ರೋಗ ನಿರೋಧಕ ಶಕ್ತಿಯ ಅವಧಿ ಎಷ್ಟು?
Team Udayavani, Apr 7, 2021, 6:20 AM IST
ಈಗ ದೇಶಾದ್ಯಂತ 45 ವರ್ಷ ಮೀರಿದ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ತಿಂಗಳ ಅಂತರದಲ್ಲಿ ಎರಡು ಡೋಸ್ ನೀಡಲಾಗುತ್ತಿದೆ. ಈಗಾಗಲೇ 6ರಿಂದ 7 ಕೋಟಿ ಮಂದಿ ಲಸಿಕೆ ಪಡೆದಿದ್ದಾರೆ. ಹಾಗಾದರೆ ಒಮ್ಮೆ ಲಸಿಕೆ ಪಡೆದ ಮೇಲೆ, ಇದರ ಪರಿಣಾಮ ಎಷ್ಟು ದಿನ ಇರುತ್ತದೆ ಗೊತ್ತಾ? ಈ ಕುರಿತ ಸಂದೇಹಗಳನ್ನು ನಿವಾರಿಸುವ ಯತ್ನ ಇಲ್ಲಿದೆ.
1. ಎಷ್ಟು ಅವಧಿವರೆಗೆ ಲಸಿಕೆಯ ರೋಗ ನಿರೋಧಕ ಶಕ್ತಿ ಇರುತ್ತದೆ?
ಆರೋಗ್ಯ ತಜ್ಞರ ಪ್ರಕಾರ, ಒಮ್ಮೆ ಲಸಿಕೆ ಪಡೆದ ಮೇಲೆ ಇದರ ಪರಿಣಾಮ ಆರು ತಿಂಗಳವರೆಗೆ ಇರಲಿದೆ. ಈ ಅವಧಿಯಲ್ಲಿ ಲಸಿಕೆ ತೆಗೆದುಕೊಂಡವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿಯೇ ಇರುತ್ತದೆ.
2. ಲಸಿಕೆ ತೆಗೆದುಕೊಳ್ಳುವುದರಿಂದ ಆಗುವ ಉಪಯೋಗವೇನು?
ರೋಗ ನಿರೋಧಕ ಶಕ್ತಿ ಹೆಚ್ಚುವುದರಿಂದ ಕೊರೊನಾ ಬರುವ ಸಾಧ್ಯತೆ ಕಡಿಮೆ. ಬಂದರೂ ಭಾರೀ ಕಡಿಮೆ ಎನ್ನುವಷ್ಟು ಮಂದಿಗೆ ಬರಬಹುದು. ಆದರೆ ಕೊರೊನಾ ವ್ಯಾಪಿಸುವಿಕೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ ತಜ್ಞರು.
3. ಲಸಿಕೆ ಹೇಗೆ ಕೆಲಸ ಮಾಡುತ್ತದೆ?
ಲಸಿಕೆಯನ್ನು ತೆಗೆದುಕೊಂಡ ಮೇಲೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೆಯೇ ದೇಹದಲ್ಲಿ ಆ್ಯಂಟಿಬಾಡಿಯನ್ನು ಉತ್ಪತ್ತಿ ಮಾಡುತ್ತದೆ.
4. ಲಸಿಕೆಯ ಪರಿಣಾಮಕತ್ವ ಗೊತ್ತಾಗಿದ್ದು ಹೇಗೆ?
ಈಗಾಗಲೇ ಲಸಿಕೆ ಪಡೆದಿರುವ ಮುಂಚೂಣಿ ಕಾರ್ಯಕರ್ತರಲ್ಲಿ 13 ವಾರಗಳ ವರೆಗೆ ಪ್ರತೀ ವಾರವೂ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ ಕಂಡು ಬಂದ ಅಂಶಗಳ ಪ್ರಕಾರ, ಲಸಿಕೆಯ ಪರಿಣಾಮಕತ್ವ 6 ತಿಂಗಳವರೆಗೆ ಇರಲಿದೆ.
5 ಲಸಿಕೆ ತೆಗೆದುಕೊಂಡ ಮೇಲೂ ಮಾಸ್ಕ್ ಧರಿಸಿಕೊಳ್ಳಬೇಕಾ?
ಹೌದು, ಪ್ರಸ್ತುತ ಸಂದರ್ಭದಲ್ಲಿ ಎಲ್ಲ ಭಾರವನ್ನು ಲಸಿಕೆ ಮೇಲೆ ಹಾಕಿ ಓಡಾಡಲು ಸಾಧ್ಯವಿಲ್ಲ. ಕೊರೊನಾ ಹೋಗುವವರೆಗೂ ಮಾಸ್ಕ್ ಧರಿಸಿ ಓಡಾಡಲೇ ಬೇಕು. ಹಾಗೆಯೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಜತೆಗೆ ಇತರ ಎಲ್ಲ ಆರೋಗ್ಯಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು.
6 ಎಲ್ಲರೂ ಲಸಿಕೆ ಪಡೆಯಲೇ ಬೇಕಾ?
ಸದ್ಯ ಸರಕಾರವೇ ನಿಗದಿಪಡಿಸಿರುವ ವಯಸ್ಸಿನ ಮೇಲಿನವರು ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಇದು ಅಂದರೆ ಭಾರತದಲ್ಲಿ 45 ವರ್ಷ ದಾಟಿದ ಎಲ್ಲ ಆರೋಗ್ಯವಂತ ಮತ್ತು ಇತರ ಅನಾರೋಗ್ಯ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಎಲ್ಲರೂ ಬಳಸಿಕೊಳ್ಳಬೇಕು.
ಮೂಲ: ಸಿಎನ್ಎನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ