ಸಾಂಸ್ಕೃತಿಕ ನಗರಿಯಲ್ಲಿ ‘ಯುವ ಸಂಭ್ರಮ’
Team Udayavani, Mar 11, 2021, 1:07 PM IST
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ಯುವರತ್ನ’ ಚಿತ್ರದ ಪ್ರಚಾರ ಕಾರ್ಯಗಳು ಭರದಿಂದ ಸಾಗಿದೆ. ಸದ್ಯ “ಯುವರತ್ನ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ಗೆ ಸಿದ್ಧತೆ ಮಾಡಿಕೊಂಡಿರುವ ಚಿತ್ರತಂಡ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ “ಯುವ ಸಂಭ್ರಮ’ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಸುತ್ತಿದೆ.
ಇದೇ ಮಾರ್ಚ್ 20ರಂದು ಮೈಸೂರಿನ ಮಹಾರಾಜ ಕಾಲೇಜ್ ಗ್ರೌಂಡ್ನಲ್ಲಿ ನಡೆಯಲಿರುವ “ಯುವ ಸಂಭ್ರಮ’ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ “ಯುವರತ್ನ’ ಚಿತ್ರದ ಕಲಾವಿದರು, ತಂತ್ರಜ್ಞರು ಸೇರಿದಂತೆ ಇಡೀ ಚಿತ್ರತಂಡ ಹಾಜರಾಗಲಿದೆ.
ಇದನ್ನೂ ಓದಿ:ಆ್ಯಕ್ಷನ್ ಪ್ಯಾಕ್ ಅರ್ಜುನ್ ಗೌಡ: ಅಖಾಡಕ್ಕೆ ಸಿದ್ದ
ಸಂತೋಷ್ ಆನಂದ್ ರಾಮ್ ನಿರ್ದೇಶನದ ‘ಯುವರತ್ನ’ ಚಿತ್ರಕ್ಕೆ ಹೊಂಬಾಳೆ ಫಿಲಂ ಬ್ಯಾನರ್ ನಡಿ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಪುನೀತ್ ರಾಜಕುಮಾರ್ ಗೆ ಜೋಡಿಯಾಗಿ ಸಯ್ಯೇಶಾ ಕಾಣಿಸಿಕೊಂಡಿದ್ದು, ಉಳಿದಂತೆ ಧನಂಜಯ್, ಸೋನು ಗೌಡ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರ ಎಪ್ರಿಲ್ 1ರಂದು ತೆರೆ ಕಾಣಲಿದೆ.