾದರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ, ಆತಂಕಪಡಬೇಕಾಗಿಲ್ಲ. ಸಮಯ ಕಳೆಯಲು ನಡೆದಾಡುತ್ತಿದ್ದೇನೆ ಎಂದು ಹೇಳಿಕೊಂಡರು.

ಬಿಹಾರದ ಸುನೀತಾ ಎಂಬವರ ಭಾವ ಪ್ರದೀಪ್‌ ಕಿಸ್ಕಾ ಕೂಡ ಸುರಂಗದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರು ಸುನೀತಾ ಜತೆಗೆ ಮಾತನಾಡಿ ಸಂತೋಷಪಟ್ಟರು. “ಪೈಪ್‌ ಮೂಲಕ ಭಾವನಿಗೆ ಕಿತ್ತಳೆ ಕಳುಹಿಸಿಕೊಟ್ಟಿದ್ದೇನೆ. ಜತೆಗೆ ಸ್ವಲ್ಪ ಖೀಚಡಿಯನ್ನೂ ನೀಡಿದ್ದೇನೆ’ ಎಂದು ಸುನೀತಾ ಹರ್ಷದಿಂದ ಹೇಳಿಕೊಂಡರು.

ವೀಡಿಯೋ ಕೆಮರಾ ಮೂಲಕ ಕಾರ್ಮಿಕರ ಜತೆಗೆ ಒಬ್ಬೊಬ್ಬರಾಗಿ ಮಾತನಾಡಿದ ಬಳಿಕ ಕುಟುಂಬಸ್ಥರಲ್ಲಿ ಒಂದು ಬಗೆಯ ನೆಮ್ಮದಿ ನೆಲೆಸಿತ್ತು. ಅವರು ತಮ್ಮವರಿಗೆ ಬೇಕಾದ ತಿಂಡಿ ತಿನಸುಗಳನ್ನು ಕಳುಹಿಸಿಕೊಟ್ಟರು. ಜತೆಗೆ ಮೊಬೈಲ್‌, ಚಾರ್ಜರ್‌ಗಳನ್ನೂ ಕಳುಹಿಸಿಕೊಡಲಾಗಿದೆ.

ಸಿಕ್ಕಿತು ಮನೆ ಆಹಾರ
ಇದುವರೆಗೆ ಕಾರ್ಮಿಕರಿಗೆ ಕಡಲೆ, ಒಣಹಣ್ಣುಗಳು, ಮಂಡಕ್ಕಿಗಳನ್ನು ಮಾತ್ರ ಕೊಳವೆ ಮೂಲಕ ಕಳುಹಿಸಿಕೊಡಲಾಗುತ್ತಿತ್ತು. ಇದರಿಂದ ಅವರು ಜೀವ ಉಳಿಸಿಕೊಳ್ಳಲು ಮಾತ್ರ ಶಕ್ತರಾಗಿದ್ದರು. ಮಂಗಳವಾರ ಮನೆಯವರು ಮತ್ತು ಜಿಲ್ಲಾಡಳಿತದ ವತಿಯಿಂದ ಸಿದ್ಧಪಡಿಸಿದ ಆಹಾರವನ್ನೂ ಕಳುಹಿಸಲಾಗಿದೆ.

ವೀಡಿಯೋದಲ್ಲಿ ಏನಿದೆ?
ಕಾರ್ಮಿಕರಲ್ಲಿ ಕೆಲವರು ಹಳದಿ ಮತ್ತು ಬಿಳಿ ಹೆಲ್ಮೆಟ್‌ಗಳನ್ನು ಧರಿಸಿರುವುದು ಕಂಡು ಬಂದಿದೆ. ಕೆಲವರು ಕಳುಹಿಸಿಕೊಟ್ಟ ಆಹಾರ ವಸ್ತುಗಳನ್ನು ಸೇವಿಸಿದರು. ಪರಸ್ಪರ ಮಾತನಾಡಿಕೊಳ್ಳುತ್ತಿರುವುದು ಮತ್ತು ನಡೆದಾಡುತ್ತಿರುವುದು ಕಾಣಿಸಿದೆ.

ಸಹನೆಯಿಂದಿರಿ
ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಬಗ್ಗೆ ಸುದ್ದಿ ವಾಹಿನಿಗಳು ವರದಿ ಮಾಡುವ ಸಂದರ್ಭದಲ್ಲಿ ಸಂಯಮ ವಹಿಸಬೇಕು. ಕಾರ್ಮಿಕರ ಕುಟುಂಬ ಸದಸ್ಯರಿಗೆ ಆತಂಕ ಉಂಟು ಮಾಡುವ ರೀತಿಯ ಅತಿರಂಜನೀಯ ವರದಿ ಪ್ರಸಾರ ಮಾಡಬಾರದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಲಂಬವಾಗಿ ಸುರಂಗ
ಅಮೆರಿಕದಿಂದ ತರಿಸಿರುವ ಆಗರ್‌ ಯಂತ್ರ ಇನ್ನೂ ದುರಸ್ತಿಯಾಗದಿರುವ ಹಿನ್ನೆಲೆಯಲ್ಲಿ ಕಾರ್ಮಿಕರ ರಕ್ಷಣೆಗಾಗಿ ಲಂಬವಾಗಿ ಸುರಂಗ ಕೊರೆಯುವುದೇ ಅತ್ಯುತ್ತಮ ಮಾರ್ಗ ಎಂಬ ನಿರ್ಧಾರಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ (ಎನ್‌ಡಿಆರ್‌ಎಫ್) ಬಂದಿದೆ. ಐದು ರೀತಿಯ ಪರಿಹಾರ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆದಿದೆ. ಈ ಪೈಕಿ ಲಂಬವಾಗಿ ಸುರಂಗ ಕೊರೆಯುವುದಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಾಧಿಕಾರದ ಸದಸ್ಯ ನಿವೃತ್ತ ಲೆ|ಜ| ಸಯ್ಯದ್‌ ಅತ್ತಾ ಹುಸೇನ್‌ ಹೇಳಿದ್ದಾರೆ.

ಕಾರ್ಮಿಕರ ರಕ್ಷಣೆಗೆ ಆದ್ಯತೆ: ಪ್ರಧಾನಿ
ಸುರಂಗದಲ್ಲಿರುವ 41 ಮಂದಿ ಕಾರ್ಮಿಕರ ರಕ್ಷಣೆಯೇ ಪ್ರಧಾನ ಆದ್ಯತೆ ಆಗಬೇಕು ಎಂದು ಪ್ರಧಾನಿ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿಯವರಿಗೆ ಸೂಚಿಸಿದ್ದಾರೆ. ಮಂಗಳವಾರ ಅವರು ಸಿಎಂ ಧಾಮಿ ಜತೆಗೆ ನಾಲ್ಕನೇ ಬಾರಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ್ದಾರೆ.

 

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.