School: ಯಡಮೊಗೆ ಶಾಲೆಗೆ ಬೀಗ ಹಾಕದೆ ಹೋದ ಮುಖ್ಯ ಶಿಕ್ಷಕ!
Team Udayavani, Nov 1, 2023, 1:45 AM IST
ಸಿದ್ದಾಪುರ: ಬೈಂದೂರು ವಲಯದ ಯಡಮೊಗೆ ಗ್ರಾಮದ ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಗಳವಾರ ಸಂಜೆ ಶಾಲೆ ಮುಗಿಸಿ ಸಂಜೆ ಮನೆಗೆ ಹೋಗುವಾಗ ಬೀಗ ಹಾಕದೇ ಬಾಗಿಲು ತೆರೆದಿಟ್ಟು ಮನೆಗೆ ಹೋದ ಘಟನೆ ಮಂಗಳವಾರ ನಡೆದಿದೆ.
ಸ್ಥಳೀಯರು ಕೊಠಡಿಗೆ ಬೀಗ ಹಾಕದಿದ್ದನ್ನು ಗಮನಿಸಿ, ಫೋಟೋ ತೆಗೆದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಿದರು. ಸಾಮಾಜಿಕ ಜಾಲ ತಾಣದಲ್ಲಿಯೂ ಹರಿಯ ಬಿಟ್ಟರು.
ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲ. ಒಬ್ಬರು ಅತಿಥಿ ಶಿಕ್ಷಕರು ಮತ್ತು ಶಂಕರ ನಾಯ್ಕ ಅವರು ಪ್ರಭಾರ ಮುಖ್ಯ ಶಿಕ್ಷಕರಾಗಿದ್ದಾರೆ. ಪ್ರಭಾರ ಮುಖ್ಯ ಶಿಕ್ಷಕ ಶಂಕರ ನಾಯ್ಕ ಅವರು ಮೊದಲಿನಿಂದಲೂ ಅಜ್ಜಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸರಿಯಾಗಿ ಬರುತ್ತಿಲ್ಲ ಎನ್ನು ಆರೋಪ ಇದೆ. ಇದರ ಬಗ್ಗೆ ಯಡಮೊಗೆ ಗ್ರಾಮ ಸಭೆಯಲ್ಲಿ ಚರ್ಚೆ ಕೂಡ ನಡೆದಿತ್ತು. ಬೇಜವಾಬ್ದಾರಿ ತೋರಿದ ಪ್ರಭಾರ ಮುಖ್ಯ ಶಿಕ್ಷಕ ಶಂಕರ ನಾಯ್ಕ ಅವರನ್ನು ಕೆಲಸದಿಂದ ವಜಾಗೊಳಿಸಬೇಕು. ಇತಂಹವರಿಂದ ಸರಕಾರಿ ಶಾಲೆಯ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಆ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲ. ಒಬ್ಬರು ಅತಿಥಿ ಶಿಕ್ಷಕರು ಇರುವುದು. ಶಂಕರ ನಾಯ್ಕ ಈ ಪ್ರಭಾರ ಮುಖ್ಯ ಶಿಕ್ಷಕರು ಆಗಿದ್ದಾರೆ. ನಿರ್ಲಕ್ಷ್ಯ ತೋರಿದ್ದರಿಂದ ಪ್ರಭಾರ ಮುಖ್ಯ ಶಿಕ್ಷಕ ಶಂಕರ್ ನಾಯ್ಕ ಅವರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಬೈಂದೂರು ಬಿಇಒ ನಾಗೇಶ್ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ