Oscars: ಆಸ್ಕರ್‌ಗೆಂದೇ ಸಿನೆಮಾ ಏಕೆ ಮಾಡುತ್ತೀರಿ?


Team Udayavani, Nov 24, 2023, 11:34 PM IST

CINEMA CAMERA

ಪಣಜಿ: ನಮ್ಮ ಚಲನಚಿತ್ರಗಳಿಗೆ ಆಸ್ಕರ್‌ ಪ್ರಶಸ್ತಿ ಪಡೆಯಲು ಏನು ಮಾಡಬೇಕು? ಎಂಬ ಪ್ರಶ್ನೆಯ ಜತೆಗೇ ಆಸ್ಕರ್‌ಗಾಗಿಯೇ ಏಕೆ ಮಾಡಬೇಕು? ಇವೆರಡೂ ಪ್ರಶ್ನೆಗಳು ಹುಟ್ಟಿಕೊಂಡಿದ್ದು ನಿಜ. ಅವೆರಡಕ್ಕೂ ಉತ್ತರ ಸಿಕ್ಕಿದ್ದು ಇಫಿ ಚಲನಚಿತ್ರೋತ್ಸವದ ಸಂವಾದದಲ್ಲಿ.

ಸರಳವಾದ ಒಂದು ಸಾಲಿನ ಉತ್ತರ. ಒಳ್ಳೆ ಕಥೆಗಳಿರಬೇಕು. ಎರಡನೇ ಸಾಲಿನ ಉತ್ತರವೇನೆಂದರೆ ಭಾರತದಲ್ಲಿ ಅಂಥ ಬಹಳಷ್ಟು ಕಥೆಗಳಿವೆ. ಇದೇ ಸಂದರ್ಭದಲ್ಲಿ ಆಸ್ಕರ್‌ ಗೆಂದೇ ಸಿನೆಮಾ ಮಾಡುವುದರಲ್ಲಿ ಅರ್ಥವಿಲ್ಲ. ಅದಷ್ಟೇ ನಮ್ಮ ಗುರಿಯಾಗಬಾರದೂ ಸಹ. ಒಂದು ಸರ್ವಶ್ರೇಷ್ಠ ಸಿನೆಮಾ ಮಾಡುವುದು ನಮ್ಮ ಗುರಿಯಾಗಬೇಕು. ಉಳಿದೆಲ್ಲವೂ ಹಿಂಬಾಲಿಸುತ್ತದೆ ಎಂಬುದು ಒಟ್ಟೂ ಅಭಿಪ್ರಾಯವಾಗಿತ್ತು.

“ಸ್ಲಂ ಡಾಗ್‌ ಮಿಲಿನೇರ್‌’ ಚಿತ್ರದ ಸೌಂಡ್‌ ಡಿಸೈನರ್‌ ಮತ್ತು ಪ್ರೊಡಕ್ಷನ್‌ ಮಿಕ್ಸರ್‌ ರಸೂಲ್‌ ಕುಟ್ಟಿ ಅವರ ಪ್ರಕಾರ, ಆಸ್ಕರ್‌ ಸ್ಪರ್ಧೆಯಲ್ಲಿ ಭಾಗವಹಿಸುವ ಯಾವುದೇ ಚಲನಚಿತ್ರಗಳು ಆಯಾ ದೇಶದಲ್ಲಿನ ವೈವಿಧ್ಯತೆಯನ್ನು ಬಿಂಬಿಸಬೇಕು. ಪ್ರಮುಖ ಸಿನೆಮಾ ನಿರ್ದೇಶಕ ಋತ್ವಿಕ್‌ ಘಟಕ್‌ ಅವರ ಮಾತನ್ನು ಉಲ್ಲೇಖೀಸುತ್ತಾ, ಹೆಚ್ಚು ಸ್ಥಳೀಯ(ರಾಷ್ಟ್ರೀಯ)ರಾದರೆ ಅಷ್ಟೇ ವಿಶ್ವ ಮಾನವರಾಗಲು ಸಾಧ್ಯ. ಹಾಗಾಗಿ ಹೆಚ್ಚು ಸ್ಥಳೀಯ, ರಾಷ್ಟ್ರೀಯ ನೆಲೆಯ ಒಂದು ಆಲೋಚನೆ ಜಾಗತಿಕ ಆಲೋಚನೆಯಾಗಿ ಬದಲಾಗಬಹುದು. ಇದನ್ನು ನಾವು ಗಮನಿಸಬೇಕು ಎಂದರು.
ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಹಯೋಗವೂ ಪ್ರಶಸ್ತಿಯ ಬಳಿ ಕೊಂಡೊಯ್ಯಬಲ್ಲದು ಎಂದ ಅವರು, ಸರಕಾರಗಳೂ ಆಸ್ಕರ್‌ ಸ್ಪರ್ಧೆಗೆ ಇಳಿಯುವ ಚಲನಚಿತ್ರಗಳ ತಂಡವನ್ನು ಬೆಂಬಲಿಸಲು ಆರ್ಥಿಕ ಸಹಕಾರ ನೀಡಲು ಪ್ರತ್ಯೇಕ ನಿಧಿಯನ್ನು ಸ್ಥಾಪಿಸಬೇಕು ಎಂದವರು ರಸೂಲ್‌

1982 ರಲ್ಲಿ ಭಾನು ಆಥೈಯ ಈ ಗಾಜಿನ ಮನೆ ಒಡೆದು ಒಳಹೊಕ್ಕಿದ್ದರು. “ಗಾಂಧಿ’ ಚಿತ್ರದ ಕಾಸ್ಟೂಮ್ಸ್‌ ಡಿಸೈನ್‌ಗೆ ಆಸ್ಕರ್‌ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು. ಬಳಿಕ ಎ.ಆರ್‌. ರೆಹಮಾನ್‌, ರಸೂಲ್‌ ಕುಟ್ಟಿ, ಎಂ.ಎಂ. ಕೀರವಾಣಿ, ಗುಣೀತ್‌ ಮೊಂಗ ಕಪೂರ್‌ ಹಾಗೂ ಕಾರ್ತಿಕಿ ಗೊನ್ಸಾಲ್ವೇಸ್‌ ಎಲ್ಲರೂ ಈ ಹಾದಿಯಲ್ಲಿ ಗುರಿ ಮುಟ್ಟಿದ್ಧಾರೆ ಎಂದರು.

ಸಂವಾದವನ್ನು ಆರಂಭಿಸಿದ “ದಿ ಎಲಿಫೆಂಟ್‌ ವಿಸ್ಪರರ್ಸ್‌’ ಚಿತ್ರದ ನಿರ್ಮಾಪಕರಾದ ಗುಣೀತ್‌ ಮೊಂಗ ಕಪೂರ್‌, ಅಮೆರಿಕದಲ್ಲಿ ಹಂಚಿಕೆಯಾಗಿ ಪ್ರದರ್ಶನವಾಗುವುದೂ ಆಸ್ಕರ್‌ ದಾರಿಯ ಆರಂಭವಾಗಬಹುದು. ಹಾಗಾಗಿ ಸಿನೆಮಾ ನಿರ್ಮಿಸಿದ ಮೇಲೆ ಇಡೀ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರಿಯಬೇಕು. ಬಳಿಕ ಹಂಚಿಕೆ, ಕಾರ್ಯತಂತ್ರ ಹಾಗೂ ಸರಿಯಾದ ಪಾಲುದಾರರನ್ನು ಹಿಡಿದರೆ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ಹಾಗೆಯೇ ಆಸ್ಕರ್‌ ಹಾದಿಯಲ್ಲಿ ಚಿತ್ರೋತ್ಸವಗಳ ಕೊಡುಗೆಯನ್ನು ಉಲ್ಲೇಖೀಸಲು ಮರೆಯಲಿಲ್ಲ. ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರಗಳು ಸರಿಯಾಗಿ ಬಿಂಬಿತವಾದರೆ ಆಸ್ಕರ್‌ ಹಾದಿ ಕಠಿನವೆನಿಸದು. ಆದ ಕಾರಣ ಸೂಕ್ತವಾದ ಅಂತಾರಾಷ್ಟ್ರೀಯ ಸಿನೆಮೋತ್ಸವಗಳಲ್ಲಿ ನಮ್ಮ ಚಿತ್ರಗಳು ಪ್ರದರ್ಶನಗೊಳ್ಳಬೇಕು ಎಂದರು.

ಶಾರ್ಟ್ಸ್ ಟಿವಿಯ ಕಾರ್ಟರ್‌ ಪಿಲ್ಚರ್‌ ಅವರ ಸಲಹೆಯಂತೆ, ಭಾರತದ ಕಥೆಗಳನ್ನು ಹೇಳಬೇಕು. ಇಲ್ಲಿ ಸಾಕಷ್ಟು ಕಥೆಗಳಿವೆ. ಅವುಗಳನ್ನು ಸರಿಯಾಗಿ ಬಿಂಬಿಸಬೇಕು. ಅದೇ ಆಸ್ಕರ್‌ಗೆ ದಾರಿ ಎಂದರು. ಸೋನಲ್‌ ಕರ್ಲಾ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.