ನೆರೆಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ: BSY
Team Udayavani, Aug 5, 2019, 10:31 AM IST
ಬಳ್ಳಾರಿ: ನೆರೆ ಹಾವಳಿಯಿಂದ ಏನೇ ನಷ್ಟವಾದರೂ ಅದಕ್ಕೆ ಸೂಕ್ತ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಬಿ.ಎಸ್ಯಡಿಯೂರಪ್ಪ ಹೇಳಿದರು.
ಜಿಲ್ಲೆಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸೊಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆಲಮಟ್ಟಿ ಜಲಾಶಯದಿಂದ 2.11 ಲಕ್ಷ ಕ್ಯೂಸೆಕ್, ನಾರಾಯಣಪುರ ಜಲಾಶಯದಿಂದ 2.9 ಲಕ್ಷ ಕ್ಯೂಸೆಕ್ ಸೇರಿ ಒಟ್ಟು 4 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಎನ್ ಡಿಆರ್ ಎಫ್ ಸಹ ಕಾರ್ಯಾಚರಣೆಗೆ ಇಳಿದಿದೆ. ಕೇಂದ್ರದಿಂದಲೂ ಮಿಲಿಟರಿ ಪಡೆ ಬಂದಿದೆ. ಭಾನುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಾಗಾಗಿ ನೆರೆಹಾವಳಿಯಿಂದ ಏನೇ ಸಮಸ್ಯೆ, ನಷ್ಟವಾದರೂ ಯಾವುದೇ ಪರಿಹಾರ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು.
ಈ ಹಿಂದೆಯೂ ನಾನು ಮುಖ್ಯಮಂತ್ರಿ ಆಗಿದ್ದಾಗ ನೆರೆಹಾವಳಿ ಸಮಸ್ಯೆಯಾಗಿತ್ತು ಎಂದ ಸಿಎಂ ಯಡಿಯೂರಪ್ಪ, ಆಗ ಇದಕ್ಕಿಂತಲೂ ಹೆಚ್ಚು ಸಮಸ್ಯೆಯಾಗಿತ್ತು. ಅದಕ್ಕೆ ಹೋಲಿಸಿದರೆ ಈಗ ಕಡಿಮೆಯಾಗಿದೆ ಎಂದರು.
ಬಳ್ಳಾರಿಯಲ್ಲಿ ಮಳೆಯಿಲ್ಲ. ಮಲೆನಾಡು ಪ್ರದೇಶವಾದ ಶಿವಮೊಗ್ಗದಲ್ಲೂ ಮಲೆಯಿಲ್ಲ. ಹೀಗೆ ರಾಜ್ಯದಲ್ಲಿ ವಿಚಿತ್ರ ಪರಿಸ್ಥಿತಿ ಇದೆ. ಈವಾರವಾದರೂ ಒಳ್ಳೆಯ ಮಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಈ ವೇಳೆ ಶಾಸಕ ಸೋಮಶೇಖರರೆಡ್ಡಿ, ಡಿಸಿ ಎಸ್.ಎಸ್. ನಕುಲ್, ಐಜಿಪಿ ಎಂ.ನಂಜುಂಡಸ್ವಾಮಿ, ಎಸ್ ಪಿ .ಸಿ.ಕೆ.ಬಾಬಾ, ಹೆಚ್ಚುವರಿ ಎಸ್.ಪಿ ಲಾವಣ್ಯ, ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು, ಪಾಲಿಕೆ ಆಯುಕ್ತೆ ತುಷಾರಮಣಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ