ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ
Team Udayavani, Jan 23, 2022, 11:08 PM IST
ಕುಂದಾಪುರ:
ಯಕ್ಷಗಾನದ ಪ್ರಸಿದ್ಧ ಹಿರಿಯ ಸ್ತ್ರೀ ವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್(96)ಅವರು ಜ. 23ರಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಹಿರಿಯ ಕಲಾವಿದ ಮಾರ್ಗೋಳಿಯವರ ಅಗಲುವಿಕೆಗೆ ಯಕ್ಷಗಾನ ಕಲಾರಂಗ ಗಾಢ ಸಂತಾಪ ವ್ಯಕ್ತಪಡಿಸಿದೆ.
ಕುಂದಾಪುರದಿಂದ ಬಸ್ರೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಬರುವ ಮಾರ್ಗೋಳಿ ಎನ್ನುವ ಪುಟ್ಟ ಗ್ರಾಮದ ನರಸಿಂಹ ಶೇರಿಗಾರ ಹಾಗೂ ಸುಬ್ಬಮ್ಮ ದಂಪತಿಗಳ ಪುತ್ರನಾಗಿ ಜನಿಸಿದ್ದ ಅವರು ಯಕ್ಷಗಾನ ಕಲೆಯ ಮೇಲಿರುವ ಅಪರಿಮಿತ ಆಸಕ್ತಿಯಿಂದಾಗಿ 13 ನೇ ವಯಸ್ಸಿನಲ್ಲಿಯೇ ಬಡಗುತಿಟ್ಟಿ ಹೆಸರಾಂತ ಮೇಳಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಮಂದಾರ್ತಿ ಮೇಳವನ್ನು ಸೇರಿದ್ದರು. ಪಾರಂಪರಿಕ ಯಕ್ಷಗಾನ ಗುರುಗಳಾದ ವೀರಭಧ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಾಮತ್ ಮುಂತಾದ ಹಿರಿಯ ಕಲಾವಿದರ ಗರಡಿಯಲ್ಲಿ ಯಕ್ಷಗಾನದ ಸಾಂಪ್ರದಾಯಿಕ ಹೆಜ್ಜೆಯ ಕರಗತ ಮಾಡಿಕೊಂಡ ಅವರು ಅತ್ಯಲ್ಪ ಕಾಲದಲ್ಲಿಯೇ ಬಡಗುತಿಟ್ಟಿನ ಪ್ರಮುಖ ಸ್ತ್ರೀ ವೇಷಧಾರಿಯಾಗಿ ಗುರುತಿಸಿಕೊಂಡಿದ್ದರು.
ಯಕ್ಷರಂಗ ಸೇವೆಯ ಬಹು ಪಾಲು ಅಂದರೆ ಅಂದಾಜು 38 ವರ್ಷಗಳ ಕಾಲ ಸ್ತ್ರೀ ವೇಷಧಾರಿಯಾಗಿ ರಂಗ ಮೇಲೆ ಅಭಿನಯ ಶಾರದೆಯಾಗಿ ಮೆರೆದಿದ್ದ ಅವರು ಬಡಗುತಿಟ್ಟಿನ ಪ್ರಸಿದ್ದ ಮೇಳಗಳಾದ ಶ್ರೀ ಕ್ಷೇತ್ರ ಮಂದಾರ್ತಿ, ಶ್ರೀ ಕ್ಷೇತ್ರ ಮಾರಣಕಟ್ಟೆ, ಶ್ರೀ ಕ್ಷೇತ್ರ ಸೌಕೂರು, ಶ್ರೀ ಕ್ಷೇತ್ರ ಅಮೃತೇಶ್ವರಿ. ಶ್ರೀ ಕ್ಷೇತ್ರ ಇಡಗುಂಜಿ, ಶ್ರೀ ಕ್ಷೇತ್ರ ಕಮಲಶಿಲೆ ಮೇಳಗಳಲ್ಲಿ ಹಾಗೂ ವೃತ್ತಿ ಮೇಳಗಳಾದ ಪೆರ್ಡೂರು ಹಾಗೂ ಸಾಲಿಗ್ರಾಮ ಮೇಳಗಳಲ್ಲಿ ಬಣ್ಣದ ಸೇವೆಯನ್ನು ಮಾಡುವ ಮೂಲಕ ಸುಮಾರು 5 ದಶಕಗಳ ಕಾಲ ಯಕ್ಷಾಭಿಮಾನಿಗಳ ಹೃದಯ ಸಿಂಹಾಸನದ ಅನಭಿಷಿಕ್ತ ರಾಣಿಯಾಗಿದ್ದರು.
ಬಡಗುತಿಟ್ಟಿನ ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ದವಾದ ಹಾಗೂ ಭಕ್ತಿಪೂರ್ಣವಾದ ಪ್ರಸಂಗ ಶ್ರೀ ದೇವಿ ಮಾಹಾತ್ಮೆ ಪ್ರಸಂಗದ ಬಡಗುತಿಟ್ಟಿನ ಮೊದಲ ಪ್ರಯೋಗ ನಡೆದದ್ದು, ಶ್ರೀ ಕ್ಷೇತ್ರ ಮಂದಾರ್ತಿಯಲ್ಲಿ,. ಮೊದಲ ಪ್ರದರ್ಶನದಲ್ಲಿ ಶ್ರೀ ದೇವಿಯಾಗಿ ಬಣ್ಣ ಹಚ್ಚಿದ್ದು ಮಾರ್ಗೋಳಿಯವರು ಎಂಬ ದಾಖಲೆಯಿದೆ.
ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು ಬಡಗಿನಲ್ಲಿ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದರು. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ಅನುಭವದ ಆಗಾರವಾಗಿದ್ದರು ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ ಮಾಡಿದ್ದ ಆರು ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರ ತೆಂಕುಟ್ಟಿನಲ್ಲಿ ಪ್ರಸಿದ್ಧವಾದ ‘ದೇವಿ ಮಹಾತ್ಮೆ’ ಪ್ರಸಂಗದ ‘ಶ್ರೀದೇವಿ’ ಪಾತ್ರಕ್ಕೆ ಬಡಗಿನ ರಂಗದಲ್ಲಿ ಜೀವತುಂಬಿ, ಅದಕ್ಕೆ ಪ್ರತ್ಯೇಕವಾದ ಎತ್ತರದ ಸ್ಥಾನ ರೂಪಿಸಿದ ಕೀರ್ತಿ ಪಡೆದಿದ್ದರು. ಅವರ ಸಾಧನೆಗೆ, ಕಾಲ ಸೇವೆಗೆ ನೂರಾರು ಸನ್ಮಾನಗಳು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ