ಹೌಡಿ ಮೋದಿ ಕಾರ್ಯಕ್ರಮದಿಂದ ಏನನ್ನು ನಿರೀಕ್ಷಿಸಬಹುದು ?


Team Udayavani, Sep 22, 2019, 4:03 PM IST

howdy

ಮಣಿಪಾಲ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಅಮೇರಿಕಾದ ಹ್ಯೂಸ್ಟನ್ ನಲ್ಲಿ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶ್ವವೇ ಈ ಕಾರ್ಯಕ್ರಮದ ಮೇಲೆ ದೃಷ್ಟಿ ನೆಟ್ಟಿದೆ. ಈ ಸಂದರ್ಭದಲ್ಲಿ ‘ಉದಯವಾಣಿ’ ತನ್ನ ಓದುಗರಿಗೆ ಹೌಡಿ ಮೋದಿ ಕಾರ್ಯಕ್ರಮದಿಂದ ಏನನ್ನು ನಿರೀಕ್ಷಿಸಬಹುದು? ಎಂಬ ಪ್ರಶ್ನೆಯನ್ನು ಕೇಳಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ಶಾಮ್ ನಾಯಕ್:  ಈ ಬಾರಿ ಮೋದಿಜಿ ತಮ್ಮ ಜೀವನದ ಇನ್ನೊಂದು ಅಚ್ಚರಿಯ ಗುಟ್ಟೊಂದು ಹೇಳಲಿದ್ದಾರೆ ಕಿರುತೆರೆಯ ಮೋಗ್ಲಿ ಧಾರವಾಯಿ ಅವರ ಬಾಲ್ಯದ ಜೀವನದ ಆಧಾರವಾಗಿ ಚಿತ್ರಿಸಲ್ಪಟ್ಟಿದ್ದು ಹಾಗು ಮೋದಿಜಿ ಜನನ ಅಮೆಝೋನ್ ಕಾಡಿನಲ್ಲಿ ಆಗಿದ್ದು ಎಂದು ತಮ್ಮ ಬಾಲ್ಯದ ನೆನಪಿನ ಬುತ್ತಿ ಬಿಚ್ಚಿಡುತ್ತಾರೆ

ನಾರಾಯಣ್ ದೇವಾಡಿಗ ಎಂ ಎಚ್:  ಇಂದು ಮೋದಿ ವಿಶ್ವದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸುತ್ತಿರುವುದು ನಮ್ಮಲ್ಲರಿಗೂ ಸಂತಸ ತರುವ ವಿಷಯ. ಆದರೆ ನಮ್ಮದೆ ದೇಶದ ಕೆಲವು ನಂಜು ಹುಳುಗಳು ಹಾಗು ವಿಷಜಂತುಗಳು ಕೊಳಕು ರಾಜಕೀಯವನ್ನು ಕಮೆಂಟ್ ಮೂಲಕ ಬರೆದು ತನ್ನ ತೆವಲನ್ನು ತೀರಿಸಿಕೊಳ್ಳುತ್ತಿರುವುದು ವಿಷಾದದ ಸಂಗತಿ. ನೀವು ವ್ಯೆಯುಕ್ತಿತವಾಗಿ ಅಥವಾ ರಾಜಕಿಯವಾಗಿ ಒಬ್ಬ ವ್ಯಕ್ತಿಯನ್ನು ವಿರೋಧಿಸಿ‌. ಆದರೆ ಆತ ಮಾಡಿರುವ ಜನಪರ ಕೆಲಸವನ್ನು ಹೀಯಾಳಿಸಬೇಡಿ, ನಿಂದಿಸಬೇಡಿ. ಮೋದಿ ಇಂದು ನಮ್ಮ ನಿಮ್ಮೆಲ್ಲರ ಪ್ರಧಾನಿಯಾಗಿ ಹಾಗೂ ನೂರಮೂವತ್ತು ಕೋಟಿ ಜನರ ಪ್ರತಿನಿಧಿಯಾಗಿ ಇಂದು ಅಮೇರಿಕಕ್ಕೆ ಭೇಟಿ ನೀಡಿದ್ದಾರೆ. ಆ ಭೇಟಿಯ ಲಾಭ ನಷ್ಟವನ್ನು ಈಗಲೇ ಲೆಕ್ಕಾಚಾರ ಮಾಡುತ್ತಿದ್ದರೆ ದೇಶ ಮುಂದುವರಿಯಲು ಅಸಾಧ್ಯ.

ಮಹೇಶ್ ಕರಡಿಗುಡ್ಡ:  ಸದ್ಯಕ್ಕೆ  ಉತ್ತರ ಕರ್ನಾಟಕಕ್ಕೆ ಪರಿಹಾರದ ನಿರೀಕ್ಷೆ

ದಯಾನಂದ ಕೊಯಿಲ:  ವಿದೇಶದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಭಾರತದೊಳಗಿನ ಪರಿಸ್ಥಿತಿಯ ಅರಿವು ಇಲ್ಲ. ಭಾರತಕ್ಕೆ ಸಧ್ಯ ಬೇಕಾಗಿರುವುದು ಮಹಾನ್ ಯೋಜನೆಗಳಲ್ಲ ಬಿಗಡಾಯಿಸುತ್ತಿರುವ ಅಂತರ್ದೇಶೀಯ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕ್ಕೊಳ್ಳವ ನಿರ್ಧಾರಗಳು.

ಚಂದು ರೈ ಬಂಟ್ಸ್:  ಅಮೆರಿಕನ್ನರು ಹಾಗೂ ಭಾರತೀಯರ ನಡುವಣ ಮತ್ತಷ್ಟು ಬಾಂಧವ್ಯ ವೃದ್ಧಿಗೆ ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಇದೊಂದು ಸಿಹಿ ಸುದ್ದಿಯಾಗಬಹುದು . ಮೋದಿಯವರ ಕಾರ್ಯ ಸಾಧನೆಯಿಂದಾಗಿ ನಮ್ಮ ದೇಶವನ್ನು ನೆರೆಯ ದೇಶಗಳು ಗೌರವ ಸ್ಥಾನದಲ್ಲಿ ಇಟ್ಟಿರುವುದನ್ನು ಗಮನಿಸಿದರೆ ತುಂಬಾ ಸಂತೋಷವಾಗುತ್ತೆ.

ರಾಜೇಶ್ ಅಂಚನ್ ಎಂ ಬಿ: ಖಂಡಿತಾ ಒಳ್ಳೆಯದನ್ನು ನಿರೀಕ್ಷೇ ಮಾಡಬಹುದು. ಇಂದು ಭಾರತ ವಿಶ್ವದಲ್ಲಿ ಅಮೆರಿಕಕ್ಕೆ ಸೆಡ್ಡು ಹೊಡೆಯೋ ರೀತಿಯಲ್ಲಿ ಬೆಳೆದಿದೆ. ಒಬ್ಬ ವಿಶ್ವ ನಾಯಕನಾಗಿ ಅವರ ಭಾಷಣ ಮಹತ್ವದ್ದು. ಪಾಕ್ ಬೆಂಬಲಿತ ಭಯೋತ್ಪಾದನೆ ನಿರ್ಮೂಲನೆಯಲ್ಲಿ ಮೋದಿಜಿಯವರ ಭಾಷಣ ಒಂದು ಮೈಲುಗಲ್ಲಾಗುವ ನಿರೀಕ್ಷೆಯಿದೆ. ಭಾರತವನ್ನು ಒಂದು ಬಲಿಷ್ಠ ರಾಷ್ಟ್ರವಾಗಿ ಮಾಡಿರುವ ಮೋದಿಜಿ ಯವರ ಈ ಭಾಷಣ ಒಂದು ಮೈಲುಗಲ್ಲಾಗಲಿ.

ರಾಧಿಕ ಪ್ರಭು: ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನ ಮಂತ್ರಿ ವಿಶ್ವ ಮಟ್ಟದಲ್ಲಿ ಇಂತಹ ಗೌರವ ಪಡೆಯುತ್ತಿದ್ದಾರೆ. ಇಡೀ ಜಗತ್ತು ಮೋದಿಯವರ ಸಲಹೆಗೆ ಕಾಯುತ್ತಿದೆ.

ಜೋಸೆಫ್ ರೋಡ್ರಿಗಸ್: ಹೌಡಿ ಮೋದಿ ಕಾರ್ಯಕ್ರಮದಿಂದ ದೇಶದ ಅರ್ಥ ವ್ಯವಸ್ಥೆ ಮೇಲೆತ್ತಲು ಸಾದ್ಯವೆ. ಅಥವಾ ಈ ಕಾರ್ಯಕ್ರಮಕ್ಕಾಗಿ ಇನ್ನಷ್ಟು ದುಂದುವೆಚ್ಚವೇ

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.