ಪರಿಪೂರ್ಣತೆಯ ಬೆನ್ನತ್ತಿರುವ ನಾವು ಏನಾಗುತ್ತಿದ್ದೇವೆ?


Team Udayavani, Jun 3, 2020, 6:28 PM IST

ಪರಿಪೂರ್ಣತೆಯ ಬೆನ್ನತ್ತಿರುವ ನಾವು ಏನಾಗುತ್ತಿದ್ದೇವೆ?

ಭಗವಂತ ಎಲ್ಲದುದರ ಸೃಷ್ಟಿಕರ್ತ. ನಮ್ಮ ಹುಟ್ಟು ಕೂಡ ಅವನದ್ದೇ ಆದ ದೃಷ್ಟಿಯಲ್ಲಿ ಆದದ್ದು. ನಮ್ಮ ಸೃಷ್ಟಿಸುವ ಜತೆಗೆ ಸೃಜನಶಿಲತೆ ಎಂಬ ವರವನ್ನು ಆತ ನಮಗೆ ಬಳುವಳಿಯಾಗಿ ನೀಡಿದ್ದಾನೆ. ಆದರೆ ಎಲ್ಲದರಲ್ಲೂ ಪರಿಪೂರ್ಣತೆಯ ಬೆನ್ನತ್ತಿರುವ ನಾವು ಒಂದೆಡೆಯಿಂದ ನಮ್ಮತನವನ್ನೆ ಕಳೆದುಕೊಳ್ಳುತ್ತಿದ್ದೇವೆ. ಇದೇ ನಮ್ಮಲ್ಲಿನ ಉತ್ಸಾಹ ಕುಗ್ಗಲು ಪ್ರಮುಖ ಕಾರಣ.

ನಮ್ಮಲ್ಲಿನ ಸೃಜನಶೀಲತೆಯ ಅರಿವೇ ನಮಗಿಲ್ಲದ ಕಾರಣ ಎಲ್ಲದರಲ್ಲೂ ಅಪೂರ್ಣತೆಯ ಭಾವ, ಪ್ರತಿಯೊಂದಕ್ಕೂ ಕಿರುಚಾಟ, ಅರೆಬರೆ ಕೆಲಸ ಇವೆಲ್ಲವೂ ನೋಡುಗರಿಗೆ ನಿಮ್ಮ ಸೃಜನಾತ್ಮಕತೆ ಎಷ್ಟಿದೆ ಎಂಬ ಪ್ರಶ್ನೆ ಹುಟ್ಟಲು ಕಾರಣವಾಗುತ್ತದೆ. ನಾನು ಒಂಟಿಯಲ್ಲ. ಜಗತ್ತೇ ನನ್ನ ಜತೆ ಇದೆ ಎಂಬ ಭಾವ ನಮ್ಮಲ್ಲಿರಬೇಕು. ಭಗವಂತ ನೀಡಿದ ಸೃಜನಾತ್ಮಕತೆಯ ಸದ್ವಿನಿಯೋಗ ಆಗಬೇಕು. ಅದಾದಾಗ ಮಾತ್ರ ನಾವು ಮತ್ತು ನಮ್ಮ ಕೆಲಸಗಳೆರಡೂ ಪರಿಪೂರ್ಣವಾಗಲು ಸಾಧ್ಯ. ಮನಸ್ಸು ಗೃಹಿಸುವಷ್ಟು ಪರಿಪೂರ್ಣತೆಯನ್ನು ನಾವು ಸಾಧಿಸುವುದು ಸುಲಭವಾಗಿಲ್ಲ. ಪತ್ರಿಕೆ ಓದಿದ ಬಳಿಕ ಅಥವಾ ಸಿನೆಮಾ ನೋಡಿದ ಬಳಿಕ ನಿಮಗೆ ಇನ್ನೂ ಏನೋ ಇಲ್ಲಿ ಬೇಕಿತ್ತು ಎಂದು ಎನಿಸಿಯೇ ಎನಿಸುತ್ತದೆ. ಇದರಂತೆಯೇ ನಿಮ್ಮ ಕೆಲಸಗಳೂ ಕೂಡ. ನೆನಪಿಡಿ ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ.

ನಕರಾತ್ಮಕ ಫ‌ಲಿತಾಂಶ ಕೆಡುಕಲ್ಲ
ಸೋತ ಮಾತ್ರಕ್ಕೆ ಜೀವನ ಮುಗಿಯಲಿಲ್ಲ. ಪ್ರತೀ ಅಂತ್ಯವೂ ಹೊಸ ಆರಂಭಕ್ಕೆ ಬುನಾದಿ. ಸೋಲು ನಿಮ್ಮ ಮುಂದಿನ ಗೆಲುವಿಗೆ ಪಾಠವಾಗಬೇಕೇ ಹೊರತು ಅಡ್ಡಿಯಾಗಬಾರದು. ಹೀಗಾಗಿಯೇ ಸೋಲನ್ನು ಸಂಭ್ರಮಿಸಲು ಕಲಿಯಿರಿ. ಭಗವಂತನ ಅನುಗ್ರಹವಿಲ್ಲ ಹುಲ್ಲು ಕಡ್ಡಿಯೂ ಹಂದಾಡದು ಎಂಬ ಮಾತಿದೆ. ಹೀಗಾಗಿ ಶಕ್ತಿ ಮೀರಿ ಪ್ರತಿಯೊಂದನ್ನೂ ಪ್ರಯತ್ನಿಸಿ. ಫ‌ಲಾಫ‌ಲವನ್ನು ಭಗವಂತನ ಅನುಗ್ರಹಕ್ಕೆ ಬಿಟ್ಟುಬಿಡಿ. ಒಂದೊಮ್ಮೆ ನೀವು ಸೋತರೆ ಭಗವಂತನ ಅನುಗ್ರಹ ನಿಮ್ಮ ಮೇಲಿಲ್ಲ ಎಂದಲ್ಲ. ಬದಲಾಗಿ ಇದಕ್ಕಿಂತ ದೊಡ್ಡ ಅವಕಾಶವನ್ನು ಭಗವಂತ ನಿಮಗಾಗಿ ನೀಡಲಿದ್ದಾನೆ ಎಂದತರ್ಥ.

ತಪ್ಪುಗಳಾದಾಗ ಅಥವಾ ನಿಮ್ಮ ಪ್ರಯತ್ನದಲ್ಲಿ ಸೋಲುಂಡಾಗ ನಿಮ್ಮನ್ನು ನೀವೇ ಕ್ಷಮಿಸುವ ಅಭ್ಯಾಸ ಮಾಡಕೊಳ್ಳಿ. ಒಮ್ಮೆ ಜೋರಾಗಿ ನಕ್ಕು ನಿಮ್ಮ ನೋವು ಮರೆತುಬಿಡಿ. ಸೋಲುಗಳು ಸಾಧನೆಯ ಹಾದಿಯಲ್ಲಿ ಸಿಗುವ ಹಂತಗಳಷ್ಟೆ. ಇವೇ ನಮ್ಮ ಮುಂದಿನ ಗೆಲುವಿಗಾಗಿ ನಡೆದಿರುವ ತಾಲೀಮುಗಳು ಎಂದು ಭಾವಿಸಿ. ಉತ್ತಮವಾಗಿ ಕೆಲಸ ಮಾಡಲಾಗದಿದ್ದರೆ ಬಿಡಿ, ಮುಂದೆ ಅತ್ಯುತ್ತಮವಾಗಿ ಕೆಲಸ ಮಾಡುವ ಸಂಕಲ್ಪ ತೊಡೋಣ.

-ಪಿ. ಮಂಜುನಾಥ್‌, ಊರಕೇರಿ

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.