ಯೆಮನ್ ಸೋಂಕಿಗೆ ಮೊದಲ ಬಲಿ
Team Udayavani, May 1, 2020, 3:14 PM IST
ಯೆಮೆನ್: ಯೆಮೆನ್ ದೇಶದಲ್ಲಿ ಕೋವಿಡ್-19ನಿಂದ ಇಬ್ಬರು ಮೃತಪಟ್ಟಿದ್ದು, ಮೊದಲ ಸಾವಿನ ಪ್ರಕರಣ ದಾಖಲಾಗಿದೆ. ಜತೆಗೆ ಕೆಲವು ಕ್ಲಸ್ಟರ್ ಪ್ರದೇಶಗಳಲ್ಲಿ ಸೋಂಕು ಹರಡುತ್ತಿದೆ ಎಂಬ ಕಳವಳ ವ್ಯಕ್ತವಾಗುತ್ತಿದ್ದು, ಈ ಬಿಕ್ಕಟ್ಟನ್ನು ಎದುರಿಸಲು ದೇಶ ವಿಫಲವಾಗುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ.
ಯೆಮೆನ್ನಿಂದ ಸುಮಾರು 540 ಕಿ.ಮೀ ದೂರದ ಅಲ್-ಶಿಹರ್ಪಟ್ಟಣದ ಬಂದರು ಕೆಲಸಗಾರನಲ್ಲಿ ಮೊದಲು ಸೋಂಕು ಪತ್ತೆಯಾಗಿದ್ದು, ಆ ವ್ಯಕ್ತಿ ಚೇತರಿಕೆ ಕಂಡಿದ್ದಾನೆ. ಆದರೆ ಈಗ ಇಬ್ಬರು ಮೃತಪಟ್ಟಿದ್ದಾರೆ.
ಲಾಕ್ಡೌನ್ ತೆರವುಗೊಳಿಸುವಂತೆ ಪ್ರತಿಭಟನೆ
ಪ್ರತ್ಯೇಕತಾವಾದಿ ಆಡಳಿತವನ್ನು ನಡೆಸುತ್ತಿರುವ ಇಲ್ಲಿನ ಸ್ಥಳೀಯ ನಗರ ಅಡೆನ್ನಲ್ಲಿ ಬುಧವಾರ ಐದು ಹೊಸ ಪ್ರಕರಣಗಳು ದೃಢಪಟ್ಟಿದ್ದು, ಮತ್ತೇ 2 ವಾರ ಲಾಕ್ಡೌನ್ ವಿಧಿಸಲಾಗಿತ್ತು. ಆದರೆ ಈ ನಡುವೆಯೂ ಇಲ್ಲಿನ ಸ್ಥಳೀಯರು ಕಳೆದ ವಾರ ಲಾಕ್ಡೌನ್ ತೆರವುಗೊಳಿಸುವಂತೆ ಪ್ರತಿಭಟನೆ ನಡೆಸಿದ್ದರು.
ಐದು ವರ್ಷದ ಹಿಂದೆ ನಡೆದ ಯುದ್ಧದ ವೇಳೆ ಇಲ್ಲಿನ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದ್ದು, ಪ್ರಸ್ತುತ ಎದುರಾಗಿರುವ ಸೋಂಕು ಬಿಕ್ಕಟ್ಟನ್ನು ಎದುರಿಸಲು ಕನಿಷ್ಠ ಮಟ್ಟದ ಸವಲತ್ತೂ¤ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ಪರೀಕ್ಷಾ ಮಾದರಿಯನ್ನು ಅನುಸರಿಸುವಲ್ಲಿ ದೇಶ ವಿಫಲಗೊಂಡಿದೆ.
ಕೆಲ ವೈದ್ಯರು ಮತ್ತು ಕೆಲವು ವೈದ್ಯಕೀಯ ನೆರವು ಸಂಸ್ಥೆಗಳು ಯೆಮನ್ನಲ್ಲಿ ಸೋಂಕು ವ್ಯಾಪಕವಾಗಿ ಹರಡಲಿದೆ ಎಂದು ಎಚ್ಚರಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯು ಯೆಮೆನ್ನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಶೇ. 93ರಷ್ಟು ಜನರು ಸೋಂಕಿಗೆ ಒಳಗಾಗಬಹುದು ಎಂದು ಎಚ್ಚರಿಸಿದೆ.
ಈಗಾಗಲೇ ಯೆಮೆನ್ ದೇಶ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಲಕ್ಷಾಂತರ ಮಂದಿ ಆಹಾರವಿಲ್ಲದೇ ಕಂಗಾಲಾಗಿದ್ದಾರೆ ಇದರೊಂದಿಗೆ ಆರೋಗ್ಯ ವ್ಯವಸ್ಥೆ ಸರಿ ಇಲ್ಲದ ಯೆಮನ್ನಲ್ಲಿ ಸೋಂಕು ತೀವ್ರಗೊಂಡರೆ ಮಹಾ ದುರಂತವೇ ಘಟಿಸುತ್ತದೆ ಎನ್ನುತ್ತಾರೆ ವಿಶ್ವಸಂಸ್ಥೆಯ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್