ನಾನೇಕೆ ರಾಜೀನಾಮೆ ಸಲ್ಲಿಸಲಿ?: ಎಚ್ಡಿಕೆ
Team Udayavani, Jul 12, 2019, 5:31 AM IST
ಬೆಂಗಳೂರು: ಮೈತ್ರಿ ಸರ್ಕಾರ ಅತಂತ್ರ ಸ್ಥಿತಿಗೆ ತಲುಪಿರುವುದರಿಂದ ಸಿಎಂ ಕುಮಾರಸ್ವಾಮಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ನಾಯಕರ ಜತೆ ಸುದೀರ್ಘ ಚರ್ಚೆ ನಡೆಸಿದರು.
ಈಗಾಗಲೇ ರಾಜೀನಾಮೆ ಸಲ್ಲಿಸಿರುವ ಶಾಸಕರ ಮನವೊಲಿಕೆ ಹಾಗೂ ಇನ್ನಷ್ಟು ಶಾಸಕರು ರಾಜೀನಾಮೆ ಸಲ್ಲಿಸದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದರು. ಒಂದು ಹಂತದಲ್ಲಿ ಸಿಎಂ ಎಲ್ಲ ಬೆಳವಣಿಗೆಗಳಿಂದ ಬೇಸತ್ತು ಪದತ್ಯಾಗ ಮಾಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಕಾಂಗ್ರೆಸ್ ನಾಯಕರು ಅವರನ್ನು ಸಮಾಧಾನ ಪಡಿಸಿ,ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಕೆ.ಸಿ.ವೇಣುಗೋಪಾಲ್, ಗುಲಾಂ ನಬಿ ಆಝಾದ್ ಜತೆಗೆ ಮಾತುಕತೆಯ ನಂತರ ಕುಮಾರಸ್ವಾಮಿ, “ನಾನೇಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಹೇಳಿದರು.
ಅವರ ಮಾತಿನ ಬೆನ್ನಲ್ಲೇ ಸಚಿವ ಡಿಕೆಶಿ, 2008ರಲ್ಲಿಯೂ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದಾಗ 18 ಶಾಸಕರು ರಾಜೀ ನಾಮೆ ಕೊಟ್ಟಿದ್ದರು. ಆಗ ಸ್ಪೀಕರ್ ಏನು ಕ್ರಮ ಕೈಗೊಂಡಿ ದ್ದರು. ಆಗಲೂ ಸರ್ಕಾರ ಬಿದ್ದಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ