Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

ವಿದ್ಯುತ್ ದರ ದಿಢೀರ್ ಏರಿಕೆಗೆ ನೇಕಾರ ಕಂಗಾಲು; ನೇಕಾರರ ಹೊಟ್ಟೆ ಮೇಲೆ ಬರೆ ಎಳೆದ ಸರ್ಕಾರ

Team Udayavani, Jun 9, 2023, 8:30 AM IST

2-belagavi

ಬೆಳಗಾವಿ: ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಘೋಷಿಸಿರುವ ಸರ್ಕಾರ, ಇನ್ನೊಂದೆಡೆ ಮಗ್ಗಗಳ ವಿದ್ಯುತ್ ದರ ಹೆಚ್ಚಿಸುವ ಮೂಲಕ ನೇಕಾರರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇನ್ನು ಮುಂದೆ ವಿದ್ಯುತ್ ಬಿಲ್ ಕಟ್ಟದಿರಲು ನೇಕಾರರು ನಿರ್ಧರಿಸಿದ್ದಾರೆ.

ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಸಭಾಭವನದಲ್ಲಿ ಜೂ. 8ರ ಗುರುವಾರ ನಡೆದ ಸಭೆಯಲ್ಲಿ ನೇಕಾರರು ವಿದ್ಯುತ್ ಬಿಲ್ ಕಟ್ಟದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ.

ನೇಕಾರ ಮುಖಂಡ ನಾರಾಯಣ ಲೋಕರೆ ಮಾತನಾಡಿ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಇತ್ತ ನೇಕಾರರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿರುವ ಸರ್ಕಾರ ದಿಢಿತ್ ವಿದ್ಯುತ್ ದರ ಹೆಚ್ಚಿಸುವ ಮೂಲಕ ಕರೆಂಟ್ ಶಾಕ್ ನೀಡಿದೆ. ತ್ರಿಫೇಸ್ ವಿದ್ಯುತ್ ದರದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಒಂದು ಕೈಯಿಂದ ಕೊಟ್ಟು ಇಒನ್ನೊಂದು ಕೈಯಿಂದ ದುಪ್ಪಟ್ಟು ಕಸಿದುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.

ಜಿಎಸ್‌ಟಿ, ವ್ಯಾಟ್ ಹೆಚ್ಚಳದಿಂದ ನೇಕಾರರು ತೊಂದರೆ ಅನುಭವಿಸುತ್ತಿದ್ದಾರೆ. ಇಂಥದರಲ್ಲಿ ಈಗ ವಿದ್ಯುತ್ ದರ ಹೆಚ್ಚಿಸಿ ನೇಕಾರರನ್ನು ಬೀದಿಗೆ ತಳ್ಳುತ್ತಿರುವ ಸರ್ಕಾರದ ಕ್ರಮ ಖಂಡನೀಯ. ಹೀಗಾಗಿ ತಾಲೂಕಿನ ಸುಳೇಭಾವಿ, ಮಾರೀಹಾಳ, ಮೋದಗಾ, ಪಂತ ಬಾಳೇಕುಂದ್ರಿ, ಸಾಂಬ್ರಾ ಸೇರಿದಂತೆ ಸುತ್ತಲಿನ ಹಳ್ಳಿಗಳ ನೇಕಾರರು ಯಾವುದೇ ಕಾರಣಕ್ಕೂ ಈ ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟದಿರಲು ನಿರ್ಧರಿಸಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ನೇಕಾರ ಮುಖಂಡ ಬಾಬು ವಾಗೇರಿ ಮಾತನಾಡಿ, ವಿದ್ಯುತ್ ಮಗ್ಗ ಹಾಗೂ ಗಿರಣಿ ನಡೆಸಲು ತ್ರಿಫೇಸ್ ವಿದ್ಯುತ್ ಅಗತ್ಯವಿದೆ. ಈ ದರ ದಿಢೀರ್ ಏರಿಕೆ ಆಗಿದೆ. ಇದರಿಂದ ನೇಕಾರರು ಕಣ್ಣಿರಲ್ಲಿ ಕೈ ತೊಳೆಯುವ ಪರಿಸ್ಥಿತಿ ಬಂದೊದಗಿದೆ. ಈಗಾಗಲೇ ಕೊರೊನಾ ಹಾವಳಿಯಿಂದ ತತ್ತರಿಸಿ ಅನೇಕ ನೇಕಾರರು ಜೀವನ ನಡೆಸಲು ಇನ್ನೂ ಹೆಣಗಾಡುತ್ತಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿ ಬದುಕು ನಡೆಸುವುದು ಕಷ್ಟಕರವಾಗಿದೆ. ಇಂಥದರಲ್ಲಿ ಈಗ ವಿದ್ಯುತ್ ದರ ಹೆಚ್ಚಿಸುವ ಮೂಲಕ ಸರ್ಕಾರ ನಮ್ಮ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ. ಕೂಡಲೇ ದರ ಇಳಿಸುವ ಮೂಲಕ ನೇಕಾರರ ಕಣ್ಣೀರು ಒರೆಸುವ ಕೆಲಸ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ನೇಕಾರ ಮುಖಂಡ ಕಲ್ಲಪ್ಪ ಕಾಂಬಳೆ ಮಾತನಾಡಿ, ನೇಕಾರರ ಮೇಲೆ ವಿದ್ಯುತ್ ಶಾಕ್ ನೀಡಿರುವ ಸರ್ಕಾರದ ವಿರುದ್ಧ ನಾವೆಲ್ಲರೂ ಪಕ್ಷಾತೀತವಾಗಿ ಹೋರಾಟ ಮಾಡಬೇಕಿದೆ ಇದರಲ್ಲಿ ಯಾವುದೇ ರಾಜಕೀಯ ಬೆರೆಸದೇ ಜನರ ನೇಕಾರರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಿದೆ. ಸರ್ಕಾರ ಈ ಕೂಡಲೇ ದರ ಏರಿಕೆ ಮಾಡಿರುವ ಆದೇಶ ಹಿಂಪಡೆಯುವವರೆಗೂ ಹೋರಾಟ ನಿರಂತರವಾಗಿ ಮಾಡಲಾಗುವುದು ಎಂದು ತಿಳಿಸಿದರು.

ನೇಕಾರ ನಾಯಕ ನಾಗಪ್ಪ ಹುಡೇದ ಮಾತನಾಡಿ, ನೇಕಾರರು ದಿನ ದುಡಿದ ಮೇಲೆಯೇ ಹೊಟ್ಟೆ ತುಂಬುತ್ತದೆ. ಇಂಥದರಲ್ಲಿ ಸಿದ್ದರಾಮಯ್ಯ ಸರ್ಕಾರ ನೇಕಾರರಿಗೆ ಭಾರೀ ಹೊಡೆತ ನೀಡಿದೆ. ಈ ಆದೇಶ ಹಿಂಪಡೆಯುವವರೆಗೂ ನಾವು ಬಿಲ್ ಕಟ್ಟುವುದಿಲ್ಲ. ಸೋಮವಾರ ಜೂ. 12ರಂದು ಮಾರೀಹಾಳ ಪೊಲೀಸ್ ಠಾಣೆ, ಕೆಇಬಿ ಸೆಕ್ಶö್ನ ಅಧಿಕಾರಿ, ತಹಶೀಲ್ದಾರ, ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಿದ್ದೇವೆ. ಸಾಧ್ಯವಾದರೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಮುಖಂಡರಾದ ಕಲ್ಲಪ್ಪ ಸತಾಪಳೆ, ಮಹಾದೇವ ರಾಗಿ, ರಾಮಚಂದ್ರ ಮರಗಿ, ಮಹಾಂತೇಶ ಬಿಜಾಪುರೆ, ಬಸವರಾಜ ಯರಝರವಿ, ವಿಶ್ವನಾಥ ಕಣಬರ್ಗಿ, ಕಲ್ಲಪ್ಪ ಕಾಂಬಳೆ, ಗಂಗಾಧರ ಲಖನಗೌಡ, ಶಫಿ ಜಮಾದಾರ, ಶ್ರೀಕಾಂತ ಇಂಗಳೆ, ಕಲ್ಲಪ್ಪ ಕಾಮಕರ, ವೀರಭದ್ರ ನೇಸರಗಿ, ಭೀಮಶಿ ಕಮತಗಿ, ಮೈನು ಹುದಲಿ, ಈರಣ್ಣ ಕೇಸಪನಟ್ಟಿ ಸೇರಿದಂತೆ ಇತರರು ಇದ್ದರು.

ದರ ದುಪ್ಪಟ್ಟು, ನೇಕಾರರು ಆತಂಕ:

ತ್ರಿಫೇಸ್ ವಿದ್ಯುತ್‌ನ ಪ್ರತಿ ಎಚ್‌ಪಿಗೆ ನಿಗದಿತ ದರ ಈ ಮುಂಚೆ 80 ರೂ. ಇತ್ತು. ಈಗ 140 ರೂ.ಗೆ ಏರಿಕೆ ಆಗಿದೆ. ಎಂದರೆ ದಿಢೀರ್ 60 ರೂ. ಏರಿಕೆ ಮಾಡಿದೆ. ಪರಿಣಾಮ ದರ ಮೊತ್ತ ಪ್ರತಿ ಯೂನಿಟ್‌ಗೆ ಈ ಮುಂಚೆ 0.57 ಪೈಸೆ ಇತ್ತು. ಈಗ 2.55 ರೂ.ಗೆ ಹೆಚ್ಚಿಸಿದೆ ಎಂದರೆ 1.98 ರೂ. ಹೆಚ್ಚಿಸಿದಂತಾಗಿದೆ. ತೆರಿಗೆಯೂ ಹೆಚ್ಚಾಗಿದ್ದು, ನಾವು ಬಳಸಿದ ಯೂನಿಟ್‌ಗೆ ಈ ತಿಂಗಳು ದುಪ್ಪಟ್ಟು ಬಿಲ್ ಬಂದಿರುವುದರಿಂದ ಕಷ್ಟವಾಗಿದೆ ಎಂದು ನೇಕಾರರು ಆರೋಪಿಸಿದ್ದಾರೆ.

ಹೋರಾಟಕ್ಕೆ ಎಲ್ಲರೂ ಕೈಜೋಡಿಸಿ:

ಸರ್ಕಾರ ವಿದ್ಯುತ್ ಕಡಿಮೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನಿರಂತರವಾಗಿ ಹೋರಾಟ ನಡೆಸಲಾಗುವುದು. ನೇಕಾರರು ಯಾವುದೇ ಕಾರಣಕ್ಕೂ ಬಿಲ್ ಕಟ್ಟುವುದಿಲ್ಲ. ಜೂ. 12ರಂದು ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಹೋರಾಟಕ್ಕೆ ಎಲ್ಲ ಭಾಗದ ನೇಕಾರರು ಕೈ ಜೋಡಿಸಬೇಕು ಎಂದು ಸುಳೇಭಾವಿಯ ನೇಕಾರರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.