ಹುಟ್ಟೂರಿನತ್ತ ಯುವಜನತೆ ಸ್ವಾಗತಾರ್ಹ ಬೆಳವಣಿಗೆ: ಡಾ| ಹೆಗ್ಗಡೆ

ಮೂಡುಬಿದಿರೆಯಲ್ಲಿ ಮುನಿಮಹಾರಾಜ ತ್ರಯರ ಧಾರ್ಮಿಕ ಸಭೆ

Team Udayavani, Jan 16, 2022, 5:00 AM IST

ಹುಟ್ಟೂರಿನತ್ತ ಯುವಜನತೆ ಸ್ವಾಗತಾರ್ಹ ಬೆಳವಣಿಗೆ: ಡಾ| ಹೆಗ್ಗಡೆ

ಮೂಡುಬಿದಿರೆ: ಶಿಕ್ಷಣ, ಉದ್ಯೋಗ ನಿಮಿತ್ತ ದೂರದ ಊರುಗಳಿಗೆ ತೆರಳಿದ್ದ ಯುವ ಜನತೆ ಹುಟ್ಟೂರಿಗೆ ಮರಳಿ ಇಲ್ಲೇ ನೆಲೆ ಕಾಣಲು ಹಂಬಲಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಹೀಗೆ ಬಂದವರು ಧರ್ಮಶ್ರದ್ಧೆಯಿಂದ, ಆರಾಧನ ಕೇಂದ್ರಗಳು, ಮುನಿಗಳು, ಸ್ವಾಮೀಜಿಗಳ ಸೇವೆ ಗೈ ಯುತ್ತ ಧರ್ಮಪ್ರಭಾವನೆಯ ಕಾರ್ಯ ದಲ್ಲಿ ಸಹ
ಕಾರಿ  ಗಳಾಗಿ ಜೀವನ ಸಾರ್ಥಕ್ಯ ಕಂಡುಕೊಳ್ಳ ಬೇಕಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀ ಮಹಾವೀರ ಭವನದಲ್ಲಿ ಶುಕ್ರವಾರ ಸಂಜೆ ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಜೈನಕಾಶಿ ಮೂಡುಬಿದಿರೆಗೆ ಆಗಮಿಸಿರುವ ಪ.ಪೂ. 108 ಅಮೋಘ ಸಾಗರ ಮುನಿಮಹಾರಾಜರು, ಪ.ಪೂ. 108 ಅಮರ ಕೀರ್ತಿ ಮುನಿಮಹಾರಾಜರು ಹಾಗೂ ಪ.ಪೂ. 108 ಪ್ರಸಂಗ ಸಾಗರ ಮುನಿಮಹಾ ರಾಜರ ಉಪಸ್ಥಿತಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಪ.ಪೂ. 108 ಅಮೋಘ ಸಾಗರ ಮುನಿಮಹಾರಾಜರು ಆಶೀರ್ವಚನದಲ್ಲಿ ಸ್ವಾರ್ಥದ ತ್ಯಾಗಕ್ಕಿಂತ ಮಿಗಿಲು ಕಠಿನ ತಪವಿಲ್ಲ; ನಮ್ಮ ವಿಚಾರ, ನಡೆನುಡಿಯಲ್ಲಿ ಪರಿವರ್ತನೆ ಆಗದೇ ಇದ್ದರೆ ಜೀವನಕ್ಕೆ ಅರ್ಥವಿಲ್ಲ ಎಂದರು.
ಭಟ್ಟಾರಕ ಸ್ವಾಮೀಜಿ ಪ್ರಸ್ತಾವನೆಗೈದು, ಡಾ| ಹೆಗ್ಗಡೆಯವರು ಮೂಡುಬಿದಿರೆಯೊಂದಿಗೆ ಆತ್ಮೀಯ ಸಂಬಂಧ ಉಳ್ಳವರು. ಆರಾಧನ ಕೇಂದ್ರ ಗಳಿಗೆ ಕಾಯಕಲ್ಪದಂಥ ಧರ್ಮಕಾರ್ಯಗಳಲ್ಲಿ ನಾವೆಲ್ಲರೂ ಕೈಜೋಡಿಸಬೇಕು ಎಂದರು.

ಇದನ್ನೂ ಓದಿ:ಕಲಾವಿದರಿಗೆ ಸರ್ಕಾರ ಹೆಚ್ಚು ಅವಕಾಶ ಕಲ್ಪಿಸಲಿ

ಸಮ್ಮಾನ
ಧರ್ಮಕಾರ್ಯ ನಿರತೆ ತುಮಕೂರಿನ ಶಾಂತಲಾ ಅಜಿತ್‌ ಕುಮಾರ್‌ ಅವರನ್ನು ಭಟ್ಟಾರಕ ಸ್ವಾಮೀಜಿ ಸಮ್ಮಾನಿಸಿದರು. ಜೈನ್‌ ಮಿಲನ್‌ ಮಾಜಿ ಅಧ್ಯಕ್ಷೆ ಶ್ವೇತಾ ಕೆ. ಸಮ್ಮಾನ ಪತ್ರ ವಾಚಿಸಿದರು. ಅಮೋಘ ಸಾಗರ ಮುನಿಗಳ ಮಾತೃಶ್ರೀ ಕನಕಲತಾ ಅರವಿಂದ, ಅಮರ ಕೀರ್ತಿ ಮುನಿಗಳ ಸಹೋದರಿ, ಮುನಿ ಮಹಾರಾಜರ
ವಾಸ್ತವ್ಯಕ್ಕಾಗಿ ತಮ್ಮ ನೂತನ ಗೃಹವನ್ನು ಒದಗಿಸಿರುವ ಬೆಳುವಾಯಿ ಶಂಕರ ಶೆಟ್ಟಿ, ಭರತನಾಟ್ಯ ಕಲಾವಿದೆ ಅನನ್ಯಾ ಅವರನ್ನು ಸ್ವಾಮೀಜಿ ಪುರಸ್ಕರಿಸಿದರು.

ಮೊಕ್ತೇಸರರಾದ ಪಟ್ಣಶೆಟ್ಟಿ ಸುದೇಶ್‌ ಕುಮಾರ್‌, ಬಿ. ದಿನೇಶ್‌ ಕುಮಾರ್‌, ಆದರ್ಶ ಅರಮನೆ, ಸ್ವಾಗತ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ, ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯಕುಮಾರ್‌, ರಾಜವರ್ಮ ಬೈಲಂಗಡಿ, ಧನಕೀರ್ತಿ ಬಲಿಪ, ಶಾಂತಿರಾಜ ಕಂಬಳಿ, ಶೈಲೇಂದ್ರ ಕುಮಾರ್‌, ಮಹೇಂದ್ರ ವರ್ಮ ಜೈನ್‌ ಪಾಲ್ಗೊಂಡಿದ್ದರು.

ಭಟ್ಟಾರಕಶ್ರೀಗಳ ಹಿರಿತನದಲ್ಲಿ ಕಲಿಕುಂಡಾರಾಧನೆ ಜರಗಿತು. ಶೈಲೇಂದ್ರ ಕುಮಾರ್‌ ಸ್ವಾಗತಿಸಿದರು.  ಡಾ| ಪ್ರಭಾತ್‌ ಕುಮಾರ್‌ ಬಿ. ನಿರೂಪಿಸಿದರು. ಜೈನ್‌ಮಿಲನ್‌ ಅಧ್ಯಕ್ಷ ನಮಿರಾಜ ಜೈನ್‌ ವಂದಿಸಿದರು.

 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.