ರಕ್ಷಣಾ ಪಡೆಗಳಲ್ಲಿ ಸದ್ಯದಲ್ಲೇ “ಮಹಿಳಾ ಪರ್ವ’

ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ

Team Udayavani, Sep 8, 2021, 7:45 PM IST

ರಕ್ಷಣಾ ಪಡೆಗಳಲ್ಲಿ ಸದ್ಯದಲ್ಲೇ “ಮಹಿಳಾ ಪರ್ವ’

ಸಾಂದರ್ಭಿಕ ಚಿತ್ರ.

ನವದೆಹಲಿ: ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವ ಐತಿಹಾಸಿಕ ನಿರ್ಧಾರವನ್ನು ಸೇನಾ ಪಡೆಗಳು ಕೈಗೊಂಡಿವೆ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯಾ ಭಾಟಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ (ಎನ್‌ಡಿಎ) ಸೂಕ್ತ ತರಬೇತಿ ಹೊಂದಿರುವ ಮಹಿಳೆಯರನ್ನು ರಕ್ಷಣಾ ಪಡೆಗಳಿಗೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ನ್ಯಾ.ಎಸ್‌.ಕೆ. ಕೌಲ್‌ ನೇತೃತ್ವದ ಪೀಠದ ಮುಂದೆ ವಿವರಣೆ ಸಲ್ಲಿಸಿದ ಅವರು, “ಸದ್ಯಕ್ಕೆ ಮಹಿಳೆಯರನ್ನು ಸೇನೆಯ 10 ಆರ್ಮ್ಸ್ ವಿಭಾಗಕ್ಕೆ ಮಾತ್ರ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಆದರೆ, ಅವರನ್ನು ಸೇನೆಯ ಇನ್‌ಫ್ಯಾಂಟ್ರಿ ಅಥವಾ ಆರ್ಮರ್ಡ್‌-ಮೆಕ್ಯಾನೈಸ್ಡ್ ಪಡೆಗಳಲ್ಲಿ ಹಾಗೂ ಆರ್ಟಿಲರಿ ವಿಭಾಗಗಳಲ್ಲೂ ನೇಮಕ ಮಾಡಿಕೊಳ್ಳಬೇಕೇ, ಬೇಡವೇ ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ” ಎಂದು ತಿಳಿಸಿದರು.

ಜೊತೆಗೆ, “ಮಹಿಳೆಯರಿಗೆ ಸೇನೆಯಲ್ಲಿ ಸೇರಿಸಿಕೊಳ್ಳುವ ಕುರಿತ ಹಲವಾರು ನಿಯಮಾವಳಿಗಳನ್ನು ರೂಪಿಸಬೇಕು ಹಾಗೂ ಅದಕ್ಕೆ ಸೂಕ್ತ ಮೂಲಸೌಕರ್ಯಗಳನ್ನು ಕಲ್ಪಿಸಬೇಕಿದೆ. ಇದಕ್ಕೆ ಕಾಲಾವಕಾಶ ಬೇಕಿರುವುದರಿಂದ ರಕ್ಷಣಾ ಪಡೆಗಳ ನೇಮಕಾತಿ ಪ್ರಕ್ರಿಯೆಗಳು ಈ ವರ್ಷವೂ ಎಂದಿನಂತೆ ನಡೆಯಲಿವೆ” ಎಂದೂ ವಿವರಣೆ ನೀಡಿದರು.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1102 ಪಾಸಿಟಿವ್ ಪ್ರಕರಣ ಪತ್ತೆ|1458 ಸೋಂಕಿತರು ಗುಣಮುಖ

ಸಾರ್ಥಕವಾಯ್ತು ಮನವಿ
ಅರ್ಹತೆಯುಳ್ಳ ಮಹಿಳೆಯರಿಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹಿರಿಯ ವಕೀಲರಾದ ಕುಶ್‌ ಕಾರ್ಲಾ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅವಿವಾಹಿತ ಹಾಗೂ 12ನೇ ತರಗತಿ ಉತ್ತೀರ್ಣರಾಗಿರುವ ಮಹಿಳೆಯರಿಗೆ ಎನ್‌ಡಿಎ ಹಾಗೂ ನೌಕಾಪಡೆಯ ಅಕಾಡೆಮಿ ಪರೀಕ್ಷೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಎನ್‌ಡಿಎನಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಸೇನಾ ಪಡೆಗಳ ಆಯಕಟ್ಟಿನ ಜಾಗಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸುವ ಅವಕಾಶವಿದ್ದರೂ ಅವರಿಗೆ ಅವರು ಮಹಿಳೆಯರು ಎಂಬ ಕಾರಣಕ್ಕಾಗಿ ಅವರ ನೇಮಕಾತಿ ನಡೆಸಲಾಗುತ್ತಿಲ್ಲ. ಈ ಮೂಲಕ, ಸಂವಿಧಾನವು ಮಹಿಳೆಯರಿಗೆ ಕೊಟ್ಟಿರುವ ಲಿಂಗ ಸಮಾನತೆಯ ಹಕ್ಕುಗಳಿಂದ ಅವರನ್ನು ವಂಚಿತರನ್ನಾಗಿಸಲಾಗುತ್ತಿದೆ ಎಂದು ವಕೀಲರು ತಮ್ಮ ಮನವಿಯಲ್ಲಿ ವಾದಿಸಿದ್ದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.