ಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ


Team Udayavani, Dec 1, 2021, 5:25 AM IST

SAಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದಲ್ಲಿ ಹುಟ್ಟಿಕೊಂಡ ಒಮಿಕ್ರಾನ್‌ ವೈರಸ್‌ ಭೀತಿಯಿಂದಾಗಿ ಭಾರತದ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸ ಇನ್ನೂ ಖಚಿವಾಗಿಲ್ಲ. ಆದರೆ ಟೀಮ್‌ ಇಂಡಿಯಾ ಕ್ರಿಕೆಟಿಗರ ಸಂಪೂರ್ಣ ಸುರಕ್ಷೆೆಗೆ ದಕ್ಷಿಣ ಆಫ್ರಿಕಾ ಸರಕಾರ ಭರವಸೆ ನೀಡಿದೆ.

ಭಾರತೀಯ ಕ್ರಿಕೆಟ್‌ ತಂಡಕ್ಕೆ ಸಂಪೂರ್ಣ ಬಯೋಬಬಲ್‌ ವಾತಾವರಣವನ್ನು ನಿರ್ಮಿಸಲಾಗು ವುದು ಎಂದು ದಕ್ಷಿಣ ಆಫ್ರಿಕಾದ ವಿದೇಶಾಂಗ ವ್ಯವ ಹಾರಗಳ ಸಚಿವಾಲಯ ಹೇಳಿದೆ. ಜತೆಗೆ ಕೊರೊನಾ ರೂಪಾಂತರಿಯ ಆತಂಕವಿದ್ದರೂ ಭಾರತ “ಎ’ ತಂಡದ ಪ್ರವಾಸದಿಂದ ಹಿಂದೆ ಸರಿಯದಿದ್ದುದಕ್ಕಾಗಿ ಸಚಿವಾಲಯವು ಬಿಸಿಸಿಐಗೆ ಕೃತಜ್ಞತೆ ಸಲ್ಲಿಸಿದೆ.

ಭಾರತ ತಂಡ ಡಿ. 17ರಿಂದ ದ. ಆಫ್ರಿಕಾದಲ್ಲಿ 3 ಟೆಸ್ಟ್‌, 3 ಏಕದಿನ ಮತ್ತು 4 ಟಿ20 ಪಂದ್ಯಗಳನ್ನು ಆಡಲಿದೆ.

ಡಿ. 9ಕ್ಕೆ ಆರಂಭ
ಹಿಂದಿನ ವೇಳಾಪಟ್ಟಿಯಂತೆ ಟೀಮ್‌ ಇಂಡಿಯಾ ಡಿ. 9ರಂದು ದಕ್ಷಿಣ ಆಫ್ರಿಕಾವನ್ನು ತಲುಪಲಿದೆ. ಆದರೆ ಅಲ್ಲಿ ಒಮಿಕ್ರಾನ್‌ ಕಂಡುಬಂದ ಬಳಿಕ ಪ್ರವಾಸದ ಬಗ್ಗೆ ಆತಂಕ ಎದುರಾಗಿದೆ. ಅನೇಕ ದೇಶಗಳು ಪ್ರಯಾಣ ನಿರ್ಬಂಧಗಳನ್ನು ವಿಧಿಸಿವೆ.

ಭಾರತ “ಎ’ ತಂಡದ ಪ್ರವಾಸವನ್ನು ಮುಂದುವ ರಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸುವ ಭಾರತದ ನಿರ್ಧಾರವು ತಮ್ಮ ಗಡಿಗಳನ್ನು ಮುಚ್ಚಲು ಮತ್ತು ದ.ಆಫ್ರಿಕಾದಿಂದ ಪ್ರಯಾಣವನ್ನು ಮಿತಿಗೊಳಿಸಲು ನಿರ್ಧರಿಸಿದ ಹಲವಾರು ದೇಶಗಳಿಗೆ ವ್ಯತಿರಿಕ್ತವಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ:ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

30ನೇ ವಾರ್ಷಿಕೋತ್ಸವ
“ಪ್ರವಾಸವನ್ನು ಮುಂದುವರಿಸಿದ ಬಿಸಿಸಿಐ ನಿರ್ಧಾರಕ್ಕೆ ದಕ್ಷಿಣ ಆಫ್ರಿಕಾ ಸರಕಾರ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಹಾಗೆಯೇ ದ.ಆಫ್ರಿಕಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರ ಳಿದ 30ನೇ ವಾರ್ಷಿಕೋತ್ಸವನ್ನು ಭಾರತ ವಿರುದ್ಧವೇ ಆಚರಿಸಲು ಕಾತರವಾಗಿದ್ದೇವೆ’ ಎಂದು ಸಚಿವಾಲಯ ತಿಳಿಸಿದೆ. 1970ರಲ್ಲಿ ವರ್ಣಭೇದ ನೀತಿಯಿಂದಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿತ್ತು. ಬಳಿಕ 1991ರಲ್ಲಿ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಾಪಸಾದಾಗ ಇವರೆದುರು ಮೊದಲ ಸರಣಿ ಆಯೋಜಿಸಿದ ಹೆಗ್ಗಳಿಕೆ ಭಾರತದ್ದಾಗಿದೆ.

ಅಭಿನಂದನಾ ಸಮಾರಂಭ
2022ರ ಜನವರಿ 2ರಂದು ಕೇಪ್‌ಟೌನ್‌ನಲ್ಲಿ ನಡೆಯುವ ಅಭಿನಂದನಾ ಸಮಾರಂಭದೊಂದಿಗೆ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಜತೆಗೆ ಈ ಸರಣಿ ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧವನ್ನು ಪ್ರದರ್ಶಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.