ರಾಮನಿರುವಲ್ಲಿಯೇ ಅಯೋಧ್ಯೆ; ರಾಷ್ಟ್ರಪತಿ ರಾಮನಾಥ ಕೋವಿಂದ್ ಅಭಿಮತ
Team Udayavani, Aug 29, 2021, 10:30 PM IST
ಲಕ್ನೋ/ಅಯೋಧ್ಯೆ: ರಾಷ್ಟ್ರಪತಿ ರಾಮನಾಥ ಕೋವಿಂದ್ ಪತ್ನಿ ಸವಿತಾ ಕೋವಿಂದ್ ಸಹಿತ ಅಯೋಧ್ಯೆಯಲ್ಲಿರುವ ತಾತ್ಕಾಲಿಕ ದೇಗುಲ ದಲ್ಲಿರುವ ರಾಮ ವಿಗ್ರಹದ ದರ್ಶನ ಮಾಡಿದ್ದಾರೆ. ಇದರ ಜತೆಗೆ ನೂತನವಾಗಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ಕಾಮಗಾರಿ ಸ್ಥಳಕ್ಕೆ ಕೂಡ ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು ರಾಮನಿಲ್ಲದೆ ಅಯೋಧ್ಯೆ ಅಯೋಧ್ಯೆಯೇ ಅಲ್ಲ. ರಾಮನು ಎಲ್ಲಿ ಇರುತ್ತಾನೆಯೋ ಅಲ್ಲಿಯೇ ಅಯೋಧ್ಯೆ ಇರುತ್ತದೆ.
ಇದನ್ನೂ ಓದಿ:ಪ್ಯಾರಾಲಿಂಪಿಕ್ಸ್|ಭಾರತಕ್ಕೆ ಮೂರನೇ ಪದಕ| ಡಿಸ್ಕಸ್ ಥ್ರೋನಲ್ಲಿ ಕಂಚು ಗೆದ್ದ ವಿನೋದ್
ಭಗವಾನ್ ಶ್ರೀರಾಮ ಈ ನಗರದಲ್ಲಿಯೇ ಶಾಶ್ವತವಾಗಿ ನೆಲೆಸಿರುವುದರಿಂದ ಈ ನಗರಕ್ಕೆ ಅಯೋಧ್ಯೆ ಎಂಬ ಹೆಸರು ಬಂದಿದೆ ಎಂದು ಹೇಳಿದ್ದಾರೆ.
ಇದಕ್ಕಿಂತಲೂ ಮೊದಲು ರಾಮಾಯಣಕ್ಕೆ ಸಂಬಂಧಿಸಿದ ಕಾರ್ಯಕ್ರಮವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದ್ದಾರೆ. ತಾತ್ಕಾಲಿಕ ದೇಗುಲದಲ್ಲಿ ರಾಮ ಲಲ್ಲಾನಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲು, ರಾಮ ಮಂದಿರದ ಸಣ್ಣ ಪ್ರತಿಕೃತಿಯನ್ನು ಅರ್ಚಕರು ರಾಷ್ಟ್ರಪತಿ ಕೋವಿಂದ್ ಅವರಿಗೆ ನೀಡಿ ಗೌರವಿಸಿದರು. ಜತೆಗೆ ಹನುಮಾನ್ ಗಾರ್ಹಿ ದೇಗುಲಕ್ಕೆ ಕೂಡ ರಾಷ್ಟ್ರಪತಿ ಭೇಟಿ ನೀಡಿದರು. ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ