ಮಹಿಳಾ ಕ್ರಿಕೆಟ್‌ನ ಭರವಸೆಯ ಕಿರಣ; ಶಫಾಲಿ ವರ್ಮಾ


Team Udayavani, Jun 11, 2020, 7:45 PM IST

ಮಹಿಳಾ ಕ್ರಿಕೆಟ್‌ನ ಭರವಸೆಯ ಕಿರಣ; ಶಫಾಲಿ ವರ್ಮಾ

ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾಟದಲ್ಲಿ ಅತೀ ಚಿಕ್ಕ ವಯಸ್ಸಿನಲ್ಲಿ ಅರ್ಧ ಶತಕ ಬಾರಿಸಿದ ಭಾರತದ ಕ್ರೀಡಾಪಟು ಯಾರೆಂದು ಕೇಳಿದರೆ ಬಹುತೇಕರ ಉತ್ತರ ಸಚಿನ್‌ ತೆಂಡೂಲ್ಕರ್‌. ನೀವೂ ಹಾಗೆಂದುಕೊಂಡರೆ ಮಾತ್ರ ನಿಮ್ಮ ಉತ್ತರ ತಪ್ಪು. ಈ ಸಾಧನೆ ಮಾಡಿದವರು ಮಹಿಳಾ ಕ್ರಿಕೆಟ್‌ ಆಟಗಾರ್ತಿ ಶಫಾಲಿ ವರ್ಮಾ.

ತಮ್ಮ 16 ವರ್ಷ 216 ದಿನಗಳ ಪ್ರಾಯದಲ್ಲಿದ್ದ ಸಚಿನ್‌ ತೆಂಡೂಲ್ಕರ್‌ 1989ರಲ್ಲಿ ಪಾಕಿಸ್ತಾನದ ವಿರುದ್ಧದ ಟೆಸ್ಟ್‌ ಪಂದ್ಯಾಟದಲ್ಲಿ 59 ರನ್‌ಗಳನ್ನು ಭಾರಿಸಿದ್ದರು. ಇದಾದ 30 ವರ್ಷಗಳ ಬಳಿಕ ಶಫಾಲಿ ಶರ್ಮಾ ಈ ದಾಖಲೆ ಮುರಿದಿದ್ದು ತಮ್ಮ 15 ವರ್ಷ 285 ದಿನಗಳ ಪ್ರಾಯದಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ 73 ರನ್‌ಗಳನ್ನು ಬಾರಿಸುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಆದರೆ ಕೇವಲ 18 ದಿನಗಳ ಅಂತರದಲ್ಲಿ ಯುಎಇಯ ಕವಿಶಾ ಎಗೊಡೇಜ್‌ ಅವರ ದಾಖಲೆ ಮುರಿಯುವ ಅವಕಾಶ ಇವರ ಕೈತಪ್ಪಿತು.

ಕವಿಶಾ ಅವರು ತಮ್ಮ 15 ವರ್ಷ 267 ದಿನಗಳ ಪ್ರಾಯದಲ್ಲಿ ಮಲೇಷ್ಯಾ ವಿರುದ್ಧ 57 ರನ್‌ಗಳನ್ನು ಬಾರಿಸುವ ಮೂಲಕ ದಾಖಲೆ ಮಾಡಿದ್ದರು.

ಜನವರಿ 28, 2003ರಲ್ಲಿ ಜನಿಸಿದ ಶಫಾಲಿ ಶರ್ಮ, 2019ರ ಸೆಪ್ಟೆಂಬರ್‌ 24ರಂದು ಸೌತ್‌ಆಫ್ರಿಕಾ ವಿರುದ್ಧ ಸೂರತ್‌ನಲ್ಲಿ ನಡೆದ ಟಿಟ್ವೆಂಟಿ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು. ದೀಪ್ತಿ ಶರ್ಮಾ ಅವರ ಬೌಲಿಂಗ್‌ನ ಮ್ಯಾಜಿಕ್‌ನಿಂದಾಗಿ ಆ ಪಂದ್ಯವನ್ನು ಭಾರತ ಗೆದ್ದಿತ್ತಾದರೂ ನಾಲ್ಕು ಬಾಲ್‌ಗ‌ಳನ್ನು ಎದುರಿಸಿದ್ದ ಶಫಾಲಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಮ್ಮ ಖಾತೆ ತೆರೆಯುವಲ್ಲಿ ವಿಫ‌ಲರಾಗಿದ್ದರು.

ಇದಾದ ಕೆಲ ಸಮಯದಲ್ಲಿಯೇ ವೆಸ್ಟ್‌ಇಂಡೀಸ್‌ ವಿರುದ್ಧ ನಡೆದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದರು.

ಈ ವೇಳೆಗಾಗಲೇ ಆರಂಭಿಕ ಆಟಗಾರರಾಗಿ ತಮ್ಮದೇ ಆದ ಹೆಸರು ಸಂಪಾದಿಸಿದ್ದ ಸ್ಮತಿ ಮಂದಣ್ಣ, ಐಸಿಸಿ ವರ್ಷದ ಮಹಿಳಾ ಕ್ರೀಡಾಪಟುವಾಗಿಯೂ ಹೆಸರು ಪಡೆದಿದ್ದರು. ಶಫಾಲಿ ಶರ್ಮಾ ಇವರಿವರಿಗೆ ಉತ್ತಮ ಜತೆಯಾದರು. ವೆಸ್ಟ್‌ಇಂಡೀಸ್‌ ವಿರುದ್ಧ ತಮ್ಮ ಮೊದಲ ಟಿಟ್ವೆಂಟಿ ಪಂದ್ಯದಲ್ಲೇ 73 ರನ್‌ ಬಾರಿಸುವ ಮೂಲಕ ಸ್ಮತಿ ಮಂದಣ್ಣ ಅವರ ಆಟಕ್ಕೆ ಜತೆಯಾಗಿದ್ದರು. ಆರಂಭಿಕ ಆಟಗಾರರಾದ ಇವರ ಜತೆಯಾಟದ 143ರನ್‌ಗಳು ಮಹಿಳಾ ಟಿಟ್ವೆಂಟಿಯಲ್ಲಿ ಹೊಸ ದಾಖಲಾಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.