ಹೊರರೋಗಿಗಳನ್ನು ಕೇಳುವವರ್ಯಾರು?


Team Udayavani, Jul 7, 2020, 6:40 AM IST

ora-rogogalu

ಬೆಂಗಳೂರು: ಸಮೀಕ್ಷೆಯೊಂದರ ಪ್ರಕಾರ ಎಲ್ಲೆಡೆ ಈಗ ಕೋವಿಡ್‌ 19 ವೈರಸ್‌ ಸೋಂಕಿತರಿಗಿಂತ ಕೋವಿಡ್‌ 19ಯೇತರ ರೋಗಿಗಳ ಸಾವು-ನೋವು ಹೆಚ್ಚಳವಾಗುತ್ತಿವೆ. ರಾಜಧಾನಿ ಬೆಂಗಳೂರು ಕೂಡ ಇದೇ ಹಾದಿಯತ್ತ ಸಾಗುತ್ತಿದೆಯೇ? ಇತ್ತೀಚೆಗೆ ಇತರೆ ರೋಗಿಗಳು ಪಡುತ್ತಿರುವ ಪಡಿಪಾಟಿಲು, ಈ ಬೆಳವಣಿಗೆಗಳ ಬಗ್ಗೆ ಆರೋಗ್ಯ ತಜ್ಞರಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು ಈ ಪ್ರಶ್ನೆಯತ್ತ ಬೊಟ್ಟು ಮಾಡುತ್ತಿವೆ!

ಒಂದೆಡೆ ನಗರದಲ್ಲಿ ಕೋವಿಡ್‌ 19 ವೈರಸ್‌ ಸೋಂಕು  ಪ್ರಕರಣಗಳು ತೀವ್ರವಾಗಿ ಹರಡುತ್ತಿದ್ದು, ಸೋಂಕಿತರು ಚಿಕಿತ್ಸೆಗಾಗಿ ಪರದಾಟ ನಡೆಸುತ್ತಿದ್ದಾರೆ. ಆದರೆ, ಇವರಿಗಿಂತಲೂ ಕೋವಿಡ್‌ 19ಯೇತರ ರೋಗಿಗಳ ಸ್ಥಿತಿ ಈಚೆಗೆ ಶೋಚನೀಯವಾಗುತ್ತಿದೆ. ಬಹುತೇಕ ಸರ್ಕಾರಿ ಆಸ್ಪತ್ರೆಗಳು ಕೋವಿಡ್‌ 19 ಸೋಂಕಿತರಿಗೇ ಆದ್ಯತೆ ನೀಡಿವೆ. ಹೀಗಾಗಿ,  ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್‌ 19ಯೇತರ ರೋಗಿಗಳು ಚಿಕಿತ್ಸೆ ಪಡೆಯಲು/ ದಾಖಲಾಗಲು ಮುಂದಾದರೆ, ಕಡ್ಡಾಯವಾಗಿ ಕೋವಿಡ್‌ 19 ಸೋಂಕು ಪರೀಕ್ಷಾ ವರದಿ  ಸಲ್ಲಿಸುವಂತೆ ಅಲಿಖೀತ ನಿಯಮ ವಿಧಿಸಲಾಗಿದೆ.

ಇದರಿಂದ ಕೋವಿಡ್‌ 19 ಪೂರ್ವದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ಪಡೆಯುತ್ತಿದ್ದವರು, ಈಗ ಸೋಂಕು ಪರೀಕ್ಷೆಗೇ 2,200 ರೂ. ಪಾವತಿಸಬೇಕು. ಜತೆಗೆ  ವರದಿಗಾಗಿ ವಾರಗಟ್ಟಲೆ ಕಾಯಬೇಕು. ನಂತರವಷ್ಟೇ ಚಿಕಿತ್ಸೆ ಬಗ್ಗೆ ವಿಚಾರ ಎಂಬ ಸ್ಥಿತಿ ಇದೆ. ನಗರದ ರಾಜೀವ್‌ಗಾಂಧಿ ಎದೆರೋಗಳ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆ, ಕೆ.ಸಿ. ಜನರಲ್‌ ಆಸ್ಪತ್ರೆ,  ಜಯನಗರ ಜನರಲ್‌ ಆಸ್ಪತ್ರೆ ಹಾಗೂ ಸಿ.ವಿ. ರಾಮನ್‌ ಸಾರ್ವಜನಿಕ ಆಸ್ಪತ್ರೆಯು ನಗರದ ಪ್ರಮುಖ ಆಸ್ಪತ್ರೆಗಳಾಗಿದ್ದು,

ಇಲ್ಲಿ ತಲಾ ನಿತ್ಯ ಸಾವಿರಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ವಿಕ್ಟೋರಿಯಾ ಆಸ್ಪತ್ರೆ  ಹೊರತುಪಡಿಸಿ ಬಹುತೇಕ ಆಸ್ಪತ್ರೆಯಲ್ಲಿ ಇತರೆ ರೋಗಿಗಳಿಗೆ ಶೇ. 40ರಷ್ಟು ಹಾಸಿಗೆಗಳನ್ನು ಮೀಸಲಿಡಲಾಗಿದೆ. ಆದರೆ, ಕೋವಿಡ್‌ 19 ಸೋಂಕಿತರ ಭಯದಿಂದ ಹಾಗೂ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಿಲ್ಲ ಎಂಬ ಕಾರಣಕ್ಕೆ ಕೋವಿಡ್‌  19ಯೇತರ ರೋಗಿಗಳು ಅಲ್ಲಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅನಿವಾರ್ಯವಾಗಿ ಮಧ್ಯಮ ವರ್ಗದ ಖಾಸಗಿ ಆಸ್ಪತ್ರೆಗಳತ್ತ ತೆರಳುತ್ತಿದ್ದಾರೆ.

ಗೋಲ್ಡನ್‌ ಟೈಮ್‌ ವ್ಯರ್ಥ: ರೋಗಿಗಳು ಖಾಸಗಿ ಆಸ್ಪತ್ರೆಗೆ ತೆರಳಿದ ಸಂದರ್ಭ ದಲ್ಲಿ ಸೋಂಕು ತಗುಲಿರುವ ಅನುಮಾನದಿಂದ ಬಾಗಿಲಲ್ಲೇ ತಡೆದು ಸೋಂಕು ಪರೀಕ್ಷಾ ವರದಿ ಕೇಳಲಾಗುತ್ತಿದೆ. ತುರ್ತು ಚಿಕಿತ್ಸೆ ಇದ್ದರೆ ಪ್ರತ್ಯೇಕ  ಕೊಠಡಿಯಲ್ಲಿ ತಾತ್ಕಾಲಿಕ ಚಿಕಿತ್ಸೆ ನೀಡಲಾಗುತ್ತದೆ. ವರದಿ ಬಂದ ಬಳಿಕ ಹೆಚ್ಚುವರಿ ಚಿಕಿತ್ಸೆ ಕಲ್ಪಿಸಲಾಗುತ್ತದೆ. ಇನ್ನು ಪರೀಕ್ಷೆಗೊಳಪಡದವರ ತಾತ್ಕಾಲಿಕ ಚಿಕಿತ್ಸೆಗೆ ಪಿಪಿಇ ಕಿಟ್‌ ಧರಿಸುವ ಆಸ್ಪತ್ರೆ ಸಿಬ್ಬಂದಿ, ಅದರ ಸಂಪೂರ್ಣ  ವೆಚ್ಚವನ್ನು ರೋಗಿಗಳ ಮೇಲೆಯೇ ಹೇರುತ್ತಾರೆ.

ಇದರಿಂದ ವಯೋಸಹಜ ಕಾಯಿಲೆಗಳಿದ್ದ ಬಳಲುತ್ತಿರುವವರು ಮತ್ತು ಫಾಲೋಅಪ್‌ ಚಿಕಿತ್ಸೆ ಪಡೆಯುವವರು ಭಯದಿಂದ ಸರ್ಕಾರಿ ಆಸ್ಪತ್ರೆಗೂ ತೆರಳದೆ, ಸೋಂಕು ಪರೀಕ್ಷೆಗೆ ಹಣ  ವ್ಯಯಿಸದೆ ಮನೆ ಕಡೆ ಮುಖಮಾಡುತ್ತಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ಸಿಗದೆ ರೋಗಿಗಳು ಬದುಕುಳಿಸುವ ಗೋಲ್ಡನ್‌ ಟೈಮ್‌ ವ್ಯರ್ಥವಾಗುತ್ತಿದೆ.

ಟೆಲಿ ಮೆಡಿಸಿನ್‌ ಮೊರೆ: ನಿಮ್ಹಾನ್ಸ್‌ ಮತ್ತು ಜಯದೇವ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಮತ್ತು ರೋಗಿಗಳಲ್ಲೂ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೆಲಿ ಮೆಡಿಸಿನ್‌ ಮೊರೆಹೋಗಿವೆ. ನಿತ್ಯ ಸೀಮಿತ ಪ್ರಮಾಣದಲ್ಲಿ ಅಂದರೆ ನಿಮ್ಹಾನ್ಸ್‌ 200,  ಜಯದೇವ ಆಸ್ಪತ್ರೆ 400 ರೋಗಿಗಳಿಗೆ ಮಾತ್ರ ಹೊರರೋಗಿಗಳ ವಿಭಾಗದಲ್ಲಿ (ಓಪಿಡಿ) ಚಿಕಿತ್ಸೆ ನೀಡಲು ನಿರ್ಧರಿಸಿವೆ. ಇನ್ನು ಕಿದ್ವಾಯಿಯಲ್ಲಿ ಓಪಿಡಿ ಸೇವೆ ಮೂರು ದಿನಗಳು (ಜು. 7-9) ಬಂದ್‌ ಮಾಡಲಾಗಿದೆ. ತುರ್ತು ಚಿಕಿತ್ಸೆಗೆ ಬಂದಿರುವ ರೋಗಿಗಳಿಗೂ ಆಸ್ಪತ್ರೆಯಲ್ಲಿಯೇ ಸೋಂಕು ಪರೀಕ್ಷೆ ಕೈಗೊಂಡು ಒಂದು ದಿನದ ಬಳಿಕ ವರದಿ ಪಡೆದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ರ್ಯಾಪಿಡ್‌ ಪರೀಕ್ಷಾ ಪದ್ಧತಿ ಅಗತ್ಯ: ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಬರುವ ರೋಗಿಗಳಿಗೆ ಕಡ್ಡಾಯ ಸೋಂಕು ಪರೀಕ್ಷೆಗೆ ಸೂಚಿಸಲುವ ಬದಲು ಸ್ವತಃ ಆಸ್ಪತ್ರೆಗಳೇ ಕೋವಿಡ್‌ 19 ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂಬ ಕೂಗು ತಜ್ಞರಿಂದ ಕೇಳಿಬರುತ್ತಿದೆ. ನಗರದಲ್ಲಿ ಇಷ್ಟೆಲ್ಲ ಸಮಸ್ಯೆ ಆಗುತ್ತಿದೆ. ರೋಗಿಗಳನ್ನು ಅಲೆದಾಡಿಸುವ ಬದಲು ಆಸ್ಪತ್ರೆಗಳು ರ್ಯಾಪಿಡ್‌ (ಕ್ಷಿಪ್ರ) ಸೋಂಕು ಪರೀಕ್ಷಾ ವ್ಯವಸ್ಥೆ  ಅವಳವಡಿಸಿಕೊಳ್ಳಬಹುದು.

ಇದರಿಂದ ಸಮಯದ ಉಳಿತಾಯ ಜತೆಗೆ ಬಡ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟೇ ಅಲ್ಲ ರೋಗಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತು ಬದುಕಿ ಉಳಿಯುವ ಸಾಧ್ಯತೆ ಹೆಚ್ಚಿರು ತ್ತದೆ ಎಂಬ ವಾದ  ಕೇಳಿಬರುತ್ತಿದೆ. ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌, “ಜಾಗತಿಕ ಮಹಾಮಾರಿಯಂತಹ ಸಂದರ್ಭದಲ್ಲಿ ಎಲ್ಲಾ  ರೋಗಿಗಳಿಗೂ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಸಾಧ್ಯವಾಗುವುದಿಲ್ಲ.

ಕೋವಿಡ್‌ 19ಯೇತರ ತುರ್ತು ಚಿಕಿತ್ಸೆ ಅಗತ್ಯವಿರುವವರು ಖಾಸಗಿ ಆಸ್ಪತ್ರೆಗಳತ್ತ ತೆರಳುತ್ತಿದ್ದಾರೆ. ಇಂತಹ ರೋಗಿಗಳ ಚಿಕಿತ್ಸೆಗೆ ನಿರಾಕರಿಸುವ ಬದಲು ಸ್ಥಳದಲ್ಲೇ  ಸೋಂಕು ಪರೀಕ್ಷೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ರ್ಯಾಪಿಡ್‌ ಆ್ಯಂಟಿಜೆನ್‌ ಕೋವಿಡ್‌ 19 ಸೋಂಕು ಪರೀಕ್ಷೆಗೆ 400 ರೂ. ವೆಚ್ಚವಾಗುತ್ತದೆ. ಜತೆಗೆ 10ರಿಂದ 15 ನಿಮಿಷದಲ್ಲಿ ಫ‌ಲಿತಾಂಶ ಬರುತ್ತದೆ. ನಿಖರತೆ ಪ್ರಮಾಣ ಕೂಡ  ತೃಪ್ತಿಕರವಾಗಿದೆ ಎಂದು ಹೇಳಿದರು.

ಯಾರಿಗೆ ಹೆಚ್ಚು ಸಮಸ್ಯೆ?: ಹೃದ್ರೋಗ, ಕ್ಯಾನ್ಸರ್‌ ರೋಗಿಗಳು, ಮೂತ್ರಪಿಂಡ , ಯಕೃತ್‌, ಕೀಲುಮೂಳೆ, ರಕ್ತದೊತ್ತಡ, ಮಧುಮೇಹ, ಕ್ಷಯ, ಉಸಿರಾಟ, ಉದರ ಸಮಸ್ಯೆ ಹೊಂದಿದವರು, ಡಯಾಲಿಸಿಸ್‌, ಕಿಮೊ ಥೆರಪಿಗೆ  ಒಳಗಾಗುವವರು,  ಪಾರ್ಶ್ವವಾಯು, ಅಪಘಾತಕ್ಕಿಡಾದವರು, ತೀವ್ರ ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿರುವವರು.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.