ಘನತ್ಯಾಜ್ಯ ವಿಲೇವಾರಿಗೆ ರಾಯಚೂರು ಜಿಪಂನಿಂದ ವಾಹನ

ಡ್ರೈವರ್‌ಗಳ ಕೊರತೆ | ಕೆಲ ಕಡೆ ಕಚೇರಿ ಸಿಬ್ಬಂದಿಗಳಿಂದಲೇ ನಿರ್ವಹಣೆ | ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗದ ಸಮಸ್ಯೆ

Team Udayavani, Feb 6, 2023, 12:26 PM IST

wAste

ದೇವದುರ್ಗ: ತಾಲೂಕಿನ ಮೂವತ್ತೆರಡು ಗ್ರಾಪಂ ವ್ಯಾಪ್ತಿಯ ಮನೆ ಮನೆಯ ಹಸಿ, ಒಣ ಕಸ ಘನತ್ಯಾಜ್ಯ ವಿಲೇವಾರಿ ಮಾಡಲು ಜಿಲ್ಲಾ ಪಂಚಾಯಿತಿ ವತಿಯಿಂದ ವಾಹನಗಳನ್ನು ನೀಡಲಾಗಿದೆ. ಡ್ರೈವರ್‌ ಕೊರತೆ ಹಿನ್ನೆಲೆಯಲ್ಲಿ ಬಹುತೇಕ ಕಡೆ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಹಸಿ, ಒಣ ಕಸ ಸಂಗ್ರಹಿಸಲು ಮನೆ ಮನೆಗೆ ಗ್ರಾಪಂ ವತಿಯಿಂದ ಬಕೆಟ್‌ ನೀಡಲಾಗಿದೆ. ಗ್ರಾಪಂ ಅಧಿಕಾರಿಗಳಿಗೆ ಕಸ ವಿಲೇವಾರಿಯದ್ದೇ ಚಿಂತೆ ಶುರುವಾಗಿದೆ.

ಜಾಗದ ಸಮಸ್ಯೆ: ಬಹುತೇಕ ಗ್ರಾಪಂ ವ್ಯಾಪ್ತಿಯ ಹಸಿ, ಒಣ ಕಸ ವಿಲೇವಾರಿ ಮಾಡಲು ಜಾಗದ ಸಮಸ್ಯೆ ಹಿನ್ನೆಲೆಯಲ್ಲಿ ವಾಹನಗಳು ಓಡಾಡುತ್ತಿಲ್ಲ. ಗೂಗಲ್‌, ಎಸ್‌.ಸಿದ್ದಪೂರು, ಪಲಕನಮರಡಿ, ಜೇರಬಂಡಿ, ರಾಮದುರ್ಗ ಸೇರಿದಂತೆ ಕಸ ವಿಲೇವಾರಿ ಘಟಕ ನಿರ್ಮಿಸಲು ಜಾಗದ ಸಮಸ್ಯೆ ಉಂಟಾಗಿದೆ. ಗ್ರಾಪಂದಿಂದ ಜಾಗ ನೀಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ತಿಂಗಳಾದರೂ ಇಲ್ಲಿವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ವಾಹನಗಳು ಓಡಾಡುತ್ತಿಲ್ಲ. ಹಸಿ, ಒಣ ಕಸ ವಿಲೇವಾರಿ ಆಗದೇ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ.

ಸದಸ್ಯರಿಗೆ ತರಬೇತಿ: ಎನ್‌ಆರ್‌ಎಲ್‌ಎಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಸ್ವಹಾಯ ಗುಂಪುಗಳ ಸದಸ್ಯರಿಗೆ ಜಿಪಂದಿಂದ ವಾರಗಳ ಕಾಲ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಸದಸ್ಯರು ಮನೆಯ ಹಸಿ, ಒಣ ಕಸ ವಾಹನಗಳಲ್ಲಿ ಸಂಗ್ರಹಿಸಿ ವಿಲೇವಾರಿ ಘಟಕಕ್ಕೆ ತೆಗೆದುಕೊಂಡು ಹೋಗಬೇಕು. ಬಹುತೇಕ ಗ್ರಾಪಂಗಳಲ್ಲಿ ಗುಂಪಿನ ಸದಸ್ಯರು ಸ್ಪಂದನೆ ಮಾಡದೇ ಇದ್ದುದರಿಂದ ಕಸ ವಿಲೇವಾರಿ ಸವಾಲಾಗಿದೆ.

ವಿಲೇವಾರಿ ಘಟಕ ನಿರ್ಮಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಜಾಗದ ಸಮಸ್ಯೆ ಇಲ್ಲದ ಕಡೆ ಕಸ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ನಾಗಡದಿನ್ನಿ, ಮಲ್ಲೇದೇವರಗುಡ್ಡ, ಮಸರಕಲ್‌, ಜಾ.ಜಾಡಲದಿನ್ನಿ ಸೇರಿ ಕಾಮಗಾರಿ ಪ್ರಗತಿಯಲ್ಲಿವೆ. 10 ಕ್ಕೂ ಅ ಧಿಕ ಗ್ರಾಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಿಸಲಾಗಿದೆ. ಕಸ ವಿಲೇವಾರಿ ಮಾಡುವ ಸಿಬ್ಬಂದಿಗಳ ಕೊರತೆ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಘಟಕಗಳು ನಿರುಪಯುಕ್ತವಾಗಿವೆ.

ಕ‌ಸ ವಿಲೇವಾರಿ ಮಾಡಲು ಡ್ರೈವರ್‌ ಕೊರತೆ ಇರುವ ಕಡೆ ಗ್ರಾಪಂ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಅಧಿ ಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹಲವೆಡೆ ಜಾಗ ನೀಡುವಂತೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ- ಪಂಪಾಪತಿ ಹಿರೇಮಠ, ತಾಪಂ ಇಒ.

ಹಸಿ, ಒಣ ಕಸ ವಿಲೇವಾರಿ ಮಾಡಲು ಗ್ರಾಪಂಗೆ ನೀಡಿದ ವಾಹನಗಳು ಡ್ರೈವರ್‌ ಇಲ್ಲದೇ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಇಂತಹ ಸಮಸ್ಯೆ ಕುರಿತು ಮೇಲಧಿ ಕಾರಿಗಳು ಕ್ರಮ ವಹಿಸಬೇಕು.-ವೆಂಕಟೇಶ ಕ್ಯಾದಿಗೇರಾ, ಕರವೇ ತಾಲೂಕಾಧ್ಯಕ್ಷ

ಡ್ರೈವರ್‌ಗಳ ಕೊರತೆ: ಗ್ರಾಪಂ ವ್ಯಾಪ್ತಿಯ ಮನೆ ಮನೆಯ ಹಸಿ, ಒಣ ಕಸ ವಿಲೇವಾರಿ ಮಾಡಲು ಜಿಪಂಯಿಂದ ವಾಹನಗಳು ನೀಡಲಾಗಿದೆ. ಎನ್‌ಆರ್‌ಎಲ್‌ಎಂನಲ್ಲಿ ಕಾರ್ಯ ನಿರ್ವಹಿಸುವ ಸಸ್ವಹಾಯ ಗುಂಪುಗಳ ಸದಸ್ಯರು ಡ್ರೈವರ್‌ ನೇಮಕ ಮಾಡಬೇಕು. ಹಸಿ, ಒಣ ಕಸ ವಿಲೇವಾರಿ ಘಟಕದಲ್ಲಿ ಬೇರೆ ಬೇರೆ ಕಸ ಸಂಗ್ರಹಿಸಿ ಕಸ ಮಾರಾಟ ಬಂದ ಹಣದಲ್ಲಿ ಡ್ರೈವರ್‌ಗಳಿಗೆ ಸಂಬಳ ನೀಡಬೇಕು. ಹೀಗಾಗಿ ಬಹುತೇಕ ಗ್ರಾಪಂಗಳಲ್ಲಿ ಡ್ರೈವರ್‌ ಸಿಗದೇ ಇದ್ದುದರಿಂದ ವಾಹನಗಳು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದೆ. ಕೆಲ ಗ್ರಾಪಂಗಳಲ್ಲಿ ಸಿಬ್ಬಂದಿಗಳಿಗೆ ವಾಹನ ಚಲಾಯಿಸಲು ಬರುತ್ತಿರುವುದರಿಂದ ಅಂತಹ ಗ್ರಾಪಂಗಳಲ್ಲಿ ವಾಹನಗಳು ಓಡಾಡುತ್ತಿವೆ.

„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan, Srujan Lokesh visit Mantralaya

ಮಂತ್ರಾಲಯಕ್ಕೆ ದರ್ಶನ್, ಸೃಜನ್ ಲೋಕೇಶ್ ಭೇಟಿ

tdy-11

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ

amit shah

ಮಾ.24ಕ್ಕೆ ರಾಯಚೂರಿಗೆ ಅಮಿತ್ ಶಾ ಭೇಟಿ; 4100 ಕೋಟಿ ರೂ ವೆಚ್ಚದ ಯೋಜನೆಗಳಿಗೆ ಚಾಲನೆ

koli 2

ಸ್ವಾವಲಂಬಿ ಬದುಕು ಕಟ್ಟಿಕೊಂಡ ಮಹಿಳೆಯರು

1-sadsad-asd

ಡಬಲ್ ಇಂಜಿನ್ ಸರಕಾರಕ್ಕೆ ಗುಂಡಿಗೆ ಜಾಸ್ತಿ;ಹಾಗಾಗಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ:ಶ್ರೀರಾಮುಲು

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.