ಅರಕನಹಳ್ಳಿಯಲ್ಲಿ ಆಹಾರ ಅರಸಿ ಬಂದು ಕಂದಕಕ್ಕೆ ಬಿದ್ದ ಆನೆಯ ರಕ್ಷಣೆ
Team Udayavani, Aug 27, 2020, 10:57 AM IST
ಹನೂರು: ಕಂದಕಕ್ಕೆ ಬಿದ್ದು ನರಾಳಾಡುತ್ತಿದ್ದ ಗಂಡು ಆನೆಯೊಂದನ್ನು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣೆ ಮಾಡಿರುವ ಘಟನೆ ಪಟ್ಟಣದ ಅರಕನಹಳ್ಳಿ ಸಮೀಪ ನಡೆದಿದೆ.
ಮಲೆ ಮಹದೇಶ್ವರ ವನ್ಯಜೀವಿ ವಲಯಕ್ಕೆ ಒಳಪಡುವ ಪಚ್ಚೆದೊಡ್ಡಿ ಗಸ್ತಿನ ಅರಕನಹಳ್ಳಿ ಸಮೀಪ ಸುಮಾರು 30 ವರ್ಷದ ಗಂಡಾನೆಯೊಂದು ಕಂದಕಕ್ಕೆ ಬಿದ್ದಿದೆ. ಇದನ್ನು ಗಮನಿಸಿದ ಸಾರ್ವಜನಿಕರು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಜೆಸಿಬಿಯನ್ನು ಕರೆತಂದು ಮೇಲೆತ್ತಿದ್ದಾರೆ. ಬಳಿಕ ಆನೆಗೆ ಅಗ್ನಿಶಾಮಕ ವಾಹನದ ಮೂಲಕ ನೀರನ್ನು ಸಿಂಪಡಿಸಿ, ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ಎಫ್ಒ ಸುಂದರ್, ಉಪ ವಲಯ ಅರಣ್ಯಾಧಿಕಾರಿ ಸಾಲನ್, ಅರಣ್ಯ ರಕ್ಷಕ ತೀರ್ಥಪ್ರಸಾದ್, ಅನಿಲ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ