ರಾಜ್ಯದೆಲ್ಲೆಡೆ ಯೋಗ ದಿನಾಚರಣೆ ಸಂಭ್ರಮ
Team Udayavani, Jun 22, 2019, 3:08 AM IST
ಬೆಂಗಳೂರು: ಒಂದೆಡೆ ಸೂರ್ಯೋದಯ, ಇನ್ನೊಂದೆಡೆ ಜಾತಿ, ಧರ್ಮ, ವಯಸ್ಸಿನ ಭೇದವಿಲ್ಲದೆ ಆ ಸೂರ್ಯನಿಗೆ ನಮಸ್ಕರಿಸಿದ ಸಾವಿರಾರು ಮಂದಿ. ಬಳಿಕ ಯೋಗದ ವಿವಿಧ ಆಸನಗಳು, ಪ್ರಾಣಾಯಾಮ, ಧ್ಯಾನ… ಇದು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶುಕ್ರವಾರ ಮುಂಜಾನೆ ರಾಜ್ಯದೆಲ್ಲೆಡೆ ನಡೆದ ಸಾಮೂಹಿಕ ಯೋಗದ ವೇಳೆ ಕಂಡು ಬಂದ ದೃಶ್ಯಗಳು.
ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಇಲಾಖೆ, ರಾಜ್ಯ ಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ಆಯೋಜಿಸಿತ್ತು. ಇಲ್ಲಿ ಬೆಂಗಳೂರಿನ ವಿವಿಧ ಯೋಗ ಸಂಸ್ಥೆಗಳ 10 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
“ಹೃದಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಯೋಗದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್.ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ರಹೀಂಖಾನ್ ಹಾಗೂ ಇತರರು ಪಾಲ್ಗೊಂಡಿದ್ದರು. ಜಗತ್ತಿನ ಹಿರಿಯ ವ್ಯಕ್ತಿ ಮತ್ತು ಯೋಗ ಸಾಧಕರಾದ 123 ವರ್ಷದ ಸ್ವಾಮಿ ಶಿವಾನಂದ ಅವರು ಪ್ರದರ್ಶನದ ಕೇಂದ್ರ ಬಿಂದುವಾಗಿದ್ದರು. ಅರ್ಜಂಟೀನಾದ ಏಕಾರಾ ದೇವಿನಾಥ ಕೂಡ ಪಾಲ್ಗೊಂಡಿದ್ದರು.
ಇದೇ ವೇಳೆ, ಉತ್ತಮ ಆರೋಗ್ಯಕ್ಕಾಗಿ 642211 ಆರೋಗ್ಯ ಸೂತ್ರ ಬಿಡುಗಡೆ ಮಾಡಲಾಯಿತು. ಇದರ ವಿಸ್ತೃತರೂಪ, “ಮನುಷ್ಯ ನಿತ್ಯ 6 ಗಂಟೆ ನಿದ್ರೆ, 4 ಲೀ. ನೀರು, ದಿನಕ್ಕೆ 2 ಸಲ ಆಹಾರ ಸೇವನೆ, 2 ಸಲ ಪ್ರಾರ್ಥನೆ, ಒಂದು ಗಂಟೆ ಯೋಗಾಭ್ಯಾಸ, ವಾರಕ್ಕೆ ಒಂದು ದಿನ ಉಪವಾಸ ಮಾಡಬೇಕು ಎಂಬುದಾಗಿದೆ’.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ