ಪರೀಕ್ಷಾ ಅಕ್ರಮದ ಆರೋಪಿ ಆರ್‌.ಡಿ.ಪಾಟೀಲ್‌ ಸೆರೆ ಯಾವಾಗ?


Team Udayavani, Nov 9, 2023, 11:00 PM IST

RD PATIL

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿರುವ ಆರ್‌.ಡಿ. ಪಾಟೀಲ್‌ ತಪ್ಪಿಸಿಕೊಂಡಿದ್ದು, ಪೊಲೀಸರು ಈತನಿಗಾಗಿ ಬಲೆ ಬೀಸಿರುವುದು ಗೊತ್ತೇ ಇದೆ. ಈ ಹಿಂದೆಯೂ ಬಿಜೆಪಿ ಸರಕಾರವಿದ್ದ ಅವಧಿಯಲ್ಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌(ಪಿಎಸ್‌ಐ) ಪರೀಕ್ಷಾ ಅಕ್ರಮದಲ್ಲಿಯೂ ಈತ ಪ್ರಮುಖ ಆರೋಪಿಯಾಗಿದ್ದ. ಆಗಲೂ ಜೈಲಿಗೆ ಹೋಗಿದ್ದ ಈತ ಜಾಮೀನಿನಿಂದ ಹೊರಬಂದು, ಇತ್ತೀಚೆಗಷ್ಟೇ ನಡೆಸಿದ ಕೆಇಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಆಗಿದ್ದಾನೆ.

ಆರ್‌.ಡಿ.ಪಾಟೀಲ್‌ ಬಂಧನದ ವಿಚಾರವಾಗಿ ಈಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ದೊಡ್ಡ ವಾಕ್ಸಮರವೇ ನಡೆದಿದೆ. ಬಿಜೆಪಿ ಅವಧಿಯಲ್ಲಿ ಈತನನ್ನು ಚೆನ್ನಾಗಿ ನಡೆಸಿಕೊಳ್ಳಲಾಗಿತ್ತು, ಈತನ ಮೇಲೆ ಕೆಲವು ನಾಯಕರ ಕೃಪಾಕಟಾಕ್ಷವಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದರೆ, ಈಗ ಕಾಂಗ್ರೆಸ್‌ನ ನಾಯಕರೇ ಆರ್‌.ಡಿ.ಪಾಟೀಲ್‌ ಬೆನ್ನಿಗೆ ನಿಂತಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಪ್ರಕರಣ ರಾಜಕೀಯವಾಗಿ ದೊಡ್ಡ ಸದ್ದು ಮಾಡುತ್ತಿದೆಯಷ್ಟೇ. ಆದರೆ ವರ್ಷವಿಡೀ ಇಂಥ ಪರೀಕ್ಷೆಗಳಿಗಾಗಿ ಓದಿ, ಆರ್‌.ಡಿ.ಪಾಟೀಲ್‌ನಂಥ ಅಕ್ರಮ ಎಸಗುವವರಿಂದಾಗಿ ತಮಗೆ ಅನ್ಯಾಯವಾಗುತ್ತಿದೆ ಎಂಬ ಪರೀಕ್ಷಾರ್ಥಿಗಳ ನೋವನ್ನು ಕೇಳುವವರಿಲ್ಲದಂತಾಗಿದೆ.

ಪರೀಕ್ಷಾ ಅಕ್ರಮದ ಆರೋಪಿ ಆರ್‌.ಡಿ.ಪಾಟೀಲ್‌ ದೊಡ್ಡ ಮಟ್ಟದ ಪ್ರಭಾವ ಹೊಂದಿರಬಹುದು ಎಂಬುದಕ್ಕೆ ಇತ್ತೀಚಿನ ಬೆಳವಣಿಗೆಗಳೂ ಸಾಕ್ಷಿಯಾಗಿವೆ. ಈತನಿರುವ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದು ಹೋಗುವ ವೇಳೆಗೆ, ಅಲ್ಲಿಂದ ಗೋಡೆ ಹಾರಿ ತಪ್ಪಿಸಿಕೊಂಡು ಹೋಗುವ ಫೋಟೋಗಳೂ ವೈರಲ್‌ ಆಗಿವೆ. ಇದು ಆತನಿಗಿರುವ ಪ್ರಭಾವವನ್ನು ತಿಳಿಸುತ್ತದೆ. ಅಲ್ಲದೆ ಈತನ ಬಂಧನ ವಿಚಾರದಲ್ಲಿ ಪೊಲೀಸ್‌ ಇಲಾಖೆಯೂ ಯಾಮಾರಿರುವ ಸಂದೇಹವೂ ಹುಟ್ಟುತ್ತದೆ.

ಈಗ ಮೂರು ಪೊಲೀಸ್‌ ತಂಡಗಳು ಈತನ ಪತ್ತೆಗಾಗಿ ಹುಡುಕಾಟ ನಡೆಸಿವೆ. ಒಂದು ತಂಡ ಮಹಾರಾಷ್ಟ್ರ, ಮತ್ತೂಂದು ತಂಡ ಆಂಧ್ರ, ಇನ್ನೊಂದು ತಂಡ ಗುಪ್ತ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿವೆ. ಕಲಬುರಗಿಯಲ್ಲೇ ಇದ್ದರೂ, ಉತ್ತರ ಪ್ರದೇಶದಲ್ಲಿ ಇರುವುದಾಗಿ ಮೊಬೈಲ್‌ ಲೋಕೇಶನ್‌ ಬರುವಂತೆ ಮಾಡಿ ಪೊಲೀಸರಿಗೇ ಯಾಮಾರಿಸಿದ್ದಾನೆ. ಇದರ ಮಧ್ಯೆ ಆರ್‌.ಡಿ.ಪಾಟೀಲ್‌ ತಪ್ಪಿಸಿಕೊಂಡು ಹೋದ ಮೇಲೆ, ಆತನ ಬಂಧನ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅಫ‌ಜಲಪುರ ಸಿಪಿಐಗೆ ಕಲಬುರಗಿ ಎಸ್‌ಪಿ ನೋಟಿಸ್‌ ನೀಡಿದ್ದಾರೆ. ಜತೆಗೆ ಪ್ರಕರಣ ನಡೆದು ಎರಡು ವಾರಗಳಾದರೂ ಈತನನ್ನು ಬಂಧಿಸಿಲ್ಲವೇಕೆ ಎಂದೂ ಪ್ರಶ್ನಿಸಿದ್ದಾರೆ. ಸಾರ್ವಜನಿಕ ವಿಚಾರದಲ್ಲಿ ಇದು ಕಣ್ಣೊರೆಸುವ ತಂತ್ರ ಎಂದೇ ಹೇಳಲಾಗುತ್ತಿದೆ.

ಏನೇ ಆಗಲಿ ಇದುವರೆಗೆ ಆರ್‌.ಡಿ.ಪಾಟೀಲ್‌ನನ್ನು ಬಂಧಿಸದೇ ಇರುವುದು ಅಕ್ಷಮ್ಯ ಅಪರಾಧ. ಪ್ರಕರಣ ನಡೆದು ಎರಡು ವಾರವಾದರೂ ಪೊಲೀಸರು ಎಚ್ಚೆತ್ತಿಲ್ಲವೇಕೆ ಎಂಬುದು ಜನರ ಪ್ರಶ್ನೆ. ಈತನನ್ನು ಬಂಧಿಸದಂತೆ ಯಾವುದಾದರೂ ಪ್ರಭಾವಿ ಶಕ್ತಿ ತಡೆದಿದೆಯೇ ಎಂಬುದರ ಬಗ್ಗೆಯೂ ತನಿಖೆಯಾಗಬೇಕಿದೆ. ಜತೆಗೆ ಈತನನ್ನು ಬಂಧಿಸಿ, ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಯಲ್ಲೂ ಅಕ್ರಮ ಎಸಗದಂತೆ ನೋಡಿಕೊಳ್ಳಬೇಕಾದ ಹೊಣೆಯೂ ಸರಕಾರಕ್ಕಿದೆ.

 

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.