ರೈತರನ್ನು ಒಕ್ಕಲೆಬ್ಬಿಸದಂತೆ ಯಡಿಯೂರಪ್ಪ ಸೂಚನೆ
Team Udayavani, Oct 31, 2019, 9:53 PM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸೇಶ್ವರ ಇನಾಮ್ ಭೂಮಿ, ಸಾರಗೋಡು, ಹಾಗೂ ಮಸಗಲಿ ಮೀಸಲು ಅರಣ್ಯ ಒತ್ತುವರಿಗೆ ಸಂಬಂಧಪಟ್ಟಂತೆ ರೈತರನ್ನು ಒಕ್ಕಲೆಬ್ಬಿಸದೆ ಕೃಷಿ ಚಟುವಟಿಕೆಗೆ ಅವಕಾಶ ಕಲ್ಪಿಸಬೇಕು. ಈ ಸಂಬಂಧ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಇನಾಮ್ ಭೂಮಿ, ಮೀಸಲು ಅರಣ್ಯ ಒತ್ತುವರಿ ತೆರವಿಗೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಇದಕ್ಕೂ ಮೊದಲು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದೆ ಶೋಭಾ ಕರಂದ್ಲಾಜೆ, ಕೇರಳ ಮಾದರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ ಕೋರ್ಟ್ನಲ್ಲಿ ಪ್ರಮಾಣ ಪತ್ರ ಸಲ್ಲಿಸಿ ರೈತರ ಭೂಮಿ ಉಳಿಸಿಕೊಳ್ಳಬಹುದು. ಒಂದೊಮ್ಮೆ ಸುಪ್ರೀಂ ಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸದೇ ಹೋದರೆ ಊರಿಗೆ ಊರನ್ನೇ ಸ್ಥಳಾಂತರಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಊರುಗಳ ಸ್ಥಳಾಂತರವೇ ಸವಾಲು. ಜತೆಗೆ ಪರ್ಯಾಯ ಭೂಮಿ ಹುಡುಕುವುದು ಅದಕ್ಕಿಂತಲೂ ಕಷ್ಟಕರವಾಗಲಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅರಣ್ಯ ಭೂಮಿ ಎಂಬ ಕಾರಣಕ್ಕೆ ರೈತರನ್ನು ಒಕ್ಕಲೆಬ್ಬಿಸುತ್ತಿ¤ದ್ದಾರೆ. ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ರೈತರ ಹಿತ ಕಾಪಾಡಬೇಕು. ಇಂದು ಅರಣ್ಯ ಉಳಿದಿದೆ ಎಂದರೆ ಅದಕ್ಕೆ ಕಾರಣ ರೈತರು. ಯಾವ ರೈತರನ್ನೂ ಒಕ್ಕಲೆಬ್ಬಿಸಬಾರದು. ಅವರು ಕೃಷಿ ಚಟುವಟಿಕೆ ನಡೆಸಲು ಅವಕಾಶ ನೀಡಬೇಕು. ನ್ಯಾಯಾಲಯಕ್ಕೆ ಈ ಬಗ್ಗೆ ಕೂಡಲೇ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿದ್ದ ಕೆಲ ಶಾಸಕರು, ಈಗಾಗಲೇ ರೈತರ ವಿರುದ್ಧ ದೂರುಗಳನ್ನು ದಾಖಲಿಸಲಾಗಿದೆ. ಅವರು ವಿಚಾರಣೆಗೆಂದು ಬೆಂಗಳೂರಿಗೆ ಓಡಾಡುವಂತಾಗಿದ್ದು, ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.
ದೂರು ದಾಖಲಿಸದಿರಲು ತಾಕೀತು
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ರೈತರ ವಿರುದ್ಧ ದೂರು ದಾಖಲಿಸಬಾರದು. ರೈತರ ಹಿತದೃಷ್ಟಿಯಿಂದ ಅವರ ಜಮೀನಿಗೆ ಸಂಬಂಧಪಟ್ಟಂತೆ ತೊಂದರೆ ನೀಡಬಾರದು. ಸುಪ್ರೀಂ ಕೋರ್ಟ್ಗೆ ಸರ್ಕಾರದಿಂದಲೇ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಡಿಕೆ ಗುಟ್ಕಾ ಅಲ್ಲ, ಅಡಿಕೆಯಿಂದ ಆರೋಗ್ಯಕ್ಕೆ ಹಾನಿಯೂ ಇಲ್ಲ. ಹಾಗಾಗಿ ಅಡಿಕೆಯನ್ನು ನಿಷೇಧಿಸಬಾರದು ಎಂದು ಪ್ರಧಾನಿಯವರಿಗೆ ಮನವಿ ಮಾಡಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಸರ್ಕಾರ ಈ ವಿಷಯವಾಗಿ ನ್ಯಾಯಾಲಯಕ್ಕೆ ಹೋಗಿತ್ತು. ಇದರ ಸಾಧಕ- ಬಾಧಕದ ಬಗ್ಗೆ ಚರ್ಚೆಯಾಗಿದೆ. ನ್ಯಾಯಾಲಯದಲ್ಲಿ ಹೋರಾಟ ನಡೆಸಲು ವಕೀಲರನ್ನು ನೇಮಿಸಲಾಗುವುದು. ಶಾಸಕ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಅಡಿಕೆ ಬಗ್ಗೆಯೂ ಒಂದು ಸಂಶೋಧನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ