ಅರಂತೋಡು: ಕೆರೆಗೆ ಬಿದ್ದ ಮೂರು ಕಾಡಾನೆ; ಸೆರೆ ಹಿಡಿದು ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ
Team Udayavani, Apr 13, 2023, 8:00 AM IST
ಅರಂತೋಡು : ತೋಟಕ್ಕೆ ನುಗ್ಗಿದ್ದ ಕಾಡಾನೆಗಳ ಹಿಂಡು ತೋಟದಲ್ಲಿನ ಕೆರೆಗೆ ಬಿದ್ದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಎ.12ರ ಬುಧವಾರ ರಾತ್ರಿ ನಡೆದಿದೆ.
ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ರಾತ್ರಿ ಮೂರು ಕಾಡಾನೆಗಳು ಕೆರೆಗೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಕೆಲ ಕೃಷಿ ಪುಡಿಗೈದಿದ್ದು, ಬಳಿಕ ಆಯತಪ್ಪಿ ಬಿದ್ದಿವೆ. ಕೆರೆಗೆ ಬಿದ್ದ ಆನೆಗಳಿಗೆ ಮೇಲೆ ಬರಲು ಸಾಧ್ಯವಾಗದೆ ಪರಿತಪಿಸುತ್ತಿವೆ. ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಸ್ಥಳಾಂತರಕ್ಕೆ ಆಗ್ರಹ:
ಕೆರೆಗೆ ಬಿದ್ದಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಪಟ್ಟು ಹಿಡಿದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಯಾವ ಕ್ರಮಕೈಗೊಳ್ಳಲಿದ್ದಾರೆ ಎಂಬುದು ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ