ಹೊಸದೊಂದು ವರುಷವಿದು ಮತ್ತೆ ಯುಗಾದಿ


Team Udayavani, Mar 22, 2023, 12:00 PM IST

yugadi-article

ಚೈತ್ರ ಮಾಸದ ಮೊದಲದಿನ ಅಥವಾ ವರ್ಷದ ಮೊದಲ ದಿನವಾಗಿ ಆಚರಿಸಲ್ಪಡುವ ಹಿಂದೂಗಳ ಹಬ್ಬವೇ ಈ ಯುಗಾದಿಯಾಗಿದೆ. ಹಬ್ಬವೆಂದರೆ ಹರುಷ, ಹಬ್ಬವೆಂದರೆ ನಗು, ಹಬ್ಬವೆಂದರೆ ಕೂಡುಕುಟುಂಬ ಒಟ್ಟಾಗಿ ಸಂಭ್ರಮಿಸುವುದು. ಒಟ್ಟಾರೆ ಹಬ್ಬವೆಂದರೆ ಸಿಹಿ-ಸವಿಯೆನ್ನಬಹುದು. ಪ್ರಾದೇಶಿಕ ಹಬ್ಬಗಳನ್ನು ಆಯಾ ಪ್ರದೇಶದ ಸಂಸ್ಕೃತಿಯಂತೆ ವಿಧವಾಗಿ ಆಚರಿಸಲಾಗುತ್ತದೆ. ಯುಗಾದಿಯ ಆಚರಣೆ ಭಾರತದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಲ್ಲಿ ಬಹಳಷ್ಟು ಸಂಭ್ರಮದಲ್ಲಿ ಆಚರಿಸಲಾಗುತ್ತದೆ.

ಮಾವಿನ ತೋರಣ ಕಟ್ಟುವುದು, ಕಲಶವನ್ನು ಇಡುವುದು ಜತೆಗೆ ಹೋಳಿಗೆ ಹಾಗೂ ಪಚ್ಚಡಿ ಎನ್ನುವ ಖಾದ್ಯದ ತಯಾರಿಕೆಯು ಈ ದಿನ ನಡೆಯುತ್ತದೆ. ಪಚ್ಚಡಿಯು ಸಿಹಿ, ಖಾರ,ಹುಳಿ, ಕಹಿಯ ಮಿಶ್ರಣವಾಗಿದ್ದು ಸಂತೋಷವನ್ನು, ಜೀವನೋತ್ಸಹಾವನ್ನು, ಕಷ್ಟವೊದಗುವ ಬಗೆಯನ್ನು ಜತೆಗೆ ಅದನ್ನು ಸಮರ್ಥವಾಗಿ ಎದುರಿಸುವ ಬಗೆಯನ್ನೂ ಸಂಕೇತಿಸುತ್ತದೆ. ಇದೊಂದು ಖಾದ್ಯವು ಜೀವನವನ್ನೇ ಪ್ರತಿನಿಧಿಸುತ್ತದೆ.

ವಸಂತ ಋತುವಿನಾಗಮನದ ಜತೆಗೆ ಪ್ರಕೃತಿಯಲ್ಲಿ ಅನೇಕ ಬದಲಾವಣೆಗಳು ಮನುಷ್ಯನ ಜೀವನದಲ್ಲೂ ಹೊಸತನ ತುಂಬಿಸುವ ಬಗೆಗೆ ಮುಖಮಾಡುತ್ತದೆ. ಜನರು ಕಷ್ಟವ ಕಳೆದು ಸುಖದ, ಸಮೃದ್ಧಿಯ ಬದುಕಿನ ನಿರೀಕ್ಷೆಯಲ್ಲಿ ಇರುತ್ತಾರೆ.

ಈ ಹಬ್ಬದ ಇತಿಹಾಸವನ್ನು ತಿಳಿಯಲು ಹೊರಟರೆ ಹಲವು ಬಗೆಯಲ್ಲುಂಟು.

ಬ್ರಹ್ಮನು ಬ್ರಹ್ಮಾಂಡವನ್ನು ಸೃಷ್ಟಿಸಿದ ದಿನವಿದಾದರೆ, ದಕ್ಷಿಣ ಭಾರತವನ್ನಾಳಿದ ಶಾಲಿವಾಹನನು ಇದೇ ದಿನದಂದು ಸಿಂಹಾಸನರೂಢನಾದ ಕಥೆಯೂ ಉಂಟು. ಶ್ರೀರಾಮಚಂದ್ರ ಅಯೋಧ್ಯೆಯಲ್ಲಿ ರಾಮರಾಜ್ಯವನ್ನು ಸ್ಥಾಪಿಸದ ದಿನವೂ ಇದೇ ಎಂಬ ಪ್ರತೀತಿಯಿದೆ.

ಹಬ್ಬದಾಚರಣೆಗಿಲ್ಲಿ ಬಡವ-ಬಲ್ಲಿದನೆನ್ನದೆ ಎಲ್ಲರೂ ಶುಭದಿನವೆಂದು ಹೊಸಕಾರ್ಯವನ್ನು ಇದೇ ದಿನ ಆರಂಭಿಸುವರು. ಬೇವು-ಬೆಲ್ಲ ನೀರಿನ ಸ್ನಾನ, ಬೇವು-ಬೆಲ್ಲದ ಸೇವನೆ ಜತೆಗೆ ಹೊಸಬಟ್ಟೆ ಈ ದಿನದ ಇನ್ನೊಂದು ಪ್ರಮುಖ ವಿಶೇಷತೆಯಾಗಿದೆ. ಬೆಲ್ಲ ಸಿಹಿನೀಡಿದರೆ, ಬೇವಿನ ಕಹಿ ಆರೋಗ್ಯವನ್ನೇ ನೀಡುತ್ತದೆ. ಎಲ್ಲದುದರ ಸ್ವೀಕಾರದಲ್ಲೂ ಸಮಾನತೆಯಿರಲಿ ಎನ್ನುವುದೇ ಈ ಹಬ್ಬದ ಆಶಯವಾಗಿದೆ.

ಈ ಹಬ್ಬದ ಮಾರನೇ ದಿನ “ವರ್ಷ ತೊಡಕು’ ಆಚರಿಸಲಾಗುತ್ತದೆ. ದೇವರಲ್ಲೊಂದು ಕೋರಿಕೆಯ ಮೂಲಕ ಸುಖ-ಶಾಂತಿ ಕೇಳಿಕೊಳ್ಳಲು ಇದೊಂದು ದಿನವಷ್ಟೇ. ಆ ದಿನ ಏನು ದೊರಕುವುದೋ ವರ್ಷಪೂರ್ತಿ ಅದೇ ಹಸನಾಗಿರುತ್ತದೆ ಎನ್ನುವುದು ಪೂರ್ವಜರ ನಂಬಿಕೆಯಾಗಿದೆ.

ಪ್ರಕೃತಿಯು ಹಳೆಯದೆಲ್ಲವ ಕಳೆದು ಮತ್ತೆ ಹಸುರಾಗುವ ಕಾಲದ ಆರಂಭದ ದಿನವಿದು. ಅದನ್ನು ಸಡಗರದಾಚರಣೆಯ ಮೂಲಕ ಆಹ್ವಾನಿಸಿಕೊಂಡು ಖುಷಿಪಡುವುದಿಲ್ಲಿ ಮುಖ್ಯವಾಗುತ್ತದೆ. ಹಳೆಯ ಕಹಿಯೆಲ್ಲವ ಮರೆತು ಮನೆಯ ಮಕ್ಕಳು/ಹಿರಿಯರು ಹಲವು ನೆರೆಹೊರೆಯವರಿಗೆ ಬೇವು-ಬೆಲ್ಲವ ಹಂಚುವ ಮೂಲಕ ಮತ್ತೆ ಅಲ್ಲಿ ಸಾಮರಸ್ಯ ನೆಲೆಸುತ್ತದೆ. ನೆಮ್ಮದಿಯ ಜತೆಗೆ ಸಂತಸ ನೂರ್ಮಡಿಯಾಗುತ್ತದೆ.

ಹಸುರು ಮರಗಳ ಚಿಗುರು ಆರಂಭವಾಗುವ ಈ ಪರ್ವಕಾಲದಲ್ಲಿ ಒಡೆದ ಮನಸ್ಸುಗಳೂ ಬೆಸೆಯಲಿ, ಕಷ್ಟವ ಎದುರಿಸಲು ಶಕ್ತಿ ದೊರಕಲಿ, ಮನ-ಮನದ ನಡುವೆಯಿರುವ ಅಹಂಕಾರ ಅಳಿಯಲಿ, ಪ್ರೀತಿ ನೆಲೆಸಲಿ, ಆರೋಗ್ಯ ಉಳಿಯಲಿ ಎಂಬ ಸದಾಶಯವನ್ನೊಳಗೊಂಡ ಹಬ್ಬದ ಕುರಿತು ಮುಂದಿನ ಪೀಳಿಗೆಗೂ ತಿಳಿಸಿ ಹೇಳುವುದು ನಮ್ಮ ಕರ್ತವ್ಯವಾಗಿದೆ.

„ ವಿನಯಾ ಕೌಂಜೂರು

ಟಾಪ್ ನ್ಯೂಸ್

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT

1-sadas

Haryana ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ 10 ಶಾರ್ಪ್ ಶೂಟರ್ ಗಳ ಬಂಧನ

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

b y vijayendra

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

tdy-18

ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಅತ್ಯಗತ್ಯ

tdy-23

ಮೈ ಮನ ಸೆಳೆಯುವ ದೂದ್‌ಸಾಗರ್‌

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT