ಐಪಿಎಲ್ ನಲ್ಲಿ ಆಡುತ್ತಿರುವ ತನ್ನ ದೇಶದ ಆಟಗಾರರಿಗೆ ಶಾಕ್ ನೀಡಿದ ಆಸೀಸ್ ಸರ್ಕಾರ!


Team Udayavani, Apr 27, 2021, 3:34 PM IST

australian cricketers in IPL

ಮೆಲ್ಬೋರ್ನ್: ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿದಿನವೂ ಲಕ್ಷಾಂತರ ಮಂದಿಗೆ ಸೋಂಕು ದೃಢವಾಗುತ್ತಿದೆ. ಇದರ ಮಧ್ಯೆ ಸುರಕ್ಷತಾ ಕ್ರಮಗಳೊಂದಿಗೆ ಐಪಿಎಲ್ ನಡೆಯುತ್ತಿದ್ದರೂ, ಕೆಲವು ಆಸೀಸ್ ಆಟಗಾರರು ಮರಳಿ ತವರಿಗೆ ತೆರಳುತ್ತಿದ್ದಾರೆ. ಈ ಮಧ್ಯೆ ಐಪಿಎಲ್ ನಲ್ಲಿ ಆಡುತ್ತಿರುವ ತನ್ನ ಆಟಗಾರರಿಗೆ ಆಸ್ಟ್ರೇಲಿಯಾ ಸರ್ಕಾರ ವಿಶೇಷ ಸೂಚನೆ ನೀಡಿದೆ.

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಹಲವು ಆಸೀಸ್ ಆಟಗಾರರು ಆತಂಕಗೊಂಡಿದ್ದಾರೆ. ಐಪಿಎಲ್ ಮುಗಿದ ಬಳಿಕ ತಮಗೆ ತವರಿಗೆ ಮರಳಲು ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು ಎಂದು ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಕ್ರಿಸ್ ಲಿನ್ ಆಸೀಸ್ ಸರ್ಕಾರಕ್ಕೆ ಮನವಿ ಮಾಡಿದ್ದರು.

ಐಪಿಎಲ್ ನೊಂದಿಗೆ ಪ್ರತಿಯೊಬ್ಬ ಆಸೀಸ್ ಆಟಗಾರನ ಒಪ್ಪಂದವಾದಾಗಲೂ ಒಂದಷ್ಟು ಹಣ ಕ್ರಿಕೆಟ್ ಆಸ್ಟ್ರೇಲಿಯಾಗೆ ಹೋಗುತ್ತದೆ. ಹೀಗಾಗಿ ನಮ್ಮನ್ನು ಇಲ್ಲಿಂದ ಸುರಕ್ಷಿತವಾಗಿ ಕರೆದುಕೊಂಡಲು ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕು ಎಂದು ಲಿನ್ ಕೇಳಿಕೊಂಡಿದ್ದರು.

ಇದನ್ನೂ ಓದಿ:ಐಪಿಎಲ್‌ ಮೇಲೆ ಕೊರೊನಾ ಬೌನ್ಸರ್‌: ಬಿಸಿಸಿಐ ಹೇಳುತ್ತಿರುವುದೇನು?

ಆದರೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಈ ಪ್ರಸ್ತಾವನೆಯನ್ನು ನಿರಾಕರಿಸಿದ್ದಾರೆ. ಐಪಿಎಲ್ ನಲ್ಲಿ ಆಡುತ್ತಿರುವ ಆಟಗಾರರು ಮರಳಿ ಬರಲು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಇದು ಆಸೀಸ್ ರಾಷ್ಟ್ರೀಯ ತಂಡದ ಪ್ರವಾಸವಲ್ಲ. ಅವರು ಖಾಸಗಿಯಾಗಿ ಹೋಗಿದ್ದಾರೆ. ಅವರು ಅವರ ಸ್ವಂತ ಸೌಲಭ್ಯಗಳೊಂದಿಗೆ ಆಡುತ್ತಿದ್ದಾರೆ. ಹೀಗಾಗಿ ಮರಳಿ ಬರಲು ಅವರು ಸ್ವಂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಮಾರಿಸನ್ ಹೇಳಿದ್ದಾರೆ.

ಇದನ್ನೂ ಓದಿ:ಅದ್ಭುತ ಕ್ಯಾಚ್ ಹಿಡಿದರೂ ಟೀಕೆ ಎದುರಿಸಿದ ಪಂಜಾಬ್ ಕಿಂಗ್ಸ್ ನ ರವಿ ಬಿಷ್ಣೋಯ್

ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ ವೆಲ್, ಕ್ರಿಸ್ ಲಿನ್, ಪ್ಯಾಟ್ ಕಮಿನ್ಸ್ ಸೇರಿದಂತೆ ಹಲವು ಪ್ರಮುಖ ಆಸೀಸ್ ಆಟಗಾರರು ಸದ್ಯ ಐಪಿಎಲ್ ಆಡುತ್ತಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.