SC: ಬೆಂಕಿಯ ಜತೆಗೆ ಆಟವಾಡುತ್ತಿದ್ದೀರಿ-ಪಂಜಾಬ್,ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತಪರಾಕಿ
Team Udayavani, Nov 10, 2023, 9:25 PM IST
ನವದೆಹಲಿ: ವಿಧಾನಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕಗಳ ಕಡತಗಳಿಗೆ ಬಹುಕಾಲದಿಂದ ಸಹಿ ಹಾಕದೇ ವಿಳಂಬ ಮಾಡುತ್ತಿರುವ ತಮಿಳುನಾಡು, ಪಂಜಾಬ್ ರಾಜ್ಯಪಾಲರನ್ನು ಗುರುವಾರ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ನೀವು ಬೆಂಕಿಯ ಜತೆಗೆ ಆಟವಾಡುತ್ತಿದ್ದೀರಿ. ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಅಂಗೀಕರಿಸಿದ ವಿಧೇಯಕಗಳಿಗೆ ಅಂಕಿತ ಹಾಕಿ. ದೀರ್ಘ ಕಾಲದಿಂದ ವಿಧೇಯಕಗಳಿಗೆ ಅನುಮೋದನೆ ನೀಡದೇ ಇರುವ ಬೆಳವಣಿಗೆ ಗಂಭೀರ ಹಾಗೂ ಕಳವಳಕಾರಿಯಾದದ್ದು’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
“ಪಂಜಾಬ್ನಲ್ಲಿ ಏನಾಗುತ್ತಿದೆ. ಸಂಸದೀಯ ಪ್ರಜಾಸತ್ತೆ ವ್ಯವಸ್ಥೆಯಲ್ಲಿ ಮುಂದುವರಿಯಬೇಕು ಎಂದು ತಿಳಿದುಕೊಂಡಿದ್ದೀರಾ?’ ಎಂದು ನ್ಯಾಯಪೀಠ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ರನ್ನು ತರಾಟೆಗೆ ತೆಗೆದುಕೊಂಡಿದೆ.
ಇನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ “ವಿಧಾನಸಭೆಯಲ್ಲಿ ಅಂಗೀಕಾರಗೊಂಡ 12 ವಿಧೇಯಕಗಳಿಗೆ ಸಹಿ ಹಾಕದೇ ಇರುವ ವಿಚಾರ ಕಳವಳಕಾರಿಯಾದದ್ದು. ಇದರಿಂದಾಗಿ ಜನರ ಅನುಕೂಲಕ್ಕೆ ಬೇಕಾಗುವ ಹಲವು ಕೆಲಸಗಳು ತಡೆಹಿಡಿದಂತೆ ಆಗುತ್ತದೆ’ ಎಂದು ನ್ಯಾಯಪೀಠ ಆಕ್ಷೇಪಿಸಿತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಕೂಡ ನ್ಯಾಯಪೀಠ ನೋಟಿಸ್ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್