ಪಂಪ್ವೆಲ್ ಬಳಿ ಕಾಮಗಾರಿ; ವಾಹನ ಸಂಚಾರಕ್ಕೆ ತೊಂದರೆ
Team Udayavani, Jun 15, 2020, 5:08 AM IST
ಮಹಾನಗರ: ನಗರದ ಹೃದಯಭಾಗವಾದ ಪಂಪ್ವೆಲ್ ಬಳಿ ಕಳೆದ ಕೆಲವು ವಾರಗಳಿಂದ ಆಮೆಗತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಪಂಪ್ವೆಲ್ನಿಂದ ಕಂಕನಾಡಿ ಸಂಪರ್ಕ ರಸ್ತೆಯ ಗಣೇಶ್ ಮೆಡಿಕಲ್ ಎದುರು ಒಂದು ತಿಂಗಳಿನಿಂದ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಒಂದು ಭಾಗದ ರಸ್ತೆಯನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ ಎರಡೂ ಬದಿ ಸಂಚಾರ ಏಕಮುಖ ರಸ್ತೆಯಲ್ಲಿ ಮಾಡಲಾಗಿದ್ದು, ಸದಾ ವಾಹನ ದಟ್ಟಣೆಯಾಗುತ್ತಿದೆ.
ಕಳೆದ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ನೀರು ಹರಿಯಲು ಸಮರ್ಪಕ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಸೃಷ್ಟಿಯಾಗಿ ಅಕ್ಕ ಪಕ್ಕದ ಮನೆಗಳಿಗೆ ನೀರು ನುಗ್ಗಿತ್ತು. ಈ ಪ್ರದೇಶದಲ್ಲಿ ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇರಲಿಲ್ಲ. ಇದೇ ಕಾರಣಕ್ಕೆ ಅನಾಹುತ ಸಂಭವಿಸುತ್ತಿತ್ತು. ಇದೀಗ ಕಾಂಕ್ರೀಟ್ ಚರಂಡಿ ವ್ಯವಸ್ಥೆ ನಿರ್ಮಿಸಲಾಗುತ್ತಿದೆ.
2ವಾರಗಳಲ್ಲಿ ಕಾಮಗಾರಿ ಪೂರ್ಣ
ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ಕೆಲ ದಿನಗಳಿಂದ ಕಾಂಕ್ರೀಟ್ ಚರಂಡಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಕೊನೆಯ ಹಂತದಲ್ಲಿದೆ. ಇನ್ನು ರಸ್ತೆಗೆ ಕಾಂಕ್ರೀಟಿಕರಣ ಬಾಕಿ ಇದೆ. ಅಂದಾಜು ಎರಡು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
- ಸಂದೀಪ್, ಸ್ಥಳೀಯ ಕಾರ್ಪೊರೇಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ