ಟೀಕೆ ಬಂದಾಗಲೆಲ್ಲ ಆರೆಸ್ಸೆಸ್‌ ಬೆಳೆದಿದೆ: ನಾಗೇಶ್‌


Team Udayavani, Oct 9, 2021, 6:45 AM IST

ಟೀಕೆ ಬಂದಾಗಲೆಲ್ಲ ಆರೆಸ್ಸೆಸ್‌ ಬೆಳೆದಿದೆ: ನಾಗೇಶ್‌

ಕುಂದಾಪುರ: ಆರೆಸ್ಸೆಸ್‌ ಕುರಿತು ವಿಪಕ್ಷಗಳು ಟೀಕೆ ಮಾಡಿದಾಗಲೆಲ್ಲ ಸಂಘ ಮತ್ತಷ್ಟು ಬೆಳೆದಿದೆ. ಸುಳ್ಳು ಹೇಳಿ, ಟೋಪಿ ಹಾಕಿ ಆಡಳಿತ ನಡೆಸಿದವರಿಗೆ ಸತ್ಯವನ್ನು ಅರಗಿಸಿಕೊಳ್ಳಲು ಆಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಹೇಳಿದರು.

ಇಲ್ಲಿನ ಜೂನಿಯರ್‌ ಕಾಲೇಜಿಗೆ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಶಾಲೆಗಳ ಜಾಗಗಳ ದಾಖಲಾತಿ ಯನ್ನು ಸಮರ್ಪಕವಾಗಿ ಮಾಡಿ ಕೊಡಲು ಡಿಸಿಗಳ ಜತೆ ಮಾತುಕತೆ ನಡೆಸಲಾಗಿದೆ. ಹೊಸ ಶಾಲೆಗಳಿಗೆ ಅನುಮತಿ ನೀಡುವಾಗ ಆಟದ ಮೈದಾನ, ಅಗ್ನಿಶಾಮಕ ದಳದ ಅನುಮತಿ ಸೇರಿದಂತೆ ಎಲ್ಲ ನಿಯಮ ಪರಿಶೀಲಿಸಿಯೇ ನೀಡಲಾಗುವುದು. ಖಾಸಗಿಯಿಂದ ಸರಕಾರಿ ಶಾಲೆಗೆ ಬಂದ ಟಿಸಿ ದೊರೆಯದ ಮಕ್ಕಳ ಟಿಸಿ ಕೊಡಿಸುವುದು ಇಲಾಖೆಯ ಜವಾಬ್ದಾರಿ ಎಂದರು.

ವಾಲ್ಮೀಕಿ ಮಹರ್ಷಿಗಳಾದದ್ದು
ಬಿಜೆಪಿ ಸರಕಾರ ಬಂದ ಬಳಿಕವೆ?
ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷರಾಗಿ ರೋಹಿತ್‌ ಚಕ್ರತೀರ್ಥರನ್ನು ರಾಜ್ಯ ಸರಕಾರ ನೇಮಿಸಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಕೇವಲ ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಕೊರೊನಾ ಲಸಿಕೆ ಆರಂಭಿಸಿದಾಗಲೂ ವಿರೋಧ ವ್ಯಕ್ತವಾಗಿತ್ತು. ಹಿಂದೆ ಬರಗೂರು ರಾಮಚಂದ್ರಪ್ಪ ಅವರನ್ನು ನೇಮಿಸಿದ್ದೇಕೆ? ನಮ್ಮ ಪಠ್ಯಪುಸ್ತಕ ನೋಡಿದರೆ ಹೊಡೀತಾರೆ. ವ್ಯಾಕರಣ ದೋಷವೂ ಅದರಲ್ಲಿ ಅಷ್ಟಿದೆ. ವಿವೇಕಾನಂದರ ಭಾಷಣವನ್ನೇ ಅವರು ತಿರುಚಿದ್ದಾರೆ. ಕುವೆಂಪು ಅವರು ಸರಕಾರಿ ಶಾಲೆಯಲ್ಲಿ ಓದಿ ಉನ್ನತ ಮಟ್ಟಕ್ಕೇರಿದರು ಎಂಬ ಪಾಠವನ್ನೇ ಕಿತ್ತು ಹಾಕಿದ್ದಾರೆ. ವಾಲ್ಮೀಕಿ ಮಹರ್ಷಿಗಳಾದದ್ದು ನಮ್ಮ ಸರಕಾರ ಬಂದ ಬಳಿಕವೆ? ಇವರು ಮಕ್ಕಳಿಗೆ ಏನನ್ನು ಕಲಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ!

ಬೇಕಾಗಿದ್ದು 10,000;
ಸಿಕ್ಕಿದ್ದು 3,000!
ಉಡುಪಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್‌ ಅವರು, ರಾಜ್ಯದಲ್ಲಿ 10,000 ಶಿಕ್ಷಕರ ನೇಮಕ ನಡೆಯಬೇಕಿತ್ತು. ನಮ್ಮ ಗುಣ ಮಟ್ಟದ ಆಧಾರದಲ್ಲಿ ಸಿಕ್ಕಿದ್ದೇ 3,000 ಶಿಕ್ಷಕರು. ಭಾಷೆ, ಸಮಾಜ ವಿಜ್ಞಾನ ಶಿಕ್ಷಕರಿಗೆ ಕೊರತೆ ಇಲ್ಲ. 1ರಿಂದ 5, 6ರಿಂದ 8ನೇ ತರಗತಿ ವರೆಗೆ ಶಿಕ್ಷಕರ ಕೊರತೆ ಇದೆ. ಮಾನದಂಡದ ಪ್ರಕಾರ 30 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರು ಬೇಕು. ಆದರೆ ಕೆಲವೆಡೆ ಐವರು ಮಕ್ಕಳಿದ್ದಲ್ಲಿ ಇಬ್ಬರು ಶಿಕ್ಷಕರಿದ್ದಾರೆ. ಈ ಪ್ರಕಾರ ಶಿಕ್ಷಕರ ಕೊರತೆ ಇರುವುದೂ ನಿಜ, ಶಿಕ್ಷಕರು ಹೆಚ್ಚುವರಿ ಇರುವುದೂ ನಿಜ. ಇದನ್ನು ಹೇಗೆ ಸರಿಪಡಿಸಬೇಕೆಂದು ಶಾಸಕರ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.