ಸಿಬಂದಿ ಉಡಾಫೆಗೆ ಮಹಿಳೆಯಿಂದ ಹೋರಾಟ; ಎಟಿಎಂನಲ್ಲಿ ಹಣ ಹಾಕಿದರೂ ರಸೀದಿ ಬಾರದೆ ಕಂಗಾಲು


Team Udayavani, Jun 8, 2022, 6:15 AM IST

ಸಿಬಂದಿ ಉಡಾಫೆಗೆ ಮಹಿಳೆಯಿಂದ ಹೋರಾಟ; ಎಟಿಎಂನಲ್ಲಿ ಹಣ ಹಾಕಿದರೂ ರಸೀದಿ ಬಾರದೆ ಕಂಗಾಲು

ಸುರತ್ಕಲ್‌: ತುರ್ತಾಗಿ ಚಿಕಿತ್ಸೆಗೆಂದು ಬ್ಯಾಂಕ್‌ಗೆ ಹಣ ಹಾಕಲು ಬಂದ ಮಹಿಳೆಗೆ ಬ್ಯಾಂಕ್‌ ಸಿಬಂದಿ ತೋರಿದ ಉಡಾಫೆ ವರ್ತನೆಯಿಂದ ತೀವ್ರ ಆಕ್ರೋಶಗೊಂಡು ಹೋರಾಟಕ್ಕಿಳಿದು ಹಣ ಪಡೆದುಕೊಂಡ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.

ಚಿಕಿತ್ಸೆಗೆ ದಾಖಲಾಗಿದ್ದ ಕುಟುಂಬವೊಂದಕ್ಕೆ ನೆರವಾಗುವ ಸಲುವಾಗಿ ಅವರು ನೀಡಿದ ಹಣವನ್ನು ತನ್ನ ಖಾತೆಯ ಮೂಲಕ ಅವರಿಗೆ ಹಾಕಲು ಸುರತ್ಕಲ್‌ ರಾಷ್ಟ್ರೀಯ ಬ್ಯಾಂಕ್‌ನ ಶಾಖೆಯೊಂದಕ್ಕೆ ಹೋದ ಸಂದರ್ಭ ಸಿಬಂದಿ ಹಣವನ್ನು ಎಟಿಎಂ ಯಂತ್ರದ ಮೂಲಕ ಪಾವತಿಸುವಂತೆ ಸೂಚಿಸಿದರು.

ಮಹಿಳೆ ಎಟಿಎಂ ಬಳಿಯ ಯಂತ್ರದಲ್ಲಿ ಹಣ ಹಾಕಿ ರಶೀದಿಗಾಗಿ ಕಾಯುತ್ತಾ ನಿಂತರೂ ಪ್ರೊಸೆಸ್‌ ಎಂಬುದಷ್ಟೇ ಬಂದಿತ್ತು. ಖಾತೆಗೆ ಹಣ ವರ್ಗಾವಣೆ ಆಗದೆ ಯಂತ್ರ ಕೈಕೊಟ್ಟಿತ್ತು. ಇದನ್ನು ತಿಳಿದು ಗಾಬರಿಯಾದ ಮಹಿಳೆ ಹಣದ ಅಗತ್ಯವಿದ್ದು ತತ್‌ಕ್ಷಣ ಹಣ ಖಾತೆಗೆ ಹಾಕುವಂತೆ ಮನವಿ ಮಾಡಿದರು. ಇದಕ್ಕೆ ಸರಿಯಾಗಿ ಸ್ಪಂದಿಸದ ಸಿಬಂದಿ ಮ್ಯಾನೇಜರ್‌ ಇಲ್ಲ, ಇದರ ಬಗ್ಗೆ ಮುಖ್ಯ ಕಚೇರಿಗೆ ಹೋಗಿ ತಿಳಿಸಿ. ಈ ಸಮಸ್ಯೆ ಬಗೆಹರಿಸಲು ಎರಡು ಮೂರು ದಿನ ತಗಲುತ್ತದೆ ಎಂದಾಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆಗೆ ಹಣ ಕಟ್ಟಲೆಂದು ಬಂದಿದ್ದೆ.

ನೇರವಾಗಿ ನಗದು ಪಡೆದುಕೊಂಡು ಖಾತೆಗೆ ಹಾಕಬಹುದಿತ್ತು. ನಿಮ್ಮ ನಿರ್ಲಕ್ಷéದಿಂದ ಸಮಸ್ಯೆ ಆಗಿದೆ. ಹಣ ವರ್ಗಾವಣೆ ಮಾಡಲೇಬೇಕೆಂದು ಪಟ್ಟು ಹಿಡಿದು ಕುಳಿತರು. ಸ್ಥಳೀಯರು ಜಮಾಯಿಸಿ ಮಹಿಳೆಗೆ ಬೆಂಬಲ ಸೂಚಿಸಿ ಈ ಶಾಖೆಯಲ್ಲಿ ಗ್ರಾಹಕರಿಗೆ ಸ್ಪಂದನೆಯೇ ದೊರಕುತ್ತಿಲ್ಲ ಎಂದು ಕಿಡಿಕಾರಿದರು.

ಸಿಬಂದಿ ಕಂಪ್ಯೂಟರ್‌ನಲ್ಲಿ ಪರಿಶೀಲಿಸಿದಾಗ ಹಣ ಹಾಕಿರುವುದು ರುಜುವಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬ್ಯಾಂಕ್‌ನಿಂದ ಹಣ ದೊರಕಿಸಿ, ತಾಂತ್ರಿಕವಾಗಿ ಹಣ ವಿಳಂಬವಾಗಿ ಬಂದರೆ ಮರುಕಳಿಸಲಾಗುವುದು ಎಂದು ಮಹಿಳೆಯಿಂದ ಮುಚ್ಚಳಿಕೆ ಪತ್ರ ಕೊಡಿಸಿ ಪ್ರಕರಣ ಸುಖಾಂತ್ಯಗೊಳಿಸಿದರು.

ಟಾಪ್ ನ್ಯೂಸ್

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ

1-ssaas

Chemistry ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalurಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ. ಬಿ. ರಿಷ್ಯಂತ್‌

Mangaluru ಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ.ಬಿ.ರಿಷ್ಯಂತ್‌

India post office ಶಾಖಾ ಅಂಚೆ ಕಚೇರಿಗಳು ಇನ್ನು ಮುಂದೆ ಹೈಟೆಕ್‌!

India post office ಶಾಖಾ ಅಂಚೆ ಕಚೇರಿಗಳು ಇನ್ನು ಮುಂದೆ ಹೈಟೆಕ್‌!

Mangaluru ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಕುಸಿದು ಸಾವು

Mangaluru ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಕುಸಿದು ಸಾವು

Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ

Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ

arrestMangaluru ಗಾಂಜಾ ಸೇವನೆ: ಇಬ್ಬರ ಬಂಧನ

Mangaluru ಗಾಂಜಾ ಸೇವನೆ: ಇಬ್ಬರ ಬಂಧನ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.