ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ಜುಲೈ 8 ರಂದು ರಾಜ್ಯಾದ್ಯಂತ ವೆಡ್ಡಿಂಗ್ ಗಿಫ್ಟ್ ಚಿತ್ರ ತೆರೆಕಾಣಲಿದೆ.

Team Udayavani, Jul 6, 2022, 3:34 PM IST

ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ಬೆಂಗಳೂರು: ಸಿನೆಮಾ ಬಿಡುಗಡೆಗೂ ಮೊದಲೇ ಆ ಚಿತ್ರದ ಬಗೆಗೆ ಪ್ರೇಕ್ಷಕ ವರ್ಗದವರ ಕ್ರೇಜ್ ಹೆಚ್ಚಾಗಬೇಕಾದ್ರೆ ಚಿತ್ರದ ಕಥೆಯಲ್ಲಿಯಲ್ಲಿ ಸ್ವಾರಸ್ಯವಿರಬೇಕು ಅನ್ನೋ ಸುಳಿವು ಸಿನಿಪ್ರೇಮಿಗಳಿಗೆ ಸಿಗಬೇಕು.

ಹೀಗೆ ರಿಲೀಸ್ ಗೂ ಮೊದಲೇ ನಿರೀಕ್ಷೆ, ಕುತೂಹಲ ಹುಟ್ಟುಹಾಕಿರೋ ಸಿನೆಮಾವೇ ವಿಕ್ರಂ ಪ್ರಭು ನಿರ್ದೇಶನದ ವೆಡ್ಡಿಂಗ್ ಗಿಫ್ಟ್. ಯಾರಿಗೆ ಆಗಲಿ ತಮ್ಮ ಜೀವನಕ್ಕೆ ತೀರ ಹತ್ತಿರವೆನಿಸೋ, ದಿನ ಪ್ರತಿ ಕಣ್ಣೆದುರು ಘಟಿಸೋ ಕಥೆಗಳನ್ನೇ ತೆರೆಯಮೇಲೆ ತರೋ ಪ್ರಯತ್ನವಾದಾಗ ಸಾಧಾರಣವಾಗಿ ಆ ಸಿನೆಮಾದ ಮೇಲೆ ಸಾಕಷ್ಟು ನಿರೀಕ್ಷೆಗಳು ಹುಟ್ಟುತ್ತವೆ.

ಬದುಕಿನ ಪ್ರಮುಖ ಘಟ್ಟದಲ್ಲಿ ಮದುವೆ ಅತಿ ಮುಖ್ಯ ಪಾತ್ರ ವಹಿಸುತ್ತೆ. ಸಂಬಂಧಗಳು ಬೆಸೆದು ಜೋಡಿಯಾಗುವ ಈ ಮದುವೆ ಸ್ವರ್ಗ ನಿಶ್ಚಿತ ಎಂಬ ಮಾತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಇದು ಅಪವಾದವಾಗಿದೆ, ಯಾಕಂದ್ರೆ ಇವತ್ತಾದ ಮದುವೆ ಮೂರೇ ದಿನಕ್ಕೆ ಮುರಿದು ಬಿದ್ದು , ವಿಚ್ಚೇದನ ಕ್ಕಾಗಿ ಕೋರ್ಟ್ ಮೆಟ್ಟಿಲು ಹತ್ತುವ ಉದಾಹರಣೆಗಳು ಹೆಚ್ಚಾಗುತ್ತಿದೆ. ಅಮೂಲ್ಯ ಬಂಧ ಬೆಸೆಯುವ ಮದುವೆ ಇಂದು ಹಣದಾಸೆ, ಕಾನೂನಿನ ದುರ್ಬಳಕೆ,  ಮುಗ್ಧ ಗಂಡನಿಗೆ ಕಾನೂನಾತ್ಮಕ ದೌರ್ಜನ್ಯ, ಯಾರದೋ ಮಾತಿಗೆ ಕಿವಿಯಾಗಿ ಮದುವೆಯ ಮೌಲ್ಯವರಿಯದ ಹೆಣ್ಣೊಬ್ಬಳ ಕಥೆಯ ಎಳೆ ಹಿಡಿದು ಈ ಕಥೆ ಸಾಗುತ್ತದೆ.  ಸೀರಿಯಸ್ ವಿಚಾರಗಳನ್ನೇ ಮನರಂಜನೆಗೂ ಕೊರತೆಯಾಗದಂತೆ ಸಮಾಜಕ್ಕೊಂದು ಅರಿವು, ಜಾಗೃತಿ ಮೂಡಿಸ ಹೊರಟ ಚಿತ್ರವೇ ವೆಡ್ಡಿಂಗ್ ಗಿಫ್ಟ್.

ಈ ಚಿತ್ರದ ಇನ್ನೊಂದು ವಿಶೇಷ ವೆಂದರೆ ಚಿತ್ರರಂಗದಲ್ಲಿ ಒಂದುಕಾಲದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ಪ್ರೇಮಾ ಖಡಕ್  ಲಾಯರ್ ಪಾತ್ರದ ಮೂಲಕ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಹುವರ್ಷಗಳ ಬ್ರೇಕ್ ಬಳಿಕ ವೆಡ್ಡಿಂಗ್ ಗಿಫ್ಟ್ ನಲ್ಲಿ ಮತ್ತೆ ಪ್ರೇಮಾ ಬಣ್ಣ ಹಚ್ಚಿದ್ದಾರೆ ಅಂದ್ರೆ ಈ ಚಿತ್ರದಲ್ಲಿ ಏನೋ ವಿಶೇಷತೆ ಇದೆ ಅನ್ನೋದು ಅವರ ಅಭಿಮಾನಿಗಳಿಗೆ ಪಕ್ಕಾ ಆಗಿದೆ. ಯಾಕಂದ್ರೆ ನಾಯಕಿಯಾಗಿ ಬೆಳ್ಳಿತೆರೆಗೆ ಪ್ರೇಮಾ ಎಂಟ್ರಿ ಕೊಟ್ಟಾಗಿನಿಂದ ಅವರು ನಿರ್ವಹಿಸಿರುವ ಪಾತ್ರಗಳು ಒಂದಕ್ಕಿಂತ ಒಂದು ಮರೆಯದಂತೆ ಮನಸಲ್ಲಿ ಇಂದಿಗೂ ಉಳಿದಿವೆ. ಪಾತ್ರಗಳ ಆಯ್ಕೆಯಲ್ಲಿ ಮೊದಲಿನಿಂದಲೂ ದಿ ಬೆಸ್ಟ್ ಅನಿಸಿಕೊಂಡಿದ್ದ ಇವರು ವೆಡ್ಡಿಂಗ್ ಗಿಫ್ಟ್ ಮೂಲಕ ಮತ್ತೊಮ್ಮೆ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಜುಲೈ 8 ರಂದು ರಾಜ್ಯಾದ್ಯಂತ ವೆಡ್ಡಿಂಗ್ ಗಿಫ್ಟ್ ಚಿತ್ರ ತೆರೆಕಾಣಲಿದೆ. ಈ ಮೂಲಕ ನಟಿ ಪ್ರೇಮಾ ಚಿತ್ರ ಬದುಕಿನ ಎರಡನೇ ಇನ್ನಿಂಗ್ಸ್‌ಗೆ ಭರ್ಜರಿ ಓಪನಿಂಗ್ ಸಿಗುತ್ತದೆಂಬ ನಂಬಿಕೆಯೊಂದಿಗೆ, ವೆಡ್ಡಿಂಗ್ ಗಿಫ್ಟ್ ಕಣ್ತುಂಬಿಕೊಂಡ ಪ್ರೇಕ್ಷಕರ ಅಭಿಪ್ರಾಯ ಪಡೆಯಲು ಚಿತ್ರತಂಡ ತಯಾರಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.