ಘನತ್ಯಾಜ್ಯ ವಿಲೇವಾರಿಗೆ ರಾಯಚೂರು ಜಿಪಂನಿಂದ ವಾಹನ

ಡ್ರೈವರ್‌ಗಳ ಕೊರತೆ | ಕೆಲ ಕಡೆ ಕಚೇರಿ ಸಿಬ್ಬಂದಿಗಳಿಂದಲೇ ನಿರ್ವಹಣೆ | ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗದ ಸಮಸ್ಯೆ

Team Udayavani, Feb 6, 2023, 12:26 PM IST

wAste

ದೇವದುರ್ಗ: ತಾಲೂಕಿನ ಮೂವತ್ತೆರಡು ಗ್ರಾಪಂ ವ್ಯಾಪ್ತಿಯ ಮನೆ ಮನೆಯ ಹಸಿ, ಒಣ ಕಸ ಘನತ್ಯಾಜ್ಯ ವಿಲೇವಾರಿ ಮಾಡಲು ಜಿಲ್ಲಾ ಪಂಚಾಯಿತಿ ವತಿಯಿಂದ ವಾಹನಗಳನ್ನು ನೀಡಲಾಗಿದೆ. ಡ್ರೈವರ್‌ ಕೊರತೆ ಹಿನ್ನೆಲೆಯಲ್ಲಿ ಬಹುತೇಕ ಕಡೆ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಹಸಿ, ಒಣ ಕಸ ಸಂಗ್ರಹಿಸಲು ಮನೆ ಮನೆಗೆ ಗ್ರಾಪಂ ವತಿಯಿಂದ ಬಕೆಟ್‌ ನೀಡಲಾಗಿದೆ. ಗ್ರಾಪಂ ಅಧಿಕಾರಿಗಳಿಗೆ ಕಸ ವಿಲೇವಾರಿಯದ್ದೇ ಚಿಂತೆ ಶುರುವಾಗಿದೆ.

ಜಾಗದ ಸಮಸ್ಯೆ: ಬಹುತೇಕ ಗ್ರಾಪಂ ವ್ಯಾಪ್ತಿಯ ಹಸಿ, ಒಣ ಕಸ ವಿಲೇವಾರಿ ಮಾಡಲು ಜಾಗದ ಸಮಸ್ಯೆ ಹಿನ್ನೆಲೆಯಲ್ಲಿ ವಾಹನಗಳು ಓಡಾಡುತ್ತಿಲ್ಲ. ಗೂಗಲ್‌, ಎಸ್‌.ಸಿದ್ದಪೂರು, ಪಲಕನಮರಡಿ, ಜೇರಬಂಡಿ, ರಾಮದುರ್ಗ ಸೇರಿದಂತೆ ಕಸ ವಿಲೇವಾರಿ ಘಟಕ ನಿರ್ಮಿಸಲು ಜಾಗದ ಸಮಸ್ಯೆ ಉಂಟಾಗಿದೆ. ಗ್ರಾಪಂದಿಂದ ಜಾಗ ನೀಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ತಿಂಗಳಾದರೂ ಇಲ್ಲಿವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ವಾಹನಗಳು ಓಡಾಡುತ್ತಿಲ್ಲ. ಹಸಿ, ಒಣ ಕಸ ವಿಲೇವಾರಿ ಆಗದೇ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ.

ಸದಸ್ಯರಿಗೆ ತರಬೇತಿ: ಎನ್‌ಆರ್‌ಎಲ್‌ಎಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಸ್ವಹಾಯ ಗುಂಪುಗಳ ಸದಸ್ಯರಿಗೆ ಜಿಪಂದಿಂದ ವಾರಗಳ ಕಾಲ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಸದಸ್ಯರು ಮನೆಯ ಹಸಿ, ಒಣ ಕಸ ವಾಹನಗಳಲ್ಲಿ ಸಂಗ್ರಹಿಸಿ ವಿಲೇವಾರಿ ಘಟಕಕ್ಕೆ ತೆಗೆದುಕೊಂಡು ಹೋಗಬೇಕು. ಬಹುತೇಕ ಗ್ರಾಪಂಗಳಲ್ಲಿ ಗುಂಪಿನ ಸದಸ್ಯರು ಸ್ಪಂದನೆ ಮಾಡದೇ ಇದ್ದುದರಿಂದ ಕಸ ವಿಲೇವಾರಿ ಸವಾಲಾಗಿದೆ.

ವಿಲೇವಾರಿ ಘಟಕ ನಿರ್ಮಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಜಾಗದ ಸಮಸ್ಯೆ ಇಲ್ಲದ ಕಡೆ ಕಸ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ನಾಗಡದಿನ್ನಿ, ಮಲ್ಲೇದೇವರಗುಡ್ಡ, ಮಸರಕಲ್‌, ಜಾ.ಜಾಡಲದಿನ್ನಿ ಸೇರಿ ಕಾಮಗಾರಿ ಪ್ರಗತಿಯಲ್ಲಿವೆ. 10 ಕ್ಕೂ ಅ ಧಿಕ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಕಸ ವಿಲೇವಾರಿ ಮಾಡುವ ಸಿಬ್ಬಂದಿಗಳ ಕೊರತೆ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಘಟಕಗಳು ನಿರುಪಯುಕ್ತವಾಗಿವೆ.

ಕ‌ಸ ವಿಲೇವಾರಿ ಮಾಡಲು ಡ್ರೈವರ್‌ ಕೊರತೆ ಇರುವ ಕಡೆ ಗ್ರಾಪಂ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಅಧಿ ಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹಲವೆಡೆ ಜಾಗ ನೀಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ- ಪಂಪಾಪತಿ ಹಿರೇಮಠ, ತಾಪಂ ಇಒ.

ಹಸಿ, ಒಣ ಕಸ ವಿಲೇವಾರಿ ಮಾಡಲು ಗ್ರಾಪಂಗೆ ನೀಡಿದ ವಾಹನಗಳು ಡ್ರೈವರ್‌ ಇಲ್ಲದೇ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಇಂತಹ ಸಮಸ್ಯೆ ಕುರಿತು ಮೇಲಧಿ ಕಾರಿಗಳು ಕ್ರಮ ವಹಿಸಬೇಕು.-ವೆಂಕಟೇಶ ಕ್ಯಾದಿಗೇರಾ, ಕರವೇ ತಾಲೂಕಾಧ್ಯಕ್ಷ

ಡ್ರೈವರ್‌ಗಳ ಕೊರತೆ: ಗ್ರಾಪಂ ವ್ಯಾಪ್ತಿಯ ಮನೆ ಮನೆಯ ಹಸಿ, ಒಣ ಕಸ ವಿಲೇವಾರಿ ಮಾಡಲು ಜಿಪಂಯಿಂದ ವಾಹನಗಳು ನೀಡಲಾಗಿದೆ. ಎನ್‌ಆರ್‌ಎಲ್‌ಎಂನಲ್ಲಿ ಕಾರ್ಯ ನಿರ್ವಹಿಸುವ ಸಸ್ವಹಾಯ ಗುಂಪುಗಳ ಸದಸ್ಯರು ಡ್ರೈವರ್‌ ನೇಮಕ ಮಾಡಬೇಕು. ಹಸಿ, ಒಣ ಕಸ ವಿಲೇವಾರಿ ಘಟಕದಲ್ಲಿ ಬೇರೆ ಬೇರೆ ಕಸ ಸಂಗ್ರಹಿಸಿ ಕಸ ಮಾರಾಟ ಬಂದ ಹಣದಲ್ಲಿ ಡ್ರೈವರ್‌ಗಳಿಗೆ ಸಂಬಳ ನೀಡಬೇಕು. ಹೀಗಾಗಿ ಬಹುತೇಕ ಗ್ರಾಪಂಗಳಲ್ಲಿ ಡ್ರೈವರ್‌ ಸಿಗದೇ ಇದ್ದುದರಿಂದ ವಾಹನಗಳು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಕೆಲ ಗ್ರಾಪಂಗಳಲ್ಲಿ ಸಿಬ್ಬಂದಿಗಳಿಗೆ ವಾಹನ ಚಲಾಯಿಸಲು ಬರುತ್ತಿರುವುದರಿಂದ ಅಂತಹ ಗ್ರಾಪಂಗಳಲ್ಲಿ ವಾಹನಗಳು ಓಡಾಡುತ್ತಿವೆ.

„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.