ರೈತನ ಮೇಲೆ ಕಾಡಂದಿ ದಾಳಿ; ಪರಿಹಾರಕ್ಕೆ ಆಗ್ರಹ
Team Udayavani, Aug 29, 2021, 10:13 PM IST
ಪಿರಿಯಾಪಟ್ಟಣ: ತಾಲೂಕಿನ ಐಚನಹಳ್ಳಿ ಗ್ರಾಮದ ವೆಂಕಟೇಶ್ ನಾಯಕ್ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡುಹಂದಿಯೊಂದು ದಾಳಿ ಮಾಡಿದ ಪರಿಣಾಮ ವೆಂಕಟೇಶ್ ಎಂಬುವವರ ಮುಖ ಮತ್ತಿತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.
ಗಾಯಗೊಂಡ ವೆಂಕಟೇಶ್ ರನ್ನು ದಾಳಿ ಮಾಡಿದ ತಕ್ಷಣವೇ ಹುಣಸೂರು ತಾಲ್ಲೂಕಿನ ಹನಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಕಡುಬಡವರಾದ ಇವರ ಬಳಿ ಹೆಚ್ಚಿನ ಚಿಕಿತ್ಸೆಗೆ ಹಣಕಾಸಿನ ತೊಂದರೆ ಇರುವ ಕಾರಣ ಇವರಿಗೆ ಸರ್ಕಾರದಿಂದ ಮತ್ತು ಅರಣ್ಯ ಇಲಾಖೆಯವರು ಹಣಕಾಸು ಸೌಲಭ್ಯವನ್ನು ನೀಡಿ, ಇವರ ಕುಟುಂಬಕ್ಕೆ ಸಹಕಾರ ಮಾಡಿಕೊಡಬೇಕೆಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಚಂದ್ರೇಗೌಡ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಸೆ.1ರಿಂದ ಸುಪ್ರೀಂಕೋರ್ಟ್ನಲ್ಲಿ ಕೆಲ ಪ್ರಕರಣಗಳ ಭೌತಿಕ ವಿಚಾರಣೆ
ಈ ಬಗ್ಗೆ ವಲಯ ಅರಣ್ಯ ಇಲಾಖೆ ಅಧಿಕಾರಿ ಮತ್ತು ತಹಶೀಲ್ದಾರ್ ರಿಗೆ ಮನವಿ ಪತ್ರ ನೀಡಿದ್ದು ಕೂಡಲೇ ದಾಳಿಗೊಳಗಾದ ವೆಂಕಟೇಶ್ ಅವರಿಗೆ ಸಹಾಯಾಸ್ತ ನೀಡಬೇಕೆಂದು ಮನವಿ ಮಾಡಿದ್ದಾರೆ.