ಬೆಂಗಳೂರಿನಲ್ಲಿ ವಿಶ್ವದರ್ಜೆಯ ಸಿಟಿ: ಎಂ.ಬಿ.ಪಾಟೀಲ್
Team Udayavani, Nov 10, 2023, 11:47 PM IST
ಬೆಂಗಳೂರು: ರಾಜ್ಯದ ಆರ್ಥಿಕ ವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡುವುದರ ಜತೆಗೆ ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ವಿಶ್ವದರ್ಜೆಯ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರ(ಕೆಎಚ್ಐಆರ್ ಸಿಟಿ)ವನ್ನು ಅಭಿವೃದ್ಧಿಪಡಿಸಲು ಸರಕಾರ ಉದ್ದೇಶಿಸಿದ್ದು, ಬೆಂಗಳೂರಿನಿಂದ ಕೇವಲ 50-80 ಕಿ.ಮೀ. ದೂರದಲ್ಲಿ ಈ ನಗರ ತಲೆಯೆತ್ತಲಿದೆ.
ಜಗತ್ತಿನ ಪ್ರಸಿದ್ಧ ಕಂಪೆನಿಗಳು, ಕೇಂಬ್ರಿಡ್ಜ್ಗೆ
ಸರಿಸಮನಾದ ವಿಶ್ವವಿದ್ಯಾನಿಲಯಗಳು, ಆಸ್ಪತ್ರೆಗಳು, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಅತ್ಯಾಧುನಿಕ ಸ್ಟಾರ್ಟ್ಅಪ್ಗ್ಳು, ತಯಾರಿಕೆ ಕಂಪೆನಿಗಳು ಈ ನಗರದಲ್ಲಿರಲಿವೆ. ಈಗಾಗಲೇ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಿಲಿಕಾನ್ ಸಿಟಿಯು ಈ ಪ್ರಾಜೆಕ್ಟ್ನಿಂದ ಮತ್ತೂಂದು ಸ್ತರಕ್ಕೆ ಏರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಈ ಸಂಬಂಧ ಏರ್ಪಡಿಸಿದ್ದ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು ಮತ್ತು ಸಂಶೋಧಕರ ದುಂಡು ಮೇಜಿನ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇವಿ ನೀತಿ ಇನ್ನು ಕ್ಲೀನ್ ಮೊಬಿಲಿಟಿ ನೀತಿ
ಇವಿ- ನೀತಿ’ (ವಿದ್ಯುತ್ಚಾಲಿತ ವಾಹನ ನೀತಿ)ಯನ್ನು ಕ್ಲೀನ್ ಮೊಬಿಲಿಟಿ ನೀತಿ’ ಎಂದು ಮರುನಾಮಕರಣ ಮಾಡಲು ಉದ್ದೇಶಿಸಿದ್ದು, ಹಲವು ಮಾರ್ಪಾಡುಗಳೊಂದಿಗೆ ಅಸ್ತಿತ್ವಕ್ಕೆ ಬರಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ