ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

ಝೈದ್ ಗೆ ಜಯತೀರ್ಥ ರವರು ತಂದ ಬನಾರಸ್ ನ ಪ್ರೇಮಕಥೆ ವರವಾಗಿ ಲಭಿಸಿದೆ ಎನ್ನಬಹುದು.

Team Udayavani, Jul 6, 2022, 1:11 PM IST

ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

ಬೆಂಗಳೂರು: ಕನ್ನಡವೂ ಸೇರಿ ಪಂಚ ಭಾಷೆಯಲ್ಲಿ ಏಕಕಾಲದಲ್ಲಿ ತಯಾರಾಗ್ತಿರುವ ಬನಾರಸ್ ಚಿತ್ರಕ್ಕೆ ನಿರ್ದೇಶಕ ಜಯತೀರ್ಥ ಸಾರಥ್ಯ ವಹಿಸಿಕೊಂಡಿದ್ದಾರೆ. ಟೈಟಲ್, ಮೋಷನ್ ಪೋಸ್ಟರ್ ಹಾಗೂ ಇತ್ತೀಚಿಗಷ್ಟೇ ರಿಲೀಸ್ ಆಗಿರೋ ಮಾಯಗಂಗೆ ವೀಡಿಯೋ ಸಾಂಗ್ ಕೂಡಾ ಪಂಚ ಭಾಷೆಗಳಲ್ಲೂ ಚಿತ್ರದ ಮೇಲಿನ ನಿರೀಕ್ಷೆಗಳನ್ನ ಹೆಚ್ಚಿಸುತ್ತಿದೆ.

ಈ ಮೂಲಕ ಈ ಪ್ಯಾನ್ ಇಂಡಿಯಾ ಸಿನೆಮಾ ಹೊಸದೊಂದು ದಾಖಲೆಯನ್ನು ಸೃಷ್ಟಿಸೋದು ಪಕ್ಕಾ ಅನ್ನುವ ಮಾತುಗಳೂ ಜೋರಾಗಿಯೇ ಕೇಳಿ ಬರ್ತಿದೆ. ಈ ಚಿತ್ರದ ಮೂಲಕ ಭಾರತೀಯ ಚಿತ್ರರಂಗಕ್ಕೆ ಸ್ಮಾರ್ಟ್ ಹೀರೋ ಪರಿಚಯವೂ ಆಗ್ತಿದೆ.

ಹೌದು ಬನಾರಸ್ ಚಿತ್ರದ ನಾಯಕ ಝೈದ್ ಖಾನ್ ಈಗ ಚಿರಪರಿಚಿತ. ಒಂದೇ ಸಿನೆಮಾ ಅದರಲ್ಲೂ ಮೊದಲ ಪ್ರಯತ್ನದಲ್ಲೇ ಮೆಚ್ಚುಗೆ ಗಳಿಸಿರುವ ಈ ಹುಡುಗ ಇಡೀ ಚಿತ್ರರಂಗಕ್ಕೆ ಮುಂದೊಂದು ದಿನ ಭರವಸೆಯ ನಾಯಕನ ಪಟ್ಟಿಗೆ ಸೇರೋ ಎಲ್ಲಾ ಲಕ್ಷಣಗಳೂ ಎದ್ದು ಕಾಣುತ್ತಿವೆ. ಈ ಸಿನೆಮಾದಿಂದ ಬಿಡುಗಡೆಯಾದ ಮಾಯಗಂಗೆ ಹಾಡೇ ಜೈದ್ ನಟನಾ ರಂಗಕ್ಕೆ ಬರುವ ಮುಂಚೆ ಮಾಡಿಕೊಂಡ ಸಕಲ ತಯಾರಿಗಳ ಪಟ್ಟಿಯನ್ನ ಕಣ್ಣ ಮುಂದೆ ತರಿಸುತ್ತದೆ. ಈ ಬಗ್ಗೆ ಕನ್ನಡ ಮಾತ್ರವಲ್ಲದೇ, ಎಲ್ಲೆಡೆ ಝೈದ್ ಖಾನ್ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತಮ್ಮಿಷ್ಟದ ಅನೇಕ ನಟರ ಹಿಂದಿನ ಶ್ರಮದ ಬಗ್ಗೆ ಗಮನ ಹರಿಸಿ, ತಾನೂ ಅವರಂತೆ ಬಣ್ಣದ ಲೋಕದಲ್ಲಿ ಮಿಂಚಬೇಕಾದರೆ ಏನೆಲ್ಲ ಸಕಲ ಸಿದ್ದತೆಗಳು ಬೇಕೂ ಅದನ್ನೆಲ್ಲಾ ಈ ನಟ ಮೊದಲಿನಿಂದಲೇ ಅಭ್ಯಸಿಸುತ್ತಿದ್ದರು. ತಾನು ಚಿತ್ರರಂಗದಲ್ಲಿ ನೆಲೆಯೂರಬೇಕಾದರೆ, ನಟನೆ, ಡ್ಯಾನ್ಸ್, ಫೈಟ್, ಸೇರಿದಂತೆ ಹಲವಾರು ಪ್ರಕ್ರಿಯೆ ಗಳಲ್ಲಿ ತಮ್ಮನ್ನು ತಾವು ಪಳಗಿಸಿಕೊಂಡಿದ್ದರ ಫಲವೇ ಝೈದ್ ಇಂದು ಒಂದೊಳ್ಳೆ ಭರವಸೆಯ ನಟನಾಗಿ ಹೊರಹೊಮ್ಮುವ ಲಕ್ಷಣಗಳು ಮೊದಲ ಪ್ರಯತ್ನದ ಬನಾರಸ್ ನಲ್ಲಿಯೇ ಮೂಡಿಬಂದಿದೆ.

ಹಲವು ತಯಾರಿಗಳೊಂದಿಗೆ ಚಿತ್ರ ಬದುಕಿಗೆ ಮುನ್ನುಡಿ ಬರೆಯಲು ತಪಸ್ಸು ಮಾಡಿ ಕಾದಿದ್ದ ಝೈದ್ ಗೆ ಜಯತೀರ್ಥ ರವರು ತಂದ ಬನಾರಸ್ ನ ಪ್ರೇಮಕಥೆ ವರವಾಗಿ ಲಭಿಸಿದೆ ಎನ್ನಬಹುದು. ಮಾಯಗಂಗೆ ಹಾಡಿನಲ್ಲಿ ದೇವರೂರಿನ ದಾರಿಹೋಕನಾಗಿಸುವ ಈ ಹಾಡು ಝದ್ ಖಾನ್ ಅವರನ್ನ ಲವರ್ ಬಾಯ್ ಆಗಿ ಸ್ವೀಕರಿಸಿದೆ. ಪ್ರೇಮದಲ್ಲಿ ಮಿಂದೆಳಿಸುವ ಹಾಡಿನಲ್ಲೇ ಹುಡುಗ, ಹುಡುಗೀರ ದಿಲ್ ಕದ್ದಿರೋ ಈ ನವನಟನ ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಈಗಾಗಲೇ ದೊಡ್ಡ ಅಭಿಮಾನಿ ಬಳಗವೂ ಸೃಷ್ಟಿಯಾಗಿದೆ. ಈ ಮೂಲಕ ಝೈದ್ ಖಾನ್ ಎಂಬ ನವನಾಯಕ ಹೀರೋ ಆಗಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳುತ್ತಾರೆಂಬ ಮಾತುಗಳೂ ವ್ಯಾಪಕವಾಗಿಯೇ ಕೇಳಿ ಬರುವ ಜೊತೆಗೆ ಬನಾರಸ್ ನ ಮೇಲೆಯೂ ಭರವಸೆ ಹೆಚ್ಚಾಗಿದೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.