ಸಿಎಎ ಜಾರಿಗೊಳಿಸುವ ಅವಶ್ಯಕತೆ ಏನಿತ್ತು: ರಮೇಶ್‌ ಕುಮಾರ್‌


Team Udayavani, Jan 12, 2020, 10:27 PM IST

ramesh-kumar

ಬೆಂಗಳೂರು: ದೇಶದಲ್ಲಿ ಸಾಮಾನ್ಯ ಜನ ಎದುರಿಸುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಿಂತ ಹೆಚ್ಚಾಗಿ ಕೇಂದ್ರ ಸರ್ಕಾರಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದು ಮುಖ್ಯವಾಗಿರುವುದು ಸೋಜಿಗ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್‌. ರಮೇಶ್‌ ಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಎಂ.ಎಸ್‌.ಕೃಷ್ಣನ್‌ ಸ್ಮರಣ ಸಂಸ್ಥೆ ಹಾಗೂ ನವಕರ್ನಾಟಕ ಪ್ರಕಾಶನ ಸಂಯುಕ್ತಾಶ್ರಯದಲ್ಲಿ ಭಾನುವಾರ ಗಾಂಧಿ ಭವನದಲ್ಲಿ ನಡೆದ ಬಿ.ವಿ. ಕಕ್ಕಿಲ್ಲಾಯ ನೂರರ ನೆನಪು ಸಂಭ್ರಮ, ಪುಸ್ತಕಗಳ ಲೋಕಾರ್ಪಣೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನರ ಜೀವನ ಗುಣಮಟ್ಟ ಸುಧಾರಿಸುವ, ಜಿಡಿಪಿ- ಉದ್ಯೋಗ ಹೆಚ್ಚಳ, ಸಾರ್ವಜನಿಕ ವಲಯವನ್ನು ಅಭಿವೃದ್ಧಿಪಡಿಸುವುದು ಮುಂತಾದವುಗಳ ಬಗ್ಗೆ ಗಮನಹರಿಸುವುದು ಸರ್ಕಾರದ ಆದ್ಯತೆ ಆಗಬೇಕಿತ್ತು. ಬದಲಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಂತಹ ಕಾನೂನುಗಳನ್ನು ಜಾರಿಗೊಳಿಸುವುದು ಆದ್ಯತೆಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಇವುಗಳ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ ಅವರು, ಉದ್ದೇಶಿತ ಕಾಯ್ದೆಯು ಕೇವಲ ಮಸಲ್ಮಾನರಿಗೆ ತೊಂದರೆಯುಂಟಾಗುವುದಿಲ್ಲ. ಎಲ್ಲಾ ಜನತೆಗೂ ಸಮಸ್ಯೆಯಾಗಲಿದೆ ಎಂಬುದನ್ನು ಅರಿತು ಯುವಜನತೆ ಬೀದಿಗಿಳಿದಿದ್ದಾರೆ ಎಂದು ಹೇಳಿದರು.

ಸಂಸತ್ತು ಪ್ರವೇಶಿಸಿದ ನಂತರ ರಾಜಕಾರಣಿಗಳ ಆದ್ಯತಾ ವಿಷಯಗಳು ಬದಲಾಗುತ್ತಿವೆ. ಚುನಾವಣೆ ಪೂರ್ವದಲ್ಲಿ ಜನರ ಜೀವನಮಟ್ಟ ಸುಧಾರಿಸುವುದಾಗಿ ಆಶ್ವಾಸನೆ ನೀಡುವ ರಾಜಕಾರಣಿಗಳು, ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ನಿಲುವುಗಳನ್ನು ಬದಲಿಸುತ್ತಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸದೀಯ ಪ್ರಜಾಪ್ರಭುತ್ವದಲ್ಲಿ ಪ್ರಗತಿಪರ ಶಾಸನಗಳನ್ನು ಜಾರಿಗೊಳಿಸಿ ಸಮಾಜದ ಸ್ಥಿತಿಯನ್ನು ಬದಲಾಯಿಸುವುದು ಬಿ.ವಿ.ಕಕ್ಕಿಲ್ಲಾಯ ರಾಜಕೀಯ ಸಿದ್ಧಾಂತವಾಗಿತ್ತು. ಸಾರ್ವಜನಿಕ ಜೀವನ, ಚುನಾವಣೆ ಪ್ರವೇಶಿಸಿ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಜೀವನ ನಡೆಸಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಇದೇ ವೇಳೆ ತಿಳಿಸಿದರು.

ಸಮಾರಂಭದಲ್ಲಿ ಬಿ.ವಿ. ಕಕ್ಕಿಲ್ಲಾಯ ಅವರ “ಬಿ.ವಿ. ಕಕ್ಕಿಲ್ಲಾಯ ಇನ್‌ ಪಾರ್ಲಿಮೆಂಟ್‌’, “ಮನುಷ್ಯನ ಮಹಾಯಾನ’ ಕೃತಿಗಳು ಲೋಕಾರ್ಪಣೆಗೊಂಡವು. ನವಕರ್ನಾಟಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕ ಸಿದ್ಧನಗೌಡ ಪಾಟೀಲ, ಪದಾಧಿಕಾರಿ ಎಂ.ಎಸ್‌. ಕೃಷ್ಣನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.