ಯಡಿಯೂರಪ್ಪ ಜೈಲಿಗೆ ಹೋಗಿದ್ದು ಅವರ ಪುತ್ರ ವಿಜಯೇಂದ್ರನಿಂದ : ಎಚ್. ವಿಶ್ವನಾಥ್
Team Udayavani, Jul 5, 2021, 7:23 PM IST
ಬೆಂಗಳೂರು : ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೇ ಅವರ ಪುತ್ರ ವಿಜಯೇಂದ್ರ. ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದ್ದ. ಈಗ ಇಡೀ ಕುಟುಂಬವನ್ನು ಜೈಲಿಗೆ ಕಳುಹಿಸುತ್ತಾನೆ ಎಂದು ವಿಜಯೇಂದ್ರ ವಿರುದ್ದ ವಿಶ್ವನಾಥ್ ಗುಡುಗಿದ್ದಾರೆ.
ವಿಜಯೇಂದ್ರನ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಹಿಂದುಳಿದ ನಾಯರನ್ನು ತುಳಿಯುವ ಕೆಲಸ ಆಗುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದು ವಿಜಯೇಂದ್ರ ಎಂದರು.
ರಮೇಶ್ ಜಾರಕಿಹೋಳಿ ಶ್ರೀರಾಮುಲು ಅವರನ್ನು ಮುಗಿಸಲು ಹೊರಟಿರುವುದು ವಿಜಯೇಂದ್ರ. ಜಾರಕಿಹೋಳಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರ ಇದೆ. ಎಷ್ಟು ದಿನ ನಿಮ್ಮದು ನಡೆಯುತ್ತೇ ನಾವು ನಡೆಯುತ್ತೇವೆ. ಇದು ರಾಜಕಾರಣದಲ್ಲಿ ಸರಿಯಲ್ಲ ಎಂದು ವಿಜಯೇಂದ್ರ ವಿರುದ್ಧ ವಿಶ್ವನಾಥ್ ಕಿಡಿಕಾರಿದ್ದಾರೆ