Israel: ಸುರಂಗಗಳ ಲೋಕ: ಸ್ಪಾಂಜ್‌ ಬಾಂಬ್‌ಗ ಇಸ್ರೇಲ್‌ ಸಿದ್ಧತೆ


Team Udayavani, Oct 28, 2023, 12:12 AM IST

isreal tunnel

ಟೆಲ್‌ ಅವಿವ್‌/ಜೆರುಸಲೇಂ: ಗಾಜಾದ ನೆಲದಲ್ಲಿ ಇಸ್ರೇಲ್‌ ಸೇನೆಯ ನಿರಂತರ ದಾಳಿ ಮುಂದುವರಿದಿರು ವಂತೆಯೇ, ಇಲ್ಲಿನ ಭೂಮಿಯಡಿ ಭೂಗತ ಸುರಂಗಗಳ ಮಹಾಲೋಕವೇ ಇರುವುದು ತಿಳಿದುಬಂದಿದೆ!

ನೂರಾರು ಕಿ.ಮೀ. ಉದ್ದದ, 80 ಮೀಟರ್‌ ಆಳದ ಈ ಸುರಂಗಗಳ ಜಾಲವೇ ಈಗ ಇಸ್ರೇಲ್‌ ಸೇನೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಮಾಸ್‌ ಉಗ್ರರು ಈ ನಗರದಂಥ ಸುರಂಗದೊಳಗೆ ಒತ್ತೆಯಾಳುಗಳನ್ನು ಇಟ್ಟುಕೊಂಡಿದ್ದಾರೆ. ಇದರ ಮೂಲಕವೇ ಹೊರಪ್ರಪಂಚದೊಂದಿಗೆ ಸಂಪರ್ಕ ಸಾಧಿಸುತ್ತಿದ್ದು, ಬೇರೆ ದೇಶಗಳಿಂದ ಶಸ್ತ್ರಾಸ್ತ್ರಗಳ ರವಾನೆಯೂ ಸುರಂಗಗಳ ಮೂಲಕವೇ ಆಗುತ್ತಿದೆ ಎನ್ನಲಾಗಿದೆ.

ಇಲ್ಲಿ ಬಂಕರ್‌ಗಳು, ದಾಸ್ತಾನು ಕೇಂದ್ರಗಳು ಇದ್ದು, ಸುರಂಗದೊಳ ಗಿಂದಲೇ ರಾಕೆಟ್‌ ಉಡಾವಣೆ ವ್ಯವಸ್ಥೆ ಗಳನ್ನು ರೂಪಿಸಲಾಗಿದೆ. ಸುರಂಗಗಳ ಜಾಲದೊಳಗೆ ಹಮಾಸ್‌ ಉಗ್ರರನ್ನು ಎದುರಿಸಲು ಇಸ್ರೇಲ್‌ “ಸ್ಪಾಂಜ್‌ ಬಾಂಬ್‌’ಗಳನ್ನು ತಯಾರಿಸುತ್ತಿದೆ ಹಾಗೂ ಕೆಮಿಕಲ್‌ ಗ್ರೆನೇಡ್‌ಗಳ ಪರೀಕ್ಷೆಗಳನ್ನೂ ನಡೆಸುತ್ತಿದೆ ಎನ್ನಲಾಗಿದೆ.

ಭೂ ದಾಳಿ ಮುಂದುವರಿಕೆ: ಇಸ್ರೇಲ್‌ ಸೇನೆಯು ಸತತ 2ನೇ ದಿನ ಗಾಜಾದ ಮೇಲೆ ಭೂ ಆಕ್ರಮಣ ನಡೆಸಿದ್ದು, ಗುರುವಾರ ರಾತೋರಾತ್ರಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಗಾಜಾದೊಳಗೆ ನುಗ್ಗಿವೆ. ಇಸ್ರೇಲ್‌ ದಾಳಿಗೆ ಗಾಜಾದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಈವರೆಗೆ ಗಾಜಾ ಪಟ್ಟಿ ಯಲ್ಲಿ 2,900 ಮಕ್ಕಳು, 1,500 ಮಹಿಳೆಯರು ಸೇರಿದಂತೆ 7 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 1,650 ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಇಲಾಖೆ ತಿಳಿಸಿದೆ.

ಇಸ್ರೇಲ್‌-ಹಮಾಸ್‌ ಯುದ್ಧದ ನಡು ವೆಯೇ, ಅಮೆರಿಕವು ಶುಕ್ರವಾರ ಸಿರಿ ಯಾದ ಮೇಲೆ ವೈಮಾನಿಕ ದಾಳಿ ನಡೆ ಸಿದೆ. ಸಿರಿಯಾದಲ್ಲಿನ ಇರಾನ್‌ನ ರೆವೊಲ್ಯೂಶನರಿ ಗಾರ್ಡ್‌ ಗುರಿ ಯಾಗಿ ಸಿಕೊಂಡು ಈ ದಾಳಿ ನಡೆಸಲಾಗಿದೆ. ಕಳೆದ ವಾರವಷ್ಟೇ ಇರಾನ್‌ ಪಡೆಗಳು ಡ್ರೋನ್‌, ಕ್ಷಿಪಣಿಗಳ ಮೂಲಕ ಅಮೆರಿಕದ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದವು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.