ಹೊಸ ದಿಕ್ಕಿನಲ್ಲಿ ಯೋಗಿ

ಲಂಕೆಯಿಂದ ಕಂಸನವರೆಗೂ...

Team Udayavani, Jun 14, 2020, 4:16 AM IST

jogi-kamsa

ನಟ ಯೋಗಿ ಅಭಿನಯದ ಒಂದೆರೆಡು ಸಿನಿಮಾಗಳು ಈಗ ಬಿಡುಗಡೆಗೆ ಸಜ್ಜಾಗಿವೆ. ಆ ಸಾಲಿಗೆ ಈಗ ದಯಾಳ್‌ ಪದ್ಮನಾಭ್‌ ನಿರ್ದೇಶನದ “ಒಂಬತ್ತನೇ ದಿಕ್ಕು’ ಕೂಡ ಇದೆ. ಇದೀಗ ಸಿನಿಮಾ ಸೆನ್ಸಾರ್‌ಗೆ ರೆಡಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟೊತ್ತಿಗಾಗಲೇ ಬಿಡುಗಡೆಯಾಗಬೇಕಿತ್ತು. ಎಲ್ಲವೂ ಮುಗಿಸಿದ್ದ ಚಿತ್ರ, ಸೆನ್ಸಾರ್‌ ಬಾಕಿ ಉಳಿಸಿಕೊಂಡಿತ್ತು. ಮಾರ್ಚ್‌ ಅಥವಾ ಏಪ್ರಿಲ್‌ನಲ್ಲೇ ರಿಲೀಸ್‌ಗೆ ತಯಾರು ಮಾಡಿಕೊಂಡಿದ್ದ ನಿರ್ದೇಶಕರಿಗೆ ಲಾಕ್‌ಡೌನ್‌ ಎದುರಾಯಿತು. ಹೀಗಾಗಿ ಸಿನಿಮಾ ಬಿಡುಗಡೆ ತಡವಾಗಿದೆ.

ಈಗ ಸೆನ್ಸಾರ್‌ ಬಾಗಿಲು ತೆರೆದಿದ್ದು, ಮುಂದಿನ ವಾರ “ಒಂಬತ್ತನೇ ದಿಕ್ಕು’ ಸೆನ್ಸಾರ್‌ ಆಗುವ ಸಾಧ್ಯತೆ ಇದೆ. ಆ ಬಳಿಕ ಚಿತ್ರಮಂದಿರಗಳ ಆರಂಭ ನೋಡಿಕೊಂಡು ಬಿಡುಗಡೆ ಆಗುವ ಸಾಧ್ಯತೆ ಇದೆ. ಸುಮಾರು 40 ದಿನಗಳ ಕಾಲ ಬೆಂಗಳೂರು, ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣಗೊಂಡಿರುವ ಸಿನಿಮಾದಲ್ಲಿ ಯೋಗಿಗೆ ವಿಶೇಷ ಪಾತ್ರವಿದೆ. ಲಾಕ್‌ಡೌನ್‌ಗೂ ಮೊದಲೇ ಚಿತ್ರ ಪೂರ್ಣಗೊಂಡಿತ್ತು. ಲಾಕ್‌ಡೌನ್‌ ಘೋಷಣೆಯಾದ ಬಳಿಕ ಪೋಸ್ಟ್‌ ಪ್ರೊಡಕ್ಷನ್‌ ಸ್ಥಗಿತಗೊಂಡಿತ್ತು. ಈಗ ಬಿಡುಗಡೆಯ ಉತ್ಸಾಹದಲ್ಲಿ ಚಿತ್ರತಂಡವಿದೆ.

ಇನ್ನು, ಈ ಸಿನಿಮಾ ಬಳಿಕ ಯೋಗಿ ಅಭಿನಯದ ಮತ್ತೂಂದು ಬಿಗ್‌ ಸಿನಿಮಾಗೆ ರೆಡಿಯಾಗುತ್ತಿದ್ದಾರೆ. ಹೌದು, ತಮ್ಮದೇ ಬ್ಯಾನರ್‌ನಲ್ಲಿ “ಕಂಸ’ ಎಂಬ ಚಿತ್ರದಲ್ಲಿ ನಟಿಸುವ ಬಗ್ಗೆ ಈಗಾಗಲೇ ಸುದ್ದಿಯೂ ಆಗಿದೆ. ಆದರೆ, ಆ ಚಿತ್ರ ಸೆಟ್ಟೇರುವ ಮುನ್ನವೇ ಯೋಗಿ ಅವರು, ಮತ್ತೂಂದು ಹೊಸ ಚಿತ್ರದಲ್ಲಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹೌದು, ಯೋಗಿ ಹೊಸ ಚಿತ್ರ ಒಪ್ಪಿದ್ದು, ಆ ಚಿತ್ರವನ್ನು ನಿರ್ಮಾಪಕ ಎನ್‌.ಕುಮಾರ್‌ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನು, ಅನಂತ್‌ರಾಜು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಅದೊಂದು ಪಕ್ಕಾ ದೇಸಿ ಕಥೆ. ಅದರಲ್ಲೂ ಈಗಿನ ಮಾಡರ್ನ್ ಹುಡುಗರ ಲವ್‌ಸ್ಟೋರಿ ಇಲ್ಲಿರಲಿದೆ. ನಾಲ್ವರು ಹುಡುಗರು ಹುಡುಗಿಯೊಬ್ಬಳ ಹಿಂದೆ ಹೋದಾಗ, ಏನೆಲ್ಲಾ ಆಗುತ್ತೆ ಅನ್ನೋದು ಒನ್‌ಲೈನ್‌. ಆ ಹುಡುಗರ ಬದುಕಲ್ಲಿ ಹುಡುಗಿ ಎಂಟ್ರಿ ಕೊಟ್ಟಾಗ, ಹೇಗೆಲ್ಲಾ ಬದಲಾಗುತ್ತಾರೆ ಎಂಬುದನ್ನು, ಹಾಸ್ಯದ ರೂಪದಲ್ಲಿ ಹೇಳುವ ಪ್ರಯತ್ನ ಮಾಡಲಿದ್ದಾರೆ ನಿರ್ದೇಶಕರು.

ಇಲ್ಲಿ ಮಾಸ್‌ ಅಂಶಗಳೂ ಇವೆ, ಹಾಗೆಯೇ ಕ್ಲಾಸ್‌ ಎಲಿಮೆಂಟ್ಸ್‌ ಕೂಡ ಇದೆ’ ಯೋಗೀಶ್‌ ಹುಣಸೂರು ಈ ಕಥೆ ಬರೆದಿದ್ದು, ಆ ಕಥೆಗೆ ನಿರ್ದೇಶಕರು ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಅಂದಹಾಗೆ, ಯೋಗಿ ಈಗ “ಲಂಕೆ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರದ ಚಿತ್ರೀಕರಣ ಮುಗಿದ ಬಳಿಕ ಬೇರೆ ಸಿನಿಮಾದತ್ತ ಮುಖ ಮಾಡಲಿದ್ದಾರೆ. ಯೋಗಿ ಅವರು ತಮ್ಮ “ಎಂವೈ ಫಿಲ್ಮ್ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ “ಕಂಸ’ ಎಂಬ ಚಿತ್ರ ಮಾಡಲಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.