ವಾರಾಂತ್ಯ ಕರ್ಫ್ಯೂ: ಪ್ರವಾಸಿಗರ ಸಂಖ್ಯೆ ಇಳಿಕೆ

ನಿತ್ಯ ಒಂದೂವರೆ ಸಾವಿರ ಪ್ರವಾಸಿಗರು ಮಾತ್ರ ಆಗಮನ; ಕೋವಿಡ್‌ ಪರೀಕ್ಷಿಸಿದ ಬಳಿಕ ಅರಮನೆ ವೀಕ್ಷಣೆಗೆ ಅವಕಾಶ

Team Udayavani, Aug 13, 2021, 5:11 PM IST

ವಾರಾಂತ್ಯ ಕರ್ಫ್ಯೂ: ಪ್ರವಾಸಿಗರ ಸಂಖ್ಯೆ ಇಳಿಕೆ

ಮೈಸೂರು: ಸಂಭವನೀಯ ಕೋವಿಡ್‌ 3ನೇ ಅಲೆ ಭೀತಿ ಹಿನ್ನೆಲೆ ಜಿಲ್ಲೆಯಲ್ಲಿ ವಾರಾಂತ್ಯಕರ್ಫ್ಯೂ ಹಾಗೂ ನಿತ್ಯ ನೈಟ್‌ ಕರ್ಫ್ಯೂ ಜಾರಿಯಲಿ
ರುವುದರಿಂದ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪ್ರವಾಸಿ ತಾಣಗಳು ಜನರಿಲ್ಲದೇ ಭಣಗುಡುತ್ತಿವೆ.

ಕೋವಿಡ್‌ ಸೋಂಕು ಕಾಲಿಡುವುದಕ್ಕೂ ಮುನ್ನ ಮೈಸೂರು ಜಿಲ್ಲೆಗೆ ನಿತ್ಯ 10ರಿಂದ 12 ಸಾವಿರ ಮಂದಿ ಪ್ರವಾಸಿಗರು ಭೇಟಿ ನೀಡಿ ಒಂದೆರೆಡು ದಿನ ತಂಗುತ್ತಿದ್ದರು.ಆದರೆ ಕೋವಿಡ್‌ ಮೊದಲ ಅಲೆಯ ನಂತರ ಪ್ರವಾಸಿಗರ ಸಂಖ್ಯೆ 4ರಿಂದ 5 ಸಾವಿರಕ್ಕೆ ಇಳಿಕೆಯಾಗಿತ್ತು. ಆದರೆ ಮತ್ತೊಮ್ಮೆ 2ನೇ ಅಲೆಯಿಂದ ಲಾಕ್‌ಡೌನ್‌ ಹೇರಿದ್ದರಿಂದ ಪ್ರವಾಸೋದ್ಯಮ ಕ್ಷೇತ್ರ ಸಂಪೂರ್ಣ ನೆಲ ಕಚ್ಚಿದ್ದು, ನಿತ್ಯ 2 ಸಾವಿರ ಮಂದಿ ಪ್ರವಾಸಿಗರು ಮಾತ್ರ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.

ಈ ನಡುವೆ, ಕೇರಳಕ್ಕೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಕಳೆದ ವಾರ ವೀಕೆಂಡ್‌ ಕರ್ಫ್ಯೂ ಹಾಗೂ ನೈಟ್‌ ಕರ್ಫ್ಯೂ ಜಾರಿ ಗೊಳಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಒಂದು ಸಾವಿರದಿಂದ ಒಂದೂವರೆ ಸಾವಿರಕ್ಕೆ ಇಳಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲಾ ಪ್ರವಾಸಿ ಕೇಂದ್ರಗಳು ಪುನಾರಂಭವಾಗಿದ್ದರೂ ಪ್ರವಾಸಿಗರು ಮಾತ್ರ ಮೈಸೂರಿನತ್ತ ತಲೆ ಹಾಕದಿರುವುದು ಪ್ರವಾಸೋದ್ಯಮಕ್ಷೇತ್ರಕ್ಕೆ ಹೊಡೆತ ಬಿದ್ದಿದೆ.

ಇದನ್ನೂ ಓದಿ:55 ಸಾವಿರ ಅಂಕ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್; ಸಾರ್ವಕಾಲಿಕ ಗರಿಷ್ಠ ದಾಖಲೆ

ಹೊರ ರಾಜ್ಯದವರಿಗೆ ಕೋವಿಡ್‌ ಟೆಸ್ಟ್‌: ಮೈಸೂರು ಅರಮನೆಗೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಿ ನಂತರ ಅರಮನೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಇದರ ಜೊತೆಗೆ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಜೇಶನ್‌ ಮಾಡಲಾಗುತ್ತಿದೆ. ನಂತರ ದಿನಕ್ಕೆ ಮೂರು ಬಾರಿಯಂತೆ ಅರಮನೆಯಲ್ಲಿ ಸ್ಯಾನಿಟೈಸ್‌ಕಾರ್ಯ ನಡೆಸಲಾಗುತ್ತಿದೆ.ಜೊತೆಗೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲೂ ಕೋವಿಡ್‌ ಮಾರ್ಗಸೂಚಿ ಅನುಸರಿಸಿ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದ್ದು, ನಿತ್ಯ ಮೂರು ಬಾರಿ ಮೃಗಾಲಯ ಆವರಣವನ್ನು ಸ್ಯಾನಿಟೈಸ್‌ ಮಾಡಲಾಗುತ್ತಿದೆ. ಹಾಗೆಯೇ ಹೊರಗಿನಿಂದ ಬರುವವರು ವೆಟ್‌ ಮ್ಯಾಟ್‌ ತುಳಿದು ಒಳ ಬರುವಂತೆ ಪ್ರವೇಶ ದ್ವಾರದಲ್ಲಿ ವೆಟ್‌ ಮ್ಯಾಟ್‌ ಅಳವಡಿಸಲಾಗಿದೆ.

ಮಾಸ್ಕ್ ಇದ್ದವರಿಗಷ್ಟೇ ಪ್ರವೇಶ:ಮೈಸೂರಿನ ಚಾಮುಂಡಿಬೆಟ್ಟ ಮತ್ತು ನಂಜನಗೂಡು ಶ್ರೀಕಂಠೇಶ್ವರ ದೇಗುಲಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.ಜೊತೆಗೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್‌ ವ್ಯವಸ್ಥೆ ಮಾಡಲಾಗಿದೆ.

ದೇಗುಲದ ಪ್ರವೇಶ ದ್ವಾರದಲ್ಲಿ ಸಿಬ್ಬಂದಿಯಿಂದ ಕೋವಿಡ್‌ ಮಾರ್ಗಸೂಚಿಸಿ ಪಾಲಿಸುವಂತೆ ಸಲಹೆ ಕೊಡಿಸುವುದು,ಸ್ಯಾನಿಟೈಸರ್‌ ನೀಡುವುದು ಹಾಗೂ ಥರ್ಮಲ್‌ ಸ್ಕ್ಯಾನಿಂಗ್‌ ಮಾಡುವ ಕೆಲಸ ನಡೆಯುತ್ತಿದೆ. ಶ್ರೀಕಂಠೇಶ್ವರ ದೇವಾಲಯದಲ್ಲಿ ದೇವರ ದರ್ಶ  ನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಶ್ರಾವಣಮಾಸ: ದೇಗುಲಗಳಿಗೆ ನಿರ್ಬಂಧ
ಮೈಸೂರು: ಕೋವಿಡ್‌ ಹಿನ್ನೆಲೆ ನಾಲ್ಕು ಶ್ರಾವಣ ಶನಿವಾರಗಳಂದು ಹಾಗೂ ಶ್ರಾವಣ ಮಾಸದ ಶುಕ್ರವಾರ ಮತ್ತು ಭಾನುವಾರಗಳಂದು
ಮೈಸೂರಿನ ವಿವಿ ಪುರಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಸುತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್‌
ಆಯುಕ್ತ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು ಶ್ರಾವಣ ಮಾಸದ ವಿಶೇಷ ದಿನಗಳಂದು ಮೈಸೂರು ನಗರದ ವಿ.ವಿ.ಪುರಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಕೋವಿಡ್‌-19 ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ 200 ಮೀ.ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕೋವಿಡ್‌ ಆತಂಕವಿರುವ ಹಿನ್ನಲೆಯಲ್ಲಿ ನಾಲ್ಕು ಶ್ರಾವಣ ಶನಿವಾರಗಳಂದು ಹಾಗೂ ಶ್ರಾವಣ ಮಾಸದ ಶುಕ್ರವಾರ ಮತ್ತು ಭಾನುವಾರಗಳಂದು ದೇವಸ್ಥಾನದಲ್ಲಿ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆ ಇರುವುದರಿಂದ ಮೊದಲನೇ ಶ್ರಾವಣ ಮಾಸದ ಆ.13, 14, 15ರಂದು ಹಾಗೂ 2ನೇ ಶ್ರಾವಣ ಶುಕ್ರವಾರ ಆ.20, 21, 22 ರಂದು, ಮೂರನೇ ಶ್ರಾವಣ ಮಾಸದ ಆ.27, 28, 29ರಂದು ಹಾಗೂ 4 ನೇ ಶ್ರಾವಣ ಮಾಸದ ಸೆ.03, 04, 05ರಂದು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮಾತ್ರ ಪೂಜೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿ, ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೋವಿಡ್‌ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ರಜಾ ದಿನ ಹಾಗೂ ಶನಿವಾರ ಮತ್ತು ಭಾನುವಾರ ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.