ಬೇಗ್ ಮೇಲೆ ಬಿಜೆಪಿಗೆ ಅಷ್ಟೊಂದು ಪ್ರೀತಿ ಯಾಕೆ?ದಿನೇಶ್ ಗುಂಡೂರಾವ್
Team Udayavani, Jul 16, 2019, 4:06 PM IST
ಬೆಂಗಳೂರು: ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಅಂತ ಗೊತ್ತಿಲ್ಲ. ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ಬೇಗ್ ಅವರನ್ನು ಅವರೇ ಕರೆದುಕೊಂಡು ಹೋಗುವ ಪ್ರಯತ್ನ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಗ್ ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿಸಿ ಬಿಜೆಪಿ ನಾಯಕರೇ ಅವರ ಜೊತೆಗೆ ಇದ್ದರು. ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಸ್ಪಷ್ಟವಾಗಿ ಗೊತ್ತಾಗ್ತಿದೆ. ಅವರಿಗೆ ಸರ್ಕಾರ ಉರುಳಿಸಬೇಕು ಎಂಬುದೇ ಉದ್ದೇಶವಾಗಿದೆ ಎಂದು ದೂರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯೇ ಸಾಕು. ನಮ್ಮ ಶಾಸಕರನ್ನು ಸೆಳೆಯಲು ಎಂತಹ ಕೆಲಸ ಮಾಡಿದ್ದಾರೆ ಎಂದು ಆ ಹೇಳಿಕೆ ಹಿಂದೆ ಏನ್ ಇದೆ ಅಂತ ಗೊತ್ತಾಗ್ತಿದೆ ಎಂದರು.
ಯಡಿಯೂರಪ್ಪ ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡ್ತಿದ್ದಾರೆ. ಶಾಸಕರ ಅನರ್ಹತೆ ಮಾಡುವುದಕ್ಕೆ ಬಿಜೆಪಿಯೇ ಮುಂದಾಗಿದೆ. ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದಾರೆ ಅಂತ ಬಿಜೆಪಿ ನಡೆಯಿಂದ ಗೊತ್ತಾಗ್ತಿದೆ ಎಂದು ತಿರುಗೇಟು ನೀಡಿದರು.
ನಾವು ವಿಶ್ವಾಸಮತಯಾಚನೆ ಮಾಡುವುದಕ್ಕೆ ಮುಂದಾಗಿದ್ದೇವೆ, ನಮಗೆ ವಿಶ್ವಾಸ ಇದೆ. ನಮ್ಮಲ್ಲಿ ಗೊಂದಲ ಇರಬಾರದು ಅದಕ್ಕೆ ನಾವು ವಿಶ್ವಾಸಮತಯಾಚನೆಗೆ ಮುಂದಾಗಿದ್ದೇವೆ. ನಮಗೆ ವಿಶ್ವಾಸ ಇದೆ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ