ಹವಾಮಾನ ವೈಪರೀತ್ಯ: ಹೆಚ್ಚುತ್ತಿದೆ ವೈರಲ್‌ ಜ್ವರ

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಸೂಚನೆ

Team Udayavani, Oct 15, 2022, 12:42 PM IST

9

ಬೆಂಗಳೂರು: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದಿಂದಾಗಿ ವೈರಲ್‌ ಜ್ವರಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯು ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

ಕಳೆದ 3 ವಾರಗಳಿಂದ ಹವಾಮಾನ ಬದಲಾವಣೆ, ಮಳೆ ಮತ್ತಿತರ ಕಾರಣಗಳಿಂದ ರಾಜ್ಯಾದ್ಯಂತ ಎಲ್ಲೆಡೆ ವೈರಲ್‌ ಜ್ವರದ ಹಾವಳಿ ಹೆಚ್ಚುತ್ತಿದೆ. ಕೆಮ್ಮು, ಜ್ವರ, ಶೀತ, ಗಂಟಲು, ತಲೆ ನೋವು, ಹೊಟ್ಟೆ ನೋವು ಮುಂತಾದ ಲಕ್ಷಣದಿಂದ ವೈದ್ಯರನ್ನು ಮೊರೆ ಹೋಗುವವರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ, ಜನ ಸಾಮಾನ್ಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆಯಾ ಹವಾಮಾನಕ್ಕೆ ತಕ್ಕಂತೆ ಹೊಸ-ಹೊಸ ವೈರಸ್‌ ಗಳು ಉತ್ಪತ್ತಿಯಾಗುತ್ತಿದ್ದು, ಕೋವಿಡ್‌ ವೇಳೆ ವಹಿಸುತ್ತಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಜನ ಸಾಮಾನ್ಯರು ವಹಿಸದಿ ರುವುದೇ ಇದಕ್ಕೆ ಪ್ರಮುಖ ಕಾರಣ. ಮುಖ್ಯವಾಗಿ ವೈರಲ್‌ ಜ್ವರವು ಉಸಿರಾಟದಿಂದ ಹರಡುತ್ತದೆ. ಜ್ವರಕ್ಕೆ ಒಳಗಾದ ವ್ಯಕ್ತಿಗಳು ಮಾಸ್ಕ್ ಧರಿಸದೇ ಮತ್ತೂಬ್ಬ ವ್ಯಕ್ತಿಯ ಬಳಿ ಬಂದು ಉಸಿರಾಡಿದಾಗ ಆತನ ದೇಹದಲ್ಲಿದ್ದ ವೈರಸ್‌ಗಳು ಬೇರೆಯವರಿಗೆ ಹರಡುವ ಸಾಧ್ಯತೆಗಳಿರುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ಮಳೆ, ಚಳಿ, ಸದಾ ಮೋಡ ಇರುವ ಕಾಲದಲ್ಲಿ ಸಾಮಾನ್ಯವಾಗಿ ಹೊಸ ವೈರಸ್‌ಗಳು ಉತ್ಪತ್ತಿಯಾಗುತ್ತವೆ. ಕೆಲವೊಂದು ಹವಾಮಾನದಲ್ಲಿ ಅಷ್ಟು ಸುಲಭವಾಗಿ ವೈರಸ್‌ಗಳು ಸಾಯುವುದಿಲ್ಲ. ಹವಾಮಾನ ಬದಲಾಗುತ್ತಿದ್ದಂತೆ ಹೊಸ ವೈರಸ್‌ಗಳು ಹುಟ್ಟಿಕೊಳ್ಳುವುದು ಸಾಮಾನ್ಯ. ಆದರೆ, ಕೆಲ ಪ್ರತಿಕೂಲ ಹವಾಮಾನದಿಂದ ವೈರಸ್‌ಗಳು ಬೇಗ ಹರಡುತ್ತವೆ ಎಂದು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಪ್ರೊಫೆಸರ್‌ ಹಾಗೂ ಮಕ್ಕಳ ವೈದ್ಯಶಾಸ್ತ್ರ ವಿಭಾಗದ ವೈದ್ಯ ಡಾ.ಎನ್‌. ನಿಜಗುಣ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮಗಳೇನು?

 ಜ್ವರದಿಂದ ಬಳಲುತ್ತಿರುವವರು ನೀರಿನಾಂಶ ಇರುವ ಆಹಾರ ಪದಾರ್ಥ ಹೆಚ್ಚೆಚ್ಚು ಸೇವಿಸಬೇಕು.

 ವಿಟಮಿನ್‌ ಸಿ ಹಾಗೂ ಎ ಇರುವ ಪದಾರ್ಥಗಳನ್ನು ಸೇವಿಸಿದರೆ ಉತ್ತಮ.

 ಪಪ್ಪಾಯ, ತುಳಸಿ ರಸದಂತಹ ಆಹಾರಗಳು ಉಪಯುಕ್ತ.

 ಜ್ವರದ ಲಕ್ಷಣ ಕಂಡು ಬರುವವರು ಆಗಾಗ ಸ್ಟೀಮ್‌ ತೆಗೆದುಕೊಳ್ಳುತ್ತಿರಬೇಕು.

 ಮನೆಯಲ್ಲಿ ಒಬ್ಬರಿಗೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ಮಾಸ್ಕ್ ಧರಿಸಿ ಮತ್ತೂಬ್ಬರ ಜತೆ ಅಂತರ ಕಾಯ್ದುಕೊಳ್ಳಿ

 ಜ್ವರ ಇದ್ದವರ ಜತೆಗೆ ಹ್ಯಾಂಡ್‌ ಶೇಕ್‌ ಮಾಡೋದು, ಪಕ್ಕದಲ್ಲೇ ಕೂರುವುದು ಮಾಡಬಾರದು.

 ಜ್ವರ ಬಂದಾಗ ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ.

 ಮಕ್ಕಳಿಗೆ ಕೆಮ್ಮು, ನೆಗಡಿ ಲಕ್ಷಣಗಳಿದ್ದಾಗ ಶಾಲೆಗೆ ಕಳಿಸದೇ ಇರುವುದು ಒಳಿತು. ಇದರಿಂದ ಇತರೆ ಮಕ್ಕಳಿಗೆ ಜ್ವರ ಹರಡಬಹುದು.

 ಮಳೆ ಬಂದಾಗ ಬೆಚ್ಚಗಿನ ಉಡುಪು ಧರಿಸುವುದು.

 ಆದಷ್ಟು ಹೊರಗಿನ ಎಣ್ಣೆಯುಕ್ತ ಪದಾರ್ಥ ಸೇವಿಸಬೇಡಿ

ಮನುಷ್ಯನು ಒಮ್ಮೆ ಉಸಿರಾಡಿದಾಗ ಆತನ ದೇಹದಿಂದ ಲಕ್ಷಾಂತರ ವೈರಸ್‌ ಗಳು ಹೊರಗೆ ಬರುತ್ತವೆ. ಕೋವಿಡ್‌ ಭೀತಿಯ ಬಳಿಕ ಜ್ವರದ ಲಕ್ಷಣ ಕಂಡು ಬಂದರೂ ಸಾಮಾಜಿಕ ಅಂತರವಿಲ್ಲದೇ ಓಡಾಡುತ್ತಿದ್ದಾರೆ. ಜತೆಗೆ, ಹವಾಮಾನದಲ್ಲಿ ದಿನಕ್ಕೊಂದು ವೈಪರೀತ್ಯ ಕಾಣುತ್ತೇವೆ. ಈ ಎಲ್ಲ ಕಾರಣ ಗಳಿಂದಾಗಿ ವೈರಲ್‌ ಜ್ವರಗಳು ಹೆಚ್ಚುತ್ತಿವೆ. ● ಡಾ.ಎನ್‌. ನಿಜಗುಣ, ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ.

 

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.