“ಗೋಬಿ, ಪಾನಿಪುರಿ ಗೊತ್ತು, ಉತ್ತಮ ಉಡುಪಿ ಊಟದ ಹೊಟೇಲ್‌ ಗೊತ್ತಿಲ್ಲ’

ವಿಶ್ವ ಪ್ರವಾಸೋದ್ಯಮ ದಿನಾಚರಣೆ

Team Udayavani, Sep 28, 2021, 5:41 AM IST

“ಗೋಬಿ, ಪಾನಿಪುರಿ ಗೊತ್ತು, ಉತ್ತಮ ಉಡುಪಿ ಊಟದ ಹೊಟೇಲ್‌ ಗೊತ್ತಿಲ್ಲ’

ಉಡುಪಿ: ನಮ್ಮ ಜನರಿಗೆ ಗೋಬಿ ಮಂಚೂರಿ, ಪಾನಿಪುರಿ ಗೊತ್ತಿದೆ. ನಮ್ಮದೇ ಆದ ಉತ್ತಮ ಉಡುಪಿ ಊಟದ ಹೊಟೇಲ್‌ ಎಲ್ಲಿದೆ ಎಂದು ಕೇಳಿದರೆ ಹೇಳುವುದು ಕಷ್ಟ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ (ಆ್ಯಕ್ಟ್) ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಪ್ರವಾಸ ಕಥನ ಕುರಿತು ವಿಷಯ ತೆರೆದಿಟ್ಟ ಮಣಿಪಾಲ ಕೆಎಂಸಿ ಮೂಳೆ ಚಿಕಿತ್ಸೆ ವಿಭಾಗ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ| ಕಿರಣ್‌ ಆಚಾರ್ಯ ಅವರು ಜಗತ್ತಿನಾದ್ಯಂತ ಪ್ರವಾ ಸೋದ್ಯಮವನ್ನು ಅಭಿವೃದ್ಧಿಪಡಿಸಿದಂತೆ ನಮ್ಮ ಜಿಲ್ಲೆಯಲ್ಲಿಯೂ ಅಭಿವೃದ್ಧಿ ಪಡಿಸಲು ಅವಕಾಶಗಳಿವೆ ಎಂದರು.

ಹೆಮ್ಮಾಡಿ, ಉಡುಪಿ ಮಹತ್ವ
ಚಿತ್ರ ಸಹಿತ ಘಟನಾವಳಿಗಳನ್ನು ವಿವರಿಸಿದ ಡಾ| ಆಚಾರ್ಯ, ಜನವರಿ- ಫೆಬ್ರವರಿಯಲ್ಲಿ ಹೆಮ್ಮಾಡಿಯ ಸೇವಂತಿಗೆ ತೋಟವನ್ನು ಯಾರೂ ಮಾರ್ಕೆಟಿಂಗ್‌ ಮಾಡಲಿಲ್ಲ ಎಂದರು. ಈಗ ಪ್ರಶಾಂತ ವಾತಾವರಣದಲ್ಲಿ ಐಷಾರಾಮಿ ಹೊಟೇಲ್‌ಗ‌ಳನ್ನು ಸ್ಥಾಪಿಸಿದರೆ ಪ್ರವಾಸಿಗರನ್ನು ಆಕರ್ಷಿಸಬಹುದು. ಇಂತಹ ಟೂರಿಸಂ ಅನ್ನು ಗ್ರೀಸ್‌, ಅಮೆರಿಕ ಮೊದಲಾದೆಡೆ ಕಾಣಬಹುದು. ಇಟಲಿ, ಭೂತಾನ್‌ನಲ್ಲಿ ಕೃಷಿ ಪ್ರವಾಸೋದ್ಯಮವಿದೆ. ಅಮೆರಿಕ, ಬಾಲಿಯಲ್ಲಿ ಗದ್ದೆ ಬದಿ ಗುಡಿಸಲುಗಳನ್ನು ಕಟ್ಟಿ ಪ್ರವಾಸಿಗರನ್ನು ಆಕರ್ಷಿಸುತ್ತಾರೆ. ಉಡುಪಿಯ ರಥಬೀದಿಯನ್ನು ಪಾರಂಪರಿಕವಾಗಿ ಆಕರ್ಷಣೀಯವಾಗಿಸಬಹುದು. ಇಂತಹ ಜಾಗಗಳಲ್ಲಿ ಯಾವುದೇ ಫ್ಲೆಕ್ಸ್‌, ಬೋರ್ಡ್‌ ಗಳಿರಬಾರದು. ಹಿಂದೆಲ್ಲ ಫೋಟೋಗಳನ್ನು ತೆಗೆಯಬಾರದು ಎಂಬ ಸೂಚನೆಗಳಿರುತ್ತಿತ್ತು. ಈಗ ಕಾಲ ಬದಲಾಗಿದೆ. ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ ಎನ್ನಬೇಕಾಗಿದೆ ಎಂದರು.

ರಿಕ್ಷಾ-ಸೈಕಲ್‌-ಸ್ಪಿರಿಚುವಲ್‌ ಟೂರಿಸಂ
ಆಟೋ ರಿಕ್ಷಾ ಚಾಲಕರಿಗೆ ಪ್ರವಾಸಿ ತಾಣಗಳ ಮಾಹಿತಿಗಳು ತಿಳಿದಿರುವುದರಿಂದ ಪ್ರವಾಸಿಗರಿಗೆ ಮಾರ್ಗದರ್ಶನ ನೀಡ ಬಹುದು. ಪೋರ್ಚುಗಲ್‌, ಜಪಾನ್‌ನಲ್ಲಿ ರಿಕ್ಷಾ ಟೂರಿಸಂಗಳಿವೆ.

ಬಾಡಿಗೆ ಬೈಸಿಕಲ್‌ ಮೂಲಕ ಸೈಕಲ್‌ ಟೂರಿಸಂ ಅನ್ನು ನಾನೇ ಸ್ವತಃ ಚಲಾಯಿಸಿ ಅನುಭವಿಸಿದ್ದೇನೆ. ಬಾಲಿ ದ್ವೀಪದಲ್ಲಿ ನಡೆಯುವ ರಾಮಾಯಣದ ಲಂಕಾದಹನ ಸನ್ನಿವೇಶ ಸ್ಪಿರಿಚುವಲ್‌ ಟೂರಿಸಂಗೆ ಉದಾಹರಣೆ. ಕಾಂಬೋಡಿಯಾದಲ್ಲಿ ಮೊಸರನ್ನೂ ಟೂರಿಸಂಗೆ ಬಳಸಿಕೊಂಡಿದ್ದಾರೆ. ನಾನು ಸಸ್ಯಾಹಾರಿಯಾದರೂ ಪ್ರವಾಸ ಮಾಡುವಾಗ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಮೀನು ಆಹಾರವನ್ನು ಪ್ರವಾಸೋದ್ಯಮಕ್ಕೆ ಬಳಸಿಕೊಂಡಿರುವುದನ್ನು ಕಂಡಿದ್ದೇನೆ. ಅಲ್ಲಿ ಯಾವುದೇ ರೀತಿಯ ವಾಸನೆಗಳಿರುವುದಿಲ್ಲ ಎಂದು ಡಾ| ಕಿರಣ್‌ ಆಚಾರ್ಯ ಹೇಳಿದರು.

ಇದನ್ನೂ ಓದಿ:ಮದುವೆಗೆ ಮಾಡಿದ ಸಾಲ ತೀರಿಸಲಾಗಲಿಲ್ಲ ಎಂದು ಮದುವೆಯಾದ ಐದೇ ತಿಂಗಳಲ್ಲಿ ವ್ಯಕ್ತಿ ನೇಣಿಗೆ ಶರಣು

ಕಾರ್ಯಪಡೆ
ಮೂಲಕ ಸರಳೀಕರಣ: ಡಿಸಿ
ನಮ್ಮ ವಿಶೇಷ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಕೆಲಸ ಆಗಬೇಕು. ಉಡುಪಿಯು ಹೊಟೇಲ್‌ ಉದ್ಯಮಕ್ಕೆ ಹೆಸರಾಗಿದ್ದು ಉಡುಪಿಯ ಖಾದ್ಯವಿಶೇಷಗಳನ್ನು ಆಕರ್ಷಿಸಲು ಹೊಟೇಲಿಗರ ಸಹಕಾರ ಪಡೆಯಬೇಕು. ಹಿಂದೆ ಹೋಮ್‌ ಸ್ಟೇ ಯೋಜನೆ ಆರಂಭವಾಗಿತ್ತು. ಇದರಲ್ಲಿರುವ ಕೆಲವು ದೋಷಗಳನ್ನು ಸರಿಪಡಿಸಲು ಕಾರ್ಯಪಡೆ ಸಭೆ ಮೂಲಕ ಚರ್ಚಿಸಲಾಗುವುದು. ಧಾರ್ಮಿಕ, ಸಾಹಸ ಟೂರಿಸಂಗೆ ಅವಕಾಶಗಳಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅಭಿಪ್ರಾಯಪಟ್ಟರು.

ಸ್ಥಳೀಯ ವೈಶಿಷ್ಟ್ಯ
ಹೊರಜಗತ್ತಿಗೆ: ಸಿಇಒ
ಈಗ ವರ್ಚುವಲ್‌ ಟೂರಿಸಂ ಇದೆ. ಕೊರಗ ಸಮುದಾಯದ ಬುಟ್ಟಿಯಂತಹ ಉತ್ಪನ್ನಗಳನ್ನು ಹೊರ ಜಗತ್ತಿಗೆ ಪರಿಚಯಿ ಸುವ ಕೆಲಸ ಆಗಬೇಕು ಎಂದು ಜಿ.ಪಂ. ಸಿಇಒ ಡಾ|ನವೀನ್‌ ಭಟ್‌ ಹೇಳಿದರು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಆ್ಯಕ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಅತಿಥಿಗಳಾಗಿದ್ದರು. ಪ್ರವಾಸೋ ದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫ‌ರ್ಡ್‌ ಲೋಬೋ ಜೆ. ಸ್ವಾಗತಿಸಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ|ರೋಶನ್‌ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ, ಪೌರಾಯುಕ್ತ ಡಾ|ಉದಯಕುಮಾರ ಶೆಟ್ಟಿ ವಂದಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಸಕಾಲ
ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕೆ. ರಘುಪತಿ ಭಟ್‌ ಅವರು ನದಿ, ಹಿನ್ನೀರು, ಕಡಲು ಇತ್ಯಾದಿ ಪ್ರದೇಶಗಳನ್ನು ಮೀನುಗಾರಿಕೆಗೆ ಮಾತ್ರ ಉಪಯೋಗಿಸಿಕೊಳ್ಳುತ್ತಿದ್ದೇವೆ. ನಮ್ಮ ಜಿಲ್ಲೆ ಟೂರಿಸಂಗೆ ಸೂಕ್ತವಾಗಿದೆ. ಈಗ ಕೊರೊನಾ ಮುಕ್ತವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿರುವುದರಿಂದ ಸಚಿವರಾಗಿದ್ದಾಗ ಸೂಚಿಸಿದ ಪ್ರವಾಸೋದ್ಯಮ ಯೋಜನೆ ಗಳಿಗೆ ಕಾಯಕಲ್ಪ ನೀಡಬೇಕು. ಪ್ರವಾಸೋದ್ಯಮ ಕಾರ್ಯಪಡೆಯ ಸಭೆ ಕರೆದು ಪ್ರಸ್ತಾವನೆಗಳನ್ನು ಸರಕಾರಕ್ಕೆ ಕಳುಹಿಸಿ ಪ್ರವಾಸಿ ಆಕರ್ಷಿತ ಜಿಲ್ಲೆಯಾಗಿ ಮಾರ್ಪಡಿಸಬೇಕು ಎಂದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.