Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
ಮೈತ್ರಿ ಅಭ್ಯರ್ಥಿಯಾಗಲಿದ್ದಾರಾ ಸಿಪಿವೈ?
Team Udayavani, Mar 25, 2024, 9:51 PM IST
ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದು ಖಚಿತವಾಗುತ್ತಿದ್ದಂತೆ, ಚನ್ನಪಟ್ಟಣದಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಯಾರು ಎಂಬ ಚರ್ಚೆ ಜಿಲ್ಲೆಯಲ್ಲಿ ಆರಂಭಗೊಂಡಿದೆ.
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ದಳಪತಿ ಸ್ಪರ್ಧಿಸಿದರೆ ಗೆಲುವು ಖಚಿತ ಎಂಬುದು ಜೆಡಿಎಸ್ ಕಾರ್ಯಕರ್ತರ ವಿಶ್ವಾಸ. ಈ ಕಾರಣದಿಂದಾಗಿ ಕುಮಾರಸ್ವಾಮಿ ಮಂಡ್ಯದಿಂದ ಗೆದ್ದು ಲೋಕಸಭೆಗೆ ಹೋದರೆ, ಅವರ ರಾಜೀನಾಮೆಯಿಂದ ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವಣೆ ಎದುರಾಗಲಿದ್ದು, ಅಲ್ಲಿ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಎದುರಾಗಿದೆ.
ಯೋಗೇಶ್ವರ್ಗೆ ಅವಕಾಶ?
ಕುಮಾರಸ್ವಾಮಿ ವಿರುದ್ಧ ಎರಡು ಚುನಾವಣೆಯಲ್ಲಿ ಪರಾಜಿತರಾಗಿರುವ ಸಿ.ಪಿ. ಯೋಗೇಶ್ವರ್ ಈಗ ದೇವೇಗೌಡರ ಕುಟುಂಬದ ಜತೆಗೆ ಸಖ್ಯ ಬೆಳೆಸಿದ್ದಾರೆ. ದಳಪತಿಗಳ ಜತೆಗೆ ಸೈನಿಕ ಬೆಳೆಸಿಕೊಂಡಿರುವ ಹೊಸ ಬಾಂಧವ್ಯ ಕಳೆದುಕೊಂಡಿರುವ ಶಾಸಕ ಸ್ಥಾನವನ್ನು ಮತ್ತೆ ತಂದುಕೊಡಲಿದೆಯೇ ಎಂಬ ನಿರೀಕ್ಷೆ ಯೋಗೇಶ್ವರ್ ಬೆಂಬಲಿಗರಲ್ಲಿ ಮೂಡಿದೆ.
ಸೋಮವಾರ ನಡೆದ ಸಭೆಯಲ್ಲಿ ಕ್ಷೇತ್ರವನ್ನು ಜೆಡಿಎಸ್ಗೆ ಉಳಿಸಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾಗಿ ಆ ಪಕ್ಷದ ಮುಖಂಡರು ತಿಳಿಸುತ್ತಿದ್ದಾರೆ. ಎರಡೂ ಪಕ್ಷಗಳು ಮೈತ್ರಿಯಾಗಿದ್ದು, ಕುಮಾರಸ್ವಾಮಿ ಜೆಡಿಎಸ್ಗೆ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರಾ ಅಥವಾ ಯೋಗೇಶ್ವರ್ಗೆ ಬಿಟ್ಟುಕೊಡುತ್ತಾರಾ ಎಂಬ ಚರ್ಚೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ