ಖ್ಯಾತ ಸಾಹಿತಿ ಬಿ.ಎ. ಸನದಿ ವಿಧಿವಶ


Team Udayavani, Apr 1, 2019, 6:00 AM IST

ba-sanadi

ಕುಮಟಾ: “ಮಾನವ್ಯ ಕವಿ’ ಎಂದೇ ಖ್ಯಾತರಾಗಿದ್ದ ನಾಡಿನ ಹಿರಿಯ ಸಾಹಿತಿ, ಕವಿ ಡಾ| ಬಿ.ಎ.ಸನದಿ (86) ಅವರು ಹೆರವಟ್ಟಾದ ಸ್ವಗೃಹದಲ್ಲಿ ಭಾನುವಾರ ನಸುಕಿನ ಜಾವ ನಾಲ್ಕು ಗಂಟೆಗೆ ನಿಧನ ಹೊಂದಿದರು.

ಬೆಳಗಾವಿ ಜಿಲ್ಲೆ ಸಿಂಧೊಳ್ಳಿ ಗ್ರಾಮದಲ್ಲಿ 1933ರ ಆಗಸ್ಟ್‌ 18ರಂದು
ಜನಿಸಿದ್ದ ಅವರು, ಪತ್ನಿ, ಪುತ್ರ-ಪುತ್ರಿಯನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಬಾಬಾ ಸಾಹೇಬ ಅಹಮದ್‌ ಸಾಹೇಬ ಸನದಿ
ಅವರು ಒಳ್ಳೆಯ ವಾಗ್ಮಿ, ಅನುವಾದಕಾರ, ಮಕ್ಕಳ ಸಾಹಿತ್ಯದಲ್ಲಿ ನಿಷ್ಣಾತರಾಗಿದ್ದರು. ನಾಟಕ ರಚನಾಕಾರ ಹಾಗೂ ನಿರ್ದೇಶಕರಾಗಿಯೂ
ಗುರುತಿಸಿಕೊಂಡಿದ್ದರು. ಮುಂಬೈ ಆಕಾಶವಾಣಿ ಹಿರಿಯ ಅ ಧಿಕಾರಿ ಯಾಗಿದ್ದಾಗ ನಾಟಕಗಳು, ಉಪನ್ಯಾಸಗಳು, ಸರಸ-ಸಂಭಾಷಣೆಗಳು,
ಯಕ್ಷಗಾನಗಳ ಪ್ರಸಾರದ ಜತೆಗೆ ಕರ್ನಾಟಕದಿಂದ ಮುಂಬೈಗೆ ಆಗಮಿಸುತ್ತಿದ್ದ ಸುಪ್ರಸಿದಟಛಿ ಕವಿಗಳ ಜತೆ ಕನ್ನಡ ಸಂವಾದ- ಸಂದರ್ಶ ನಗಳನ್ನು ಆಯೋಜಿಸುತ್ತಿದ್ದರು. ನಿವೃತ್ತಿ ನಂತರ ಉತ್ತರ ಕನ್ನಡ
ಜಿಲ್ಲೆಯ ಕುಮಟಾಕ್ಕೆ ಬಂದು ನೆಲೆಸಿದ್ದರು.

ಸಾಹಿತ್ಯ ಸೇವೆ: 1949ರಲ್ಲಿ ಸನದಿಯವರ ಪ್ರಥಮ ಕವನ “ಜಯ ಕರ್ನಾಟಕ’ವು “ನವಯುಗ’ ಪತ್ರಿಕೆಯಲ್ಲಿ ಪ್ರಕಟವಾಯಿತು. ಅವರು 16
ವರ್ಷದವರಿದ್ದಾಗ ರಚಿಸಿದ “ಪತಿವ್ರತಾ ಪ್ರಭಾವ’ ನಾಟಕವನ್ನು ಅವರ ಹುಟ್ಟೂರು ಸಿಂಧೊಳ್ಳಿಯಲ್ಲಿ ಪ್ರದರ್ಶಿಸಲಾಯಿತು. 1952ರಲ್ಲಿ ಸನದಿಯವರು ಲಿಂಗರಾಜ ಕಾಲೇಜಿನಲ್ಲಿ ಕಲಿಯುತ್ತಿರುವಾಗ
ಬರಹಗಾರರ ಬಳಗದ ಕಾರ್ಯದರ್ಶಿ ಹಾಗೂ ಬೆಳಗಾವಿ ಯುವ ಕಲಾ ಕಲಾವೃಂದದ ಕಾರ್ಯದರ್ಶಿ ಮತ್ತು ಶೋಭಾ ಗ್ರಂಥಮಾಲೆ ಸಂಚಾಲಕರಾಗಿದ್ದರು. 1955ರಲ್ಲಿ ಶಮನೇವಾಡಿಯಲ್ಲಿ ಸ್ಥಳೀಯ ಐವರು ಕವಿಗಳನ್ನು ಸೇರಿಸಿಕೊಂಡು ಸ್ನೇಹ ಪ್ರಕಾಶನವನ್ನು ಪ್ರಾರಂಭಿಸಿ,
“ಐದಳ ಮಲ್ಲಿಗೆ’ಯನ್ನು ಪ್ರಕಟಿಸಿದರು. ಮುಂದೆ ಅದೇ ಪ್ರಕಾಶನದಿಂದ ಅನೇಕ ಪುಸ್ತಕಗಳನ್ನು ಪ್ರಕಟಿಸಿದರು. ಅಲ್ಲದೆ, ಗಡಿಭಾಗದಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಸಾರ ಕಾರ್ಯ ಮಾಡಿದರು.

ಪುರಸ್ಕಾರಗಳು: 1962ರಲ್ಲಿ ತಾಜ್‌ಮಹಲ್‌ ಕವನ ಸಂಗ್ರಹಕ್ಕೆ ರಾಜ್ಯ ಸರಕಾರದ ಪ್ರಶಸ್ತಿ, 1967ರಲ್ಲಿ ಪ್ರತಿಬಿಂಬ ಕವನ ಸಂಗ್ರಹಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1969ರಲ್ಲಿ ಧ್ರುವಬಿಂದು ಕವನ ಸಂಗ್ರಹಕ್ಕೆ ಕೇಂದ್ರ ಸರಕಾರದ ಪ್ರಶಸ್ತಿ, 1984ರಲ್ಲಿ ಇಲ್ಲಿ ಸಲ್ಲುವರು (ವಚನ ವಿಮರ್ಶೆ)ಗೆ ಕಾವ್ಯಾನಂದ ಪುರಸ್ಕಾರ ಹಾಗೂ ಇಳಕಲ್ಲದ ಚಿತ್ತರಗಿ ಸಂಸ್ಥಾನ ಮಠದ ವೀರಶೈವ ಸಾಹಿತ್ಯ ಪ್ರಶಸ್ತಿ, 1992ರಲ್ಲಿ ಸಮಗ್ರ
ಸಾಹಿತ್ಯಕ್ಕೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಸಾಪ ಸನ್ಮಾನ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, 1991ರಲ್ಲಿ ದೆಹಲಿ ಕನ್ನಡಿಗ ಪರವಾಗಿ ಶ್ರೇಷ್ಠ ಹೊರನಾಡ ಕನ್ನಡಿಗ ಪ್ರಶಸ್ತಿಗೆ ಪಾತ್ರರಾಗಿದ್ದರು.

ಡಾ| ಗೌರೀಶ ಕಾಯ್ಕಿಣಿಯವರಿಂದ “ಮಾನವ್ಯ ಕವಿ’ ಎಂದೂ ಬಿರುದಾಂಕಿತರಾಗಿದ್ದರು. ಮುಂಬೈಯ ಶ್ರೀ ನಾರಾಯಣ ಗುರು ಪ್ರಶಸ್ತಿ, ಗೊರೂರು ಪ್ರತಿಷ್ಠಾನ ಸಾಹಿತ್ಯ ಪ್ರಶಸ್ತಿ. ಭೂಸನೂರ ಮಠ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್‌,
ಸಿರಿಗನ್ನಡ ಗೌರವ ಪ್ರಶಸ್ತಿ. ಸಾಧನ ಶಿಖರ ಪ್ರಶಸ್ತಿ, 2015ನೇ ಸಾಲಿನ ಪಂಪ ಪ್ರಶಸ್ತಿ…ಹೀಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳು ಇವರಿಗೆ ಸಂದಿವೆ.

ಸನದಿ ನಿಧನಕ್ಕೆ ಕಂಬನಿ: ಹಿರಿಯ ಸಾಹಿತಿ ಡಾ.ಬಿ.ಎ.ಸನದಿ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಕಂಬನಿ ಮಿಡಿದಿದೆ. ಡಾ.ಬಿ.ಎ.ಸನದಿ ಅವರು
ಅನುವಾದಕರಾಗಿ ಮತ್ತು ನಾಟಕ ರಚನಕಾರರಾಗಿಕನ್ನ ಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕಸಾಪ ಅಧ್ಯಕ್ಷ ಮನು ಬಳಿಗಾರ್‌
ತಿಳಿಸಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.